ಹೈನುಗಾರರಿಗೆ ಶುಭ ಸುದ್ದಿ ನೀಡಿದ ಸರಕಾರ, ಕೊನೆಗೂ ಪ್ರೋತ್ಸಾಹ ಧನವನ್ನು ಬಿಡುಗಡೆ ಗೊಳಿಸಿದ ರಾಜ್ಯಸರಕಾರ!

ಬೆಂಗಳೂರು: ಫೆಬ್ರುವರಿಯಿಂದ ಜುಲೈ 4 ರವರೆಗೆ ಹಾಲು ಉತ್ಪಾದಿಸುವ ರೈತರಿಗೆ ನೀಡಬೇಕಾಗಿದ್ದ ₹530 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಬಿಡುಗಡೆ ಮಾಡಿದೆ.

ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮಂಗಳವಾರ ವಿವಿಧ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರ ಜತೆ ವಿಡಿಯೊ ಸಂವಾದ ನಡೆಸಿ ಈ ವಿಷಯ ತಿಳಿಸಿದರು.

READ ALSO

ಕೋವಿಡ್‌-19 ನಿಂದಾಗಿ ಹಾಲು, ಮೊಸರಿನ ಮಾರಾಟ ಕುಸಿತವಾಗಿದೆ. ಪ್ರತಿ ದಿನ 10 ರಿಂದ 12 ಲಕ್ಷ ಲೀಟರ್‌ನಷ್ಟು ಹಾಲು‌ ಮಾರಾಟ ಕಡಿಮೆಯಾಗಿದೆ. ಕ್ಷೀರ ಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ಪ್ರತಿ ತಿಂಗಳು ವಿತರಿಸುತ್ತಿದ್ದ 2 ಸಾವಿರ ಮೆಟ್ರಿಕ್ ಟನ್‌ ಹಾಲಿನ ಪುಡಿ ಕೂಡ ಶಾಲೆಗಳು ಮುಚ್ಚಿದ್ದರಿಂದ ವಿಲೇವಾರಿ ಆಗುತ್ತಿಲ್ಲ ಎಂದು ಹೇಳಿದರು.

ಹಾಲು ಶೇಖರಣೆ ಹೆಚ್ಚಾಗಿದ್ದು, ಪ್ರತಿ ದಿನ 35 ಲಕ್ಷ ಲೀಟರ್‌ಗಳಷ್ಟು ಹೆಚ್ಚುವರಿ ಹಾಲನ್ನು ಹಾಲಿನ ಪುಡಿ ಮತ್ತು ಬೆಣ್ಣೆಯನ್ನಾಗಿ ಪರಿವರ್ತಿಸಲಾಗುತ್ತಿದೆ.