ಕರಾವಳಿಯ ಹಳ್ಳಿ ಹಳ್ಳಿಗಳಲ್ಲಿ ನೆಟ್ ವರ್ಕ್ ಸಮಸ್ಯೆಯ ಕೂಗು ಬಲು ಜೋರು! ಆನ್ ಲೈನ್ ಕ್ಲಾಸ್ ಗೂ ತಟ್ಟಿದ ನೆಟ್ ವರ್ಕ್ ಬ್ಯುಸಿ ಸಮಸ್ಯೆ

ಕರಾವಳಿಯ ಎಲ್ಲೆಡೆ ಹೋದರು ಅಲ್ಲಲ್ಲಿ ಕಾಣಸಿಗುವುದೇ ಟವರ್ ಗಳ ರಾಶಿ ರಾಶಿ, ಆದರೆ ಇವೆಲ್ಲವೂ ಯಾರಿಗೂ ಸಮಯಕ್ಕೆ ಸರಿಯಾಗಿ ಬಳಕೆ ಮಾಡಲು ಸಾಧ್ಯವಾಗದಷ್ಟು ಕಠಿಣವಾಗಿದೆ.

ಇತ್ತೀಚೆಗಂತೂ ಆನ್ ಲೈನ್ ಕ್ಲಾಸ್ ಗಳು ನಡೆಯುತ್ತಿದ್ದು ಮಕ್ಕಳ ಪರದಾಟಕ್ಕೆ ಕೊನೆಯೇ ಇಲ್ಲದಂತಾಗಿದೆ. ಮೊಬೈಲ್ ನಲ್ಲಿ ಸಿಗ್ನಲ್ ತೋರಿಸಿದರು ನೆಟ್ ಸರಿಯಾಗಿ ಸಿಗದೇ ತೊಂದರೆ ಪಡುವವರ ಸಂಕಷ್ಟ ಅಷ್ಟಿಷ್ಟಲ್ಲ.

ಮೂಲಭೂತ ಸೌಕರ್ಯಗಳ ಪಟ್ಟಿಯಲ್ಲಿ ಮೊಬೈಲ್ ನೆಟ್ ವರ್ಕ್ ಸೇರಿಸುವುದು ಸೂಕ್ತ:

ಮೂಲಭೂತ ಸೌಕರ್ಯದ ಕೊರತೆಯಲ್ಲಿ ಮೊಬೈಲ್ ನೆಟ್ ವರ್ಕ್ ನ್ನು ಸೇರಿಸಿದರೆ ಉತ್ತಮ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಮಾಡದೇ ಇರುವ ವ್ಯಕ್ತಿಗಳಿಲ್ಲ ಪ್ರತಿ ಕ್ಷಣಕ್ಷಣಕ್ಕೂ ಎಲ್ಲಾ ವಿಚಾರಗಳಿಗೂ ಮೊಬೈಲ್ ಬಳಕೆ ಕಡೆಗೆ ಜನತೆಯ ಒಲವು ಹೆಚ್ಚಾಗುತ್ತಿದ್ದು ಕುಡಿಯುವ ನೀರು, ರಸ್ತೆ ಸಂಪರ್ಕದಂತೆ ಮೂಲಭೂತ ಸೌಕರ್ಯಗಳ ಪಟ್ಟಿಯಲ್ಲಿ ಮೊಬೈಲ್ ನೆಟ್ ವರ್ಕ್ ಗಳನ್ನು ಸೇರಿಸುವ ಅನಿವಾರ್ಯತೆ ಇದೆ.

ಕಣಿವೆ ಪ್ರದೇಶ – ಘಾಟ್ ರಸ್ತೆಗಳಲ್ಲಿಯೂ ನೆಟ್ ವರ್ಕ್ ಗೆ ಬರ!

ಕರಾವಳಿಯನ್ನು ಸಂದಿಸುವ ಚಾರ್ಮಾಡಿ ಘಾಟ್, ಶಿರಾಡಿ ಘಾಟ್ ರಸ್ತೆಗಳಲ್ಲೂ ಹಲವಾರು ಕಿ.ಮೀ ವರೆಗೆ ನೆಟ್ ವರ್ಕ್ ಮಾಯವಾಗಿದೆ. ಈ ಸ್ಥಳದಲ್ಲಿ ಅಫಘಾತಗಳು ಅಥವಾ ವಾಹನಗಳು ಕೆಟ್ಟು ನಿಂತರೇ ಅಲ್ಲಿ ಆಗುವ ನರಕ ವೇದನೆಯನ್ನು ಹೇಳ ತೀರದು. ವಾಸ್ತವಿಕವಾಗಿ ಈ ಪ್ರದೇಶದಲ್ಲಿ ಕಾನೂನಿನ ತೊಡಕು ಇದ್ದರೂ ಇಂತಹ ಸೂಕ್ಷ್ಮ ಪ್ರದೇಶದಲ್ಲಿ ನೆಟ್ ವರ್ಕ್ ಅನಿವಾರ್ಯವಾಗಿ ಬೇಕಾಗುತ್ತದೆ.

ಹಣ ಕೊಟ್ಟು ನದಿ ದಾಟಿದ ಗಾದೆಯಂತಾಗಿದೆ ಇಂದಿನ ನೆಟ್ ವರ್ಕ್ ಪರಿಸ್ಥಿತಿ:

ಹೌದು ಇತ್ತೀಚಿನ ಕೆಲವೋಂದು ನೆಟ್ ವರ್ಕ್ ಕಂಪೆನಿಗಳ ನಿಯಮ ನಿಬಂಧನೆಗಳನ್ನು ಮೊಬೈಲ್ ಬಳಕೆದಾರರು ಸರಿಯಾಗಿ ಪಾಲನೆ ಮಾಡಬೇಕಾದ ಅನಿವಾರ್ಯತೆ ಬಂದೊದಗಿದೆ. ಇಲ್ಲವಾದಲ್ಲಿ ಕ್ಷಣ ಮಾತ್ರದಲ್ಲಿ ಸಂಪರ್ಕ ಕಡಿತವಾಗುತ್ತದೆ. ಪ್ರತಿ ತಿಂಗಳು ಮೂರುತಿಂಗಳು, ಆರು ತಿಂಗಳು, ವರ್ಷದ ಆಫರ್ ಗಳ ಮೇಲೆ ರಿಚಾರ್ಜ್ ಮಾಡಿಸಿ ಕನಿಷ್ಠ ಮಾತನಾಡಲು ಆಗದಂತಹ ಪರಿಸ್ಥಿತಿಗಳು ಬಹುತೇಕರ  ಅನುಭವಕ್ಕೆ ಬಂದಿರಲೂ ಬಹುದು. ಗ್ರಾಮೀಣ ಪರಿಸರದಲ್ಲಂತೂ ಶೇ.90 ರಷ್ಟು ಮಂದಿ ರಿಚಾರ್ಜ್ ಮಾಡಿ ಮೊಬೈಲ್ ಬಳಕೆ ಮಾಡಲಾಗದೆ ಕಂಗೆಟ್ಟಿರೋದಂತು ಸ್ಪಷ್ಟ.

ನೆಟ್ ವರ್ಕ್ ಸಮಸ್ಯೆಗಳಿಗೆ ಮುಕ್ತಿ ಎಂದು: ಹಲವು ದಿನಗಳಿಂದ ಬಿಗಡಾಯಿಸಿದ ಈ ನೆಟ್ ವರ್ಕ್ ಸಮಸ್ಯೆಗೆ ಶಾಶ್ವತ ಮುಕ್ತಿ ಯಾವಾಗ ಎಂಬುದೇ ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಶೀಘ್ರದಲ್ಲೇ ಈ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಶಾಶ್ವತ ಪರಿಹಾರಕ್ಕೆ ಕಾರ್ಯತಂತ್ರ ರೂಪಿಸುವಂತಾಗಲಿ.

Spread the love
  • Related Posts

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 40 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 18 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 36 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 59 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 38 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 45 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ