ಕರಾವಳಿಯ ಹಳ್ಳಿ ಹಳ್ಳಿಗಳಲ್ಲಿ ನೆಟ್ ವರ್ಕ್ ಸಮಸ್ಯೆಯ ಕೂಗು ಬಲು ಜೋರು! ಆನ್ ಲೈನ್ ಕ್ಲಾಸ್ ಗೂ ತಟ್ಟಿದ ನೆಟ್ ವರ್ಕ್ ಬ್ಯುಸಿ ಸಮಸ್ಯೆ

ಕರಾವಳಿಯ ಎಲ್ಲೆಡೆ ಹೋದರು ಅಲ್ಲಲ್ಲಿ ಕಾಣಸಿಗುವುದೇ ಟವರ್ ಗಳ ರಾಶಿ ರಾಶಿ, ಆದರೆ ಇವೆಲ್ಲವೂ ಯಾರಿಗೂ ಸಮಯಕ್ಕೆ ಸರಿಯಾಗಿ ಬಳಕೆ ಮಾಡಲು ಸಾಧ್ಯವಾಗದಷ್ಟು ಕಠಿಣವಾಗಿದೆ.

ಇತ್ತೀಚೆಗಂತೂ ಆನ್ ಲೈನ್ ಕ್ಲಾಸ್ ಗಳು ನಡೆಯುತ್ತಿದ್ದು ಮಕ್ಕಳ ಪರದಾಟಕ್ಕೆ ಕೊನೆಯೇ ಇಲ್ಲದಂತಾಗಿದೆ. ಮೊಬೈಲ್ ನಲ್ಲಿ ಸಿಗ್ನಲ್ ತೋರಿಸಿದರು ನೆಟ್ ಸರಿಯಾಗಿ ಸಿಗದೇ ತೊಂದರೆ ಪಡುವವರ ಸಂಕಷ್ಟ ಅಷ್ಟಿಷ್ಟಲ್ಲ.

ಮೂಲಭೂತ ಸೌಕರ್ಯಗಳ ಪಟ್ಟಿಯಲ್ಲಿ ಮೊಬೈಲ್ ನೆಟ್ ವರ್ಕ್ ಸೇರಿಸುವುದು ಸೂಕ್ತ:

ಮೂಲಭೂತ ಸೌಕರ್ಯದ ಕೊರತೆಯಲ್ಲಿ ಮೊಬೈಲ್ ನೆಟ್ ವರ್ಕ್ ನ್ನು ಸೇರಿಸಿದರೆ ಉತ್ತಮ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಮಾಡದೇ ಇರುವ ವ್ಯಕ್ತಿಗಳಿಲ್ಲ ಪ್ರತಿ ಕ್ಷಣಕ್ಷಣಕ್ಕೂ ಎಲ್ಲಾ ವಿಚಾರಗಳಿಗೂ ಮೊಬೈಲ್ ಬಳಕೆ ಕಡೆಗೆ ಜನತೆಯ ಒಲವು ಹೆಚ್ಚಾಗುತ್ತಿದ್ದು ಕುಡಿಯುವ ನೀರು, ರಸ್ತೆ ಸಂಪರ್ಕದಂತೆ ಮೂಲಭೂತ ಸೌಕರ್ಯಗಳ ಪಟ್ಟಿಯಲ್ಲಿ ಮೊಬೈಲ್ ನೆಟ್ ವರ್ಕ್ ಗಳನ್ನು ಸೇರಿಸುವ ಅನಿವಾರ್ಯತೆ ಇದೆ.

ಕಣಿವೆ ಪ್ರದೇಶ – ಘಾಟ್ ರಸ್ತೆಗಳಲ್ಲಿಯೂ ನೆಟ್ ವರ್ಕ್ ಗೆ ಬರ!

ಕರಾವಳಿಯನ್ನು ಸಂದಿಸುವ ಚಾರ್ಮಾಡಿ ಘಾಟ್, ಶಿರಾಡಿ ಘಾಟ್ ರಸ್ತೆಗಳಲ್ಲೂ ಹಲವಾರು ಕಿ.ಮೀ ವರೆಗೆ ನೆಟ್ ವರ್ಕ್ ಮಾಯವಾಗಿದೆ. ಈ ಸ್ಥಳದಲ್ಲಿ ಅಫಘಾತಗಳು ಅಥವಾ ವಾಹನಗಳು ಕೆಟ್ಟು ನಿಂತರೇ ಅಲ್ಲಿ ಆಗುವ ನರಕ ವೇದನೆಯನ್ನು ಹೇಳ ತೀರದು. ವಾಸ್ತವಿಕವಾಗಿ ಈ ಪ್ರದೇಶದಲ್ಲಿ ಕಾನೂನಿನ ತೊಡಕು ಇದ್ದರೂ ಇಂತಹ ಸೂಕ್ಷ್ಮ ಪ್ರದೇಶದಲ್ಲಿ ನೆಟ್ ವರ್ಕ್ ಅನಿವಾರ್ಯವಾಗಿ ಬೇಕಾಗುತ್ತದೆ.

ಹಣ ಕೊಟ್ಟು ನದಿ ದಾಟಿದ ಗಾದೆಯಂತಾಗಿದೆ ಇಂದಿನ ನೆಟ್ ವರ್ಕ್ ಪರಿಸ್ಥಿತಿ:

ಹೌದು ಇತ್ತೀಚಿನ ಕೆಲವೋಂದು ನೆಟ್ ವರ್ಕ್ ಕಂಪೆನಿಗಳ ನಿಯಮ ನಿಬಂಧನೆಗಳನ್ನು ಮೊಬೈಲ್ ಬಳಕೆದಾರರು ಸರಿಯಾಗಿ ಪಾಲನೆ ಮಾಡಬೇಕಾದ ಅನಿವಾರ್ಯತೆ ಬಂದೊದಗಿದೆ. ಇಲ್ಲವಾದಲ್ಲಿ ಕ್ಷಣ ಮಾತ್ರದಲ್ಲಿ ಸಂಪರ್ಕ ಕಡಿತವಾಗುತ್ತದೆ. ಪ್ರತಿ ತಿಂಗಳು ಮೂರುತಿಂಗಳು, ಆರು ತಿಂಗಳು, ವರ್ಷದ ಆಫರ್ ಗಳ ಮೇಲೆ ರಿಚಾರ್ಜ್ ಮಾಡಿಸಿ ಕನಿಷ್ಠ ಮಾತನಾಡಲು ಆಗದಂತಹ ಪರಿಸ್ಥಿತಿಗಳು ಬಹುತೇಕರ  ಅನುಭವಕ್ಕೆ ಬಂದಿರಲೂ ಬಹುದು. ಗ್ರಾಮೀಣ ಪರಿಸರದಲ್ಲಂತೂ ಶೇ.90 ರಷ್ಟು ಮಂದಿ ರಿಚಾರ್ಜ್ ಮಾಡಿ ಮೊಬೈಲ್ ಬಳಕೆ ಮಾಡಲಾಗದೆ ಕಂಗೆಟ್ಟಿರೋದಂತು ಸ್ಪಷ್ಟ.

ನೆಟ್ ವರ್ಕ್ ಸಮಸ್ಯೆಗಳಿಗೆ ಮುಕ್ತಿ ಎಂದು: ಹಲವು ದಿನಗಳಿಂದ ಬಿಗಡಾಯಿಸಿದ ಈ ನೆಟ್ ವರ್ಕ್ ಸಮಸ್ಯೆಗೆ ಶಾಶ್ವತ ಮುಕ್ತಿ ಯಾವಾಗ ಎಂಬುದೇ ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಶೀಘ್ರದಲ್ಲೇ ಈ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಶಾಶ್ವತ ಪರಿಹಾರಕ್ಕೆ ಕಾರ್ಯತಂತ್ರ ರೂಪಿಸುವಂತಾಗಲಿ.

Spread the love
  • Related Posts

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    🖊️• ಬರಹ: ರಾಜೇಶ್ ಎಂ ಕಾನರ್ಪ ಮಂಗಗಳ ಕೈಯಲ್ಲಿ ಕುರುಕುರೇ ಪ್ಯಾಕೇಟ್!!! ಪ್ರೀತಿಯ ಹೆಸರಿನಲ್ಲಿ ವಾನರಗಳಿಗೆ ವಿಷವಿಕ್ಕುತ್ತಿರುವ ಮನುಜಕುಲ??? ವಾನರಗಳಿಗೆ ಪ್ಯಾಕೆಟ್‌ ತಿಂಡಿ ಬೇಡ, ಪ್ರಕೃತಿಯ ಆಹಾರ ಬೇಕು!!! ಪ್ರಕೃತಿಯ ಮಡಿಲಲ್ಲಿ ಸ್ವತಂತ್ರವಾಗಿ ಬದುಕಬೇಕಾದ ವಾನರಗಳು ಇಂದು ಮನುಷ್ಯರ ಕೈಯಲ್ಲಿರುವ ಕುರುಕುರೆ,…

    Spread the love

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    You Missed

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 6 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 7 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 10 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 26 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 15 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 14 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ