ಕರಾವಳಿಯ ಹಳ್ಳಿ ಹಳ್ಳಿಗಳಲ್ಲಿ ನೆಟ್ ವರ್ಕ್ ಸಮಸ್ಯೆಯ ಕೂಗು ಬಲು ಜೋರು! ಆನ್ ಲೈನ್ ಕ್ಲಾಸ್ ಗೂ ತಟ್ಟಿದ ನೆಟ್ ವರ್ಕ್ ಬ್ಯುಸಿ ಸಮಸ್ಯೆ

ಕರಾವಳಿಯ ಎಲ್ಲೆಡೆ ಹೋದರು ಅಲ್ಲಲ್ಲಿ ಕಾಣಸಿಗುವುದೇ ಟವರ್ ಗಳ ರಾಶಿ ರಾಶಿ, ಆದರೆ ಇವೆಲ್ಲವೂ ಯಾರಿಗೂ ಸಮಯಕ್ಕೆ ಸರಿಯಾಗಿ ಬಳಕೆ ಮಾಡಲು ಸಾಧ್ಯವಾಗದಷ್ಟು ಕಠಿಣವಾಗಿದೆ.

ಇತ್ತೀಚೆಗಂತೂ ಆನ್ ಲೈನ್ ಕ್ಲಾಸ್ ಗಳು ನಡೆಯುತ್ತಿದ್ದು ಮಕ್ಕಳ ಪರದಾಟಕ್ಕೆ ಕೊನೆಯೇ ಇಲ್ಲದಂತಾಗಿದೆ. ಮೊಬೈಲ್ ನಲ್ಲಿ ಸಿಗ್ನಲ್ ತೋರಿಸಿದರು ನೆಟ್ ಸರಿಯಾಗಿ ಸಿಗದೇ ತೊಂದರೆ ಪಡುವವರ ಸಂಕಷ್ಟ ಅಷ್ಟಿಷ್ಟಲ್ಲ.

ಮೂಲಭೂತ ಸೌಕರ್ಯಗಳ ಪಟ್ಟಿಯಲ್ಲಿ ಮೊಬೈಲ್ ನೆಟ್ ವರ್ಕ್ ಸೇರಿಸುವುದು ಸೂಕ್ತ:

ಮೂಲಭೂತ ಸೌಕರ್ಯದ ಕೊರತೆಯಲ್ಲಿ ಮೊಬೈಲ್ ನೆಟ್ ವರ್ಕ್ ನ್ನು ಸೇರಿಸಿದರೆ ಉತ್ತಮ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಮಾಡದೇ ಇರುವ ವ್ಯಕ್ತಿಗಳಿಲ್ಲ ಪ್ರತಿ ಕ್ಷಣಕ್ಷಣಕ್ಕೂ ಎಲ್ಲಾ ವಿಚಾರಗಳಿಗೂ ಮೊಬೈಲ್ ಬಳಕೆ ಕಡೆಗೆ ಜನತೆಯ ಒಲವು ಹೆಚ್ಚಾಗುತ್ತಿದ್ದು ಕುಡಿಯುವ ನೀರು, ರಸ್ತೆ ಸಂಪರ್ಕದಂತೆ ಮೂಲಭೂತ ಸೌಕರ್ಯಗಳ ಪಟ್ಟಿಯಲ್ಲಿ ಮೊಬೈಲ್ ನೆಟ್ ವರ್ಕ್ ಗಳನ್ನು ಸೇರಿಸುವ ಅನಿವಾರ್ಯತೆ ಇದೆ.

ಕಣಿವೆ ಪ್ರದೇಶ – ಘಾಟ್ ರಸ್ತೆಗಳಲ್ಲಿಯೂ ನೆಟ್ ವರ್ಕ್ ಗೆ ಬರ!

ಕರಾವಳಿಯನ್ನು ಸಂದಿಸುವ ಚಾರ್ಮಾಡಿ ಘಾಟ್, ಶಿರಾಡಿ ಘಾಟ್ ರಸ್ತೆಗಳಲ್ಲೂ ಹಲವಾರು ಕಿ.ಮೀ ವರೆಗೆ ನೆಟ್ ವರ್ಕ್ ಮಾಯವಾಗಿದೆ. ಈ ಸ್ಥಳದಲ್ಲಿ ಅಫಘಾತಗಳು ಅಥವಾ ವಾಹನಗಳು ಕೆಟ್ಟು ನಿಂತರೇ ಅಲ್ಲಿ ಆಗುವ ನರಕ ವೇದನೆಯನ್ನು ಹೇಳ ತೀರದು. ವಾಸ್ತವಿಕವಾಗಿ ಈ ಪ್ರದೇಶದಲ್ಲಿ ಕಾನೂನಿನ ತೊಡಕು ಇದ್ದರೂ ಇಂತಹ ಸೂಕ್ಷ್ಮ ಪ್ರದೇಶದಲ್ಲಿ ನೆಟ್ ವರ್ಕ್ ಅನಿವಾರ್ಯವಾಗಿ ಬೇಕಾಗುತ್ತದೆ.

ಹಣ ಕೊಟ್ಟು ನದಿ ದಾಟಿದ ಗಾದೆಯಂತಾಗಿದೆ ಇಂದಿನ ನೆಟ್ ವರ್ಕ್ ಪರಿಸ್ಥಿತಿ:

ಹೌದು ಇತ್ತೀಚಿನ ಕೆಲವೋಂದು ನೆಟ್ ವರ್ಕ್ ಕಂಪೆನಿಗಳ ನಿಯಮ ನಿಬಂಧನೆಗಳನ್ನು ಮೊಬೈಲ್ ಬಳಕೆದಾರರು ಸರಿಯಾಗಿ ಪಾಲನೆ ಮಾಡಬೇಕಾದ ಅನಿವಾರ್ಯತೆ ಬಂದೊದಗಿದೆ. ಇಲ್ಲವಾದಲ್ಲಿ ಕ್ಷಣ ಮಾತ್ರದಲ್ಲಿ ಸಂಪರ್ಕ ಕಡಿತವಾಗುತ್ತದೆ. ಪ್ರತಿ ತಿಂಗಳು ಮೂರುತಿಂಗಳು, ಆರು ತಿಂಗಳು, ವರ್ಷದ ಆಫರ್ ಗಳ ಮೇಲೆ ರಿಚಾರ್ಜ್ ಮಾಡಿಸಿ ಕನಿಷ್ಠ ಮಾತನಾಡಲು ಆಗದಂತಹ ಪರಿಸ್ಥಿತಿಗಳು ಬಹುತೇಕರ  ಅನುಭವಕ್ಕೆ ಬಂದಿರಲೂ ಬಹುದು. ಗ್ರಾಮೀಣ ಪರಿಸರದಲ್ಲಂತೂ ಶೇ.90 ರಷ್ಟು ಮಂದಿ ರಿಚಾರ್ಜ್ ಮಾಡಿ ಮೊಬೈಲ್ ಬಳಕೆ ಮಾಡಲಾಗದೆ ಕಂಗೆಟ್ಟಿರೋದಂತು ಸ್ಪಷ್ಟ.

ನೆಟ್ ವರ್ಕ್ ಸಮಸ್ಯೆಗಳಿಗೆ ಮುಕ್ತಿ ಎಂದು: ಹಲವು ದಿನಗಳಿಂದ ಬಿಗಡಾಯಿಸಿದ ಈ ನೆಟ್ ವರ್ಕ್ ಸಮಸ್ಯೆಗೆ ಶಾಶ್ವತ ಮುಕ್ತಿ ಯಾವಾಗ ಎಂಬುದೇ ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಶೀಘ್ರದಲ್ಲೇ ಈ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಶಾಶ್ವತ ಪರಿಹಾರಕ್ಕೆ ಕಾರ್ಯತಂತ್ರ ರೂಪಿಸುವಂತಾಗಲಿ.

Spread the love
  • Related Posts

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    ಪುತ್ತೂರು: ಸಮಾಜಮುಖಿ ಕಾರ್ಯಗಳು, ಹಿಂದೂ ಸಂಘಟನಾ ಚಟುವಟಿಕೆಗಳು ಹಾಗೂ ಜನಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕರ್ನಾಟಕ ಟಿವಿ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಜನನಾಯಕ ಲೀಡರ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಜ್ಯದ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಸಕಲೇಶಪುರ ವತಿಯಿಂದ ತಾಲೂಕಿನ ಶುಕ್ರವಾರಸಂತೆ ವಲಯದ ಯಡವರನಹಳ್ಳಿ (ನಲ್ಲುಳ್ಳಿ) ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ…

    Spread the love

    You Missed

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    • By admin
    • June 20, 2026
    • 21 views
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    • By admin
    • June 20, 2026
    • 106 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    • By admin
    • June 20, 2026
    • 20 views
    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    • By admin
    • June 20, 2026
    • 51 views
    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    • By admin
    • June 18, 2026
    • 56 views
    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    • By admin
    • June 18, 2026
    • 46 views
    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ