ಬಾಳೆ, ಅನಾನಸು, ಪಪ್ಪಾಯ ಬೆಳೆದ ರೈತರಿಂದ ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ಮಂಗಳೂರು: ಕೋವಿಡ್-19 ಕಾರಣದಿಂದಾಗಿ ದೇಶದಲ್ಲಿ ವಿಧಿಸಿದ ಲಾಕ್‍ಡೌನ್‍ನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಳೆ, ಅನಾನಸು ಹಾಗೂ ಪಪ್ಪಾಯ ಬೆಳೆ ಬೆಳೆದ ರೈತರು ದಿನಾಂಕ 24-03-2020 ರಿಂದ 31-05-2020 ರವರೆಗೆ ಕಟಾವಿಗೆ ಬಂದಿರುವ ಫಸಲುಗಳನ್ನು ಮಾರಾಟ ಮಾಡಲು ಆಗದೆ ಸಂಕಷ್ಟಕ್ಕೀಡಾಗಿರುತ್ತಾರೆ ಅಥವಾ ಮಾರಾಟ ಮಾಡಿದ ಫಸಲಿಗೆ ಸೂಕ್ತ ಬೆಲೆ ಸಿಗದೆ ನಷ್ಟ ಅನುಭವಿಸಿರುತ್ತಾರೆ.

ಈ ಕಾರಣಕ್ಕಾಗಿ ಕರ್ನಾಟಕ ಸರ್ಕಾರವು ಈ ಬೆಳೆಗಳನ್ನು ಬೆಳೆದು ನಷ್ಟ ಅನುಭವಿಸಿದ ರೈತರಿಗೆ ಹೆಕ್ಟೇರಿಗೆ ಗರಿಷ್ಠ ರೂ.15000 ಗಳಂತೆ (ಪ್ರತೀ ಸೆಂಟ್ಸ್‍ಗೆ ರೂ.60 ರಂತೆ) ಗರಿಷ್ಟ ಒಂದು ಹೆಕ್ಟೇರ್‍ವರೆಗೆ ಪರಿಹಾರ ನೀಡುವ ಕಾರ್ಯಕ್ರಮ ಜಾರಿಗೆ ತಂದಿರುತ್ತದೆ.

“ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ 2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರಬೇಕು. ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ದಿನಾಂಕ 24-03-2020 ರಿಂದ 31-05-2020ರಲ್ಲಿ ಕಟಾವು ಮಾಡಿರುವ ರೈತರು ಮಾತ್ರ ಅರ್ಹರು. ಸದರಿ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದಿರುವ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.”

ಈ ಹಿನ್ನೆಲೆಯಲ್ಲಿ ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ಬೆಳೆದು 2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರುವ ಹಾಗೂ ದಿನಾಂಕ 24-03-2020 ರಿಂದ 31-05-2020 ರವರೆಗಿನ ಅವಧಿಯಲ್ಲಿ ಫಸಲು ಕಟಾವು ಆಗಿರುವ, ಮೇಲಿನ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದ ರೈತರು ಮಾತ್ರ ಪರಿಹಾರಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿಗಳನ್ನು ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಅಥವಾ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಸಲ್ಲಿಸಬಹುದು. ತಾಲೂಕು ಹಾಗೂ ಜಿಲ್ಲಾ ಸಮಿತಿಗಳಿಂದ ಅನುಮೋದಿತವಾದ ರೈತರಿಗೆ ಪರಿಹಾರಧನವನ್ನು ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ರೈತರು ಅರ್ಜಿಯೊಂದಿಗೆ ಆಧಾರ್ ಲಿಂಕ್ ಹಾಗೂ NPCI ಸೀಡಿಂಗ್ ಆಗಿರುವ ಬ್ಯಾಂಕ್ ಖಾತೆಯ ವಿವರಗಳನ್ನು ಆಧಾರ್ ಪ್ರತಿಯೊಂದಿಗೆ ಮತ್ತು ನಿಗದಿತ ಸ್ವಯಂ ಘೋಷಣೆ ಪತ್ರವನ್ನು ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 25 ಆಗಿರುತ್ತದೆ.

ಈ ಕೆಳಗಿನ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.
ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ 2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರಬೇಕು. ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ದಿನಾಂಕ 24-03-2020 ರಿಂದ 31-05-2020ರಲ್ಲಿ ಕಟಾವು ಮಾಡಿರುವ ರೈತರು ಮಾತ್ರ ಅರ್ಹರು. ಸದರಿ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದಿರುವ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ:
ತೋಟಗಾರಿಕೆ ಉಪನಿರ್ದೇಶಕರು, ದ.ಕ.ಜಿ.ಪಂ., ಮಂಗಳೂರು – 9448999226 ,
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಮಂಗಳೂರು – 8277806378 (0824-2423615)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬಂಟ್ವಾಳ – 8277806371 (08255-234102)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಪುತ್ತೂರು – 9731854527 (08251-230905)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಸುಳ್ಯ 9880993238 (08257-232020)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬೆಳ್ತಂಗಡಿ – 8277806380 (08256-232148)
ಇವರನ್ನು ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Spread the love
  • Related Posts

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ: ಫ್ರೆಂಡ್ಸ್ ವ್ಯಾಟ್ಸಾಪ್ ಗ್ರೂಪ್ ನ 13ವರ್ಷಗಳ ನಂತರ ಮೊದಲ ಬಾರಿಗೆ ಸ್ನೇಹಿತರನ್ನೆಲ್ಲ ಒಗ್ಗೂಡಿಸಿ ಫ್ರೆಂಡ್ಸ್ ಸಮಾಗಮ -2025 ಕಾರ್ಯಕ್ರಮವನ್ನು ತಾಲೂಕಿನ ಬಲಿಪ ರೆಸಾರ್ಟ್ ನಲ್ಲಿ ನಡೆಸಲಾಯಿತು. 2013ರಲ್ಲಿ ಪ್ರಾರಂಭಗೊಂಡ ಈ ಗ್ರೂಫ್ ನಲ್ಲಿ ವಕೀಲರು, ಉಪನ್ಯಾಸಕರು, ಇಲಾಖಾ ಅಧಿಕಾರಿಗಳು, ಪ್ರಗತಿಪರ…

    Spread the love

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    You Missed

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    • By admin
    • December 15, 2025
    • 179 views
    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 61 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 24 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 43 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 66 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 40 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ