ಬಾಳೆ, ಅನಾನಸು, ಪಪ್ಪಾಯ ಬೆಳೆದ ರೈತರಿಂದ ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ಮಂಗಳೂರು: ಕೋವಿಡ್-19 ಕಾರಣದಿಂದಾಗಿ ದೇಶದಲ್ಲಿ ವಿಧಿಸಿದ ಲಾಕ್‍ಡೌನ್‍ನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಳೆ, ಅನಾನಸು ಹಾಗೂ ಪಪ್ಪಾಯ ಬೆಳೆ ಬೆಳೆದ ರೈತರು ದಿನಾಂಕ 24-03-2020 ರಿಂದ 31-05-2020 ರವರೆಗೆ ಕಟಾವಿಗೆ ಬಂದಿರುವ ಫಸಲುಗಳನ್ನು ಮಾರಾಟ ಮಾಡಲು ಆಗದೆ ಸಂಕಷ್ಟಕ್ಕೀಡಾಗಿರುತ್ತಾರೆ ಅಥವಾ ಮಾರಾಟ ಮಾಡಿದ ಫಸಲಿಗೆ ಸೂಕ್ತ ಬೆಲೆ ಸಿಗದೆ ನಷ್ಟ ಅನುಭವಿಸಿರುತ್ತಾರೆ.

ಈ ಕಾರಣಕ್ಕಾಗಿ ಕರ್ನಾಟಕ ಸರ್ಕಾರವು ಈ ಬೆಳೆಗಳನ್ನು ಬೆಳೆದು ನಷ್ಟ ಅನುಭವಿಸಿದ ರೈತರಿಗೆ ಹೆಕ್ಟೇರಿಗೆ ಗರಿಷ್ಠ ರೂ.15000 ಗಳಂತೆ (ಪ್ರತೀ ಸೆಂಟ್ಸ್‍ಗೆ ರೂ.60 ರಂತೆ) ಗರಿಷ್ಟ ಒಂದು ಹೆಕ್ಟೇರ್‍ವರೆಗೆ ಪರಿಹಾರ ನೀಡುವ ಕಾರ್ಯಕ್ರಮ ಜಾರಿಗೆ ತಂದಿರುತ್ತದೆ.

“ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ 2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರಬೇಕು. ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ದಿನಾಂಕ 24-03-2020 ರಿಂದ 31-05-2020ರಲ್ಲಿ ಕಟಾವು ಮಾಡಿರುವ ರೈತರು ಮಾತ್ರ ಅರ್ಹರು. ಸದರಿ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದಿರುವ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.”

ಈ ಹಿನ್ನೆಲೆಯಲ್ಲಿ ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ಬೆಳೆದು 2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರುವ ಹಾಗೂ ದಿನಾಂಕ 24-03-2020 ರಿಂದ 31-05-2020 ರವರೆಗಿನ ಅವಧಿಯಲ್ಲಿ ಫಸಲು ಕಟಾವು ಆಗಿರುವ, ಮೇಲಿನ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದ ರೈತರು ಮಾತ್ರ ಪರಿಹಾರಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿಗಳನ್ನು ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಅಥವಾ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಸಲ್ಲಿಸಬಹುದು. ತಾಲೂಕು ಹಾಗೂ ಜಿಲ್ಲಾ ಸಮಿತಿಗಳಿಂದ ಅನುಮೋದಿತವಾದ ರೈತರಿಗೆ ಪರಿಹಾರಧನವನ್ನು ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ರೈತರು ಅರ್ಜಿಯೊಂದಿಗೆ ಆಧಾರ್ ಲಿಂಕ್ ಹಾಗೂ NPCI ಸೀಡಿಂಗ್ ಆಗಿರುವ ಬ್ಯಾಂಕ್ ಖಾತೆಯ ವಿವರಗಳನ್ನು ಆಧಾರ್ ಪ್ರತಿಯೊಂದಿಗೆ ಮತ್ತು ನಿಗದಿತ ಸ್ವಯಂ ಘೋಷಣೆ ಪತ್ರವನ್ನು ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 25 ಆಗಿರುತ್ತದೆ.

ಈ ಕೆಳಗಿನ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.
ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ 2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರಬೇಕು. ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ದಿನಾಂಕ 24-03-2020 ರಿಂದ 31-05-2020ರಲ್ಲಿ ಕಟಾವು ಮಾಡಿರುವ ರೈತರು ಮಾತ್ರ ಅರ್ಹರು. ಸದರಿ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದಿರುವ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ:
ತೋಟಗಾರಿಕೆ ಉಪನಿರ್ದೇಶಕರು, ದ.ಕ.ಜಿ.ಪಂ., ಮಂಗಳೂರು – 9448999226 ,
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಮಂಗಳೂರು – 8277806378 (0824-2423615)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬಂಟ್ವಾಳ – 8277806371 (08255-234102)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಪುತ್ತೂರು – 9731854527 (08251-230905)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಸುಳ್ಯ 9880993238 (08257-232020)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬೆಳ್ತಂಗಡಿ – 8277806380 (08256-232148)
ಇವರನ್ನು ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Spread the love
  • Related Posts

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪನಿ ಮೂಲಕ ಈ ವಿಮಾ…

    Spread the love

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್…

    Spread the love

    You Missed

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    • By admin
    • January 19, 2025
    • 114 views
    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • January 19, 2025
    • 27 views
    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    • By admin
    • January 18, 2025
    • 29 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    • By admin
    • January 18, 2025
    • 60 views
    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    • By admin
    • January 17, 2025
    • 34 views
    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

    • By admin
    • January 17, 2025
    • 35 views
    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ