SSLC ಪರೀಕ್ಷೆ ತಯಾರಿ ಬಗ್ಗೆ ಶಾಸಕರ ನೇತೃತ್ವದಲ್ಲಿ ಸಮಾಲೋಚನಾ ಸಭೆ


ಬೆಳ್ತಂಗಡಿ : ಲಾಕ್ ಡೌನ್ ನಿಂದ ಮುಂದೂಡಲ್ಪಟ್ಟಿದ್ದ 10 ನೇ ತರಗತಿಯ ಪರೀಕ್ಷೆಯು ಇದೇ ಬರುವ ಜೂ 25 ರಿಂದ ಜುಲೈ 4 ರ ವರೆಗೆ ಸರ್ಕಾರದ ವಿವಿಧ ಮಾರ್ಗಸೂಚಿಯಂತೆ ನಡೆಯಲಿದ್ದು ತಾಲೂಕಿನಲ್ಲಿ ನಡೆಯಲಿರುವ ಪರೀಕ್ಷೆಗಳ ತಯಾರಿ ಬಗ್ಗೆ ಶಾಸಕರ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳ ಸಭೆ ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆಯಿತು ಈ ಸಂದರ್ಭದಲ್ಲಿ ತಾಲೂಕಿನ ವಿವಿಧೆಡೆ 13 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು ಎಲ್ಲಾ ಪರೀಕ್ಷಾ ಕೇಂದ್ರಗಳ ಸುರಕ್ಷತೆಯ ಬಗ್ಗೆ ಕ್ರಮ ಜರುಗಿಸಬೇಕು ಪ್ರತೀ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡುವುದು,ಮಕ್ಕಳು ಪರೀಕ್ಷಾ ಕೊಠಡಿಯೊಳಗೆ ಪ್ರವೇಶ ಮಾಡುವ ಮೊದಲು ಸ್ಯಾನಿಟೈಸರ್ ಥರ್ಮಲ್ ಟೆಸ್ಟ್ ಅದಲ್ಲದೆ ಜ್ವರ ಶೀತ ಇರುವಂತಹ ಮಕ್ಕಳಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿ ಸಾಮಾಜಿಕ ಅಂತರದಲ್ಲಿ 20 ಮಕ್ಕಳನ್ನು ಕುಳಿತು ಕೊಳ್ಳಿಸಿ ಪರೀಕ್ಷೆ ಬರೆಸುವ ಬಗ್ಗೆ ಚರ್ಚಿಸಲಾಯಿತು ಪ್ರತೀ ವಿದ್ಯಾರ್ಥಿಗಳಿಗೆ ತಲಾ 3 ಸೆಟ್ ಮರುಬಳಕೆ ಮಾಡಬಹುದಾದ ಮಾಸ್ಕ್ ನೀಡುವುದು,ಅದಲ್ಲದೆ ಹೆಚ್ಚುವರಿಯಾಗಿ ಪ್ರತೀ ಕೇಂದ್ರಗಳಿಗೆ 100 ಮಾಸ್ಕ್ ವ್ಯವಸ್ಥೆ, ಪ್ರತೀ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾರ್ಥಿಗಳನ್ನು ಕರೆದುಕೊಂಡು ಬರಲು ಉಚಿತವಾಗಿ ಬಸ್ಸಿನ ವ್ಯವಸ್ಥೆ, ತುರ್ತು ಆರೋಗ್ಯ ಸೇವೆಗಾಗಿ ಒಂದು ಅಂಬುಲೆನ್ಸ್ ಸಿದ್ದಪಡಿಸಿ ಇಟ್ಟುಕೊಳ್ಳುವ ಬಗ್ಗೆಯೂ ಚರ್ಚಿಸಲಾಯಿತು ಪ್ರತೀ ಕೇಂದ್ರಗಳಲ್ಲಿ ಮಕ್ಕಳಿಗೆ ಸಾಮಾಜಿಕ ಅಂತರದಲ್ಲಿ ಥರ್ಮಲ್ ಟೆಸ್ಟ್ ಮಾಡಿಸುವುದಕ್ಕಾಗಿ ಶಾಮಿಯಾನ ಅದಲ್ಲದೆ , ಶೌಚಾಲಯದ ವ್ಯವಸ್ಥೆ ಎಲ್ಲ ರೀತಿಯಲ್ಲೂ ಮಕ್ಕಳಿಗೆ ಗೊಂದಲ ಆಗದ ರೀತಿಯಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಚರ್ಚಿಸಲಾಯಿತು.ತಾಲೂಕಿನಲ್ಲಿ ನಡೆಯುವ ಹತ್ತನೇ ತರಗತಿಯ ಪರೀಕ್ಷೆಯು ಯಾವುದೇ ಗೊಂದಲ ಇಲ್ಲದೆ ನಡೆಯಬೇಕು ಅದ್ದರಿಂದ ಎಲ್ಲಾ ಇಲಾಖೆಯ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕರ್ತವ್ಯವನ್ನು ನಿರ್ವಹಿಸಬೇಕು .ಅದಲ್ಲದೆ ಮಕ್ಕಳಿಗೆ ಮಾನಸಿಕವಾಗಿ ತಯಾರಾಗಲು ಶಿಕ್ಷಕರ ಪಾತ್ರ ಕೂಡ ಅತೀ ಮುಖ್ಯ ,ಎಲ್ಲ ರೀತಿಯಲ್ಲೂ ನನ್ನ ಸಹಕಾರ ಬೆಂಬಲ ನಿಮ್ಮೊಂದಿಗೆ ಇದೆ ಎಂದು ಇಲಾಖಾಧಿಕಾರಿಗಳನ್ನು ಉದ್ದೇಶಿಸಿ ಶಾಸಕ ಹರೀಶ್ ಪೂಂಜ ನುಡಿದರು.

Spread the love
  • Related Posts

    ಕೆಂಪುಕಲ್ಲು ಮರಳು ಸಮಸ್ಯೆ ಬಗೆಹರಿಸಲು ದ.ಕ ಜಿಲ್ಲಾ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅತ್ಯಂತ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿರುವ ಕೆಂಪು ಕಲ್ಲು ಹಾಗೂ ಮರಳಿನ ಸಮಸ್ಯೆಗೆ ಅತೀ ಶೀಘ್ರದಲ್ಲಿ ಅಂತ್ಯ ಹಾಡುವಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು, ಶಾಸಕರು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು ಮುಖ್ಯ ಮಂತ್ರಿ…

    Spread the love

    ಸೇವಾಧಾಮದಲ್ಲಿ ನಿಯೋ ಮೋಷನ್ ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

    ಸೌತಡ್ಕ(ಜುಲೈ. 29) : ಸೆಲ್ಕೊ ಫೌಂಡೇಶನ್, ಬೆಂಗಳೂರು ಮತ್ತು ನಿಯೋ ಮೋಶನ್ ಅಸಿಸ್ಟಿವ್‌ ಡಿವೈಸ್‌ ಇವುಗಳ ಆಶ್ರಯದಲ್ಲಿ ಸೇವಾಭಾರತಿ(ರಿ.),ಕನ್ಯಾಡಿ ಇದರ ಸಹಕಾರದಲ್ಲಿ ಚಕ್ರದ ಮೇಲೆ ಜೀವನೋಪಾಯ ನಿಯೋ ಬೋಲ್ಟ್ ವಿತರಣೆ ಮತ್ತು ಸೇವಾಭಾರತಿಯ ಖಜಾಂಚಿ ಮತ್ತು ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ.…

    Spread the love

    You Missed

    ಕೆಂಪುಕಲ್ಲು ಮರಳು ಸಮಸ್ಯೆ ಬಗೆಹರಿಸಲು ದ.ಕ ಜಿಲ್ಲಾ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ

    • By admin
    • July 30, 2025
    • 10 views
    ಕೆಂಪುಕಲ್ಲು ಮರಳು ಸಮಸ್ಯೆ ಬಗೆಹರಿಸಲು ದ.ಕ ಜಿಲ್ಲಾ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ

    ಸೇವಾಧಾಮದಲ್ಲಿ ನಿಯೋ ಮೋಷನ್ ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

    • By admin
    • July 30, 2025
    • 23 views
    ಸೇವಾಧಾಮದಲ್ಲಿ ನಿಯೋ ಮೋಷನ್  ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

    ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ರಚನೆ, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

    • By admin
    • July 29, 2025
    • 66 views
    ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ರಚನೆ, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

    ಉಜಿರೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ “ಮಹಿಳಾ ಯಕ್ಷ ಸಂಭ್ರಮ”

    • By admin
    • July 28, 2025
    • 103 views
    ಉಜಿರೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ “ಮಹಿಳಾ ಯಕ್ಷ ಸಂಭ್ರಮ”

    ಧರ್ಮಸ್ಥಳ ಸಮೀಪದ ಬೊಳಿಯಾರ್ ಬಳಿ ಒಂಟಿ ಸಲಗ ಪ್ರತ್ಯಕ್ಷ ಅಂಗಡಿಯೊಳಗೆ ನುಗ್ಗಿ ಪಾರಾದ ಮಕ್ಕಳು

    • By admin
    • July 28, 2025
    • 156 views
    ಧರ್ಮಸ್ಥಳ ಸಮೀಪದ ಬೊಳಿಯಾರ್ ಬಳಿ ಒಂಟಿ ಸಲಗ ಪ್ರತ್ಯಕ್ಷ ಅಂಗಡಿಯೊಳಗೆ ನುಗ್ಗಿ ಪಾರಾದ ಮಕ್ಕಳು

    ಹೆಗ್ಗಡೆಯವರೇ, ಸಿಹಿ ಹಣ್ಣಿನ ಮರಕ್ಕೆ ಕಲ್ಲೇಟುಗಳು ಸಹಜ, ಟೀಕೆಗಳಿಗೆ ಬೆದರದೆ ಮುಂದುವರಿಯಿರಿ: ವಿಶ್ವೇಶ್ವರ ಭಟ್‌

    • By admin
    • July 27, 2025
    • 93 views
    ಹೆಗ್ಗಡೆಯವರೇ, ಸಿಹಿ ಹಣ್ಣಿನ ಮರಕ್ಕೆ ಕಲ್ಲೇಟುಗಳು ಸಹಜ, ಟೀಕೆಗಳಿಗೆ ಬೆದರದೆ ಮುಂದುವರಿಯಿರಿ: ವಿಶ್ವೇಶ್ವರ ಭಟ್‌