ಮಹಿಳೆಯರಿಗಾಗಿ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯೂಟ್ಯೂಬ್‌ ಚಾನೆಲ್ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಹಿಳೆಯರಿಗೆ ಉಪಯುಕ್ತ ಮಾಹಿತಿಗಳನ್ನು ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳ ‘ಜ್ಞಾನವಿಕಾಸ ಯೂ ಟ್ಯೂಬ್‌’ ಚಾನೆಲನ್ನು
ಗೆಳತಿ ಜ್ಞಾನ ಕೇಂದ್ರದ ಅಧ್ಯಕ್ಷರಾದ ಶ್ರದ್ಧಾ ಅಮಿತ್‌ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಪ್ರಾರಂಭಿಸಲಾದ ಜ್ಞಾನ ವಿಕಾಸ ಯೂ ಟ್ಯೂಬ್‌ ಚಾನೆಲ್‌ನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ.ಹೆಗ್ಗಡೆ ಲೋಕಾರ್ಪಣೆಗೊಳಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳದಿಂದ ನಡೆಸುತ್ತಿರುವ ಅನೇಕ ಸಂಸ್ಥೆಗಳಲ್ಲಿ ಇರುವ ಮಾಹಿತಿ, ಸಂಪನ್ಮೂಲಗಳನ್ನು ಸದಸ್ಯರಿಗೆ ತಲುಪಿಸುವುದಕ್ಕಾಗಿ ಹಾಗೂ ಮಹಿಳೆಯರ ದೈನಂದಿನ ಜೀವನ ನಿರ್ವಹಣೆ, ಆರೋಗ್ಯ ಮತ್ತು ನೈರ್ಮಲ್ಯ ನಿರ್ವಹಣೆ, ಸರಕಾರಿ ಯೋಜನೆಗಳ ಮಾಹಿತಿ, ಸ್ವ-ಉದ್ಯೋಗಕ್ಕೆ ಇರುವ ಅವಕಾಶಗಳು ಮತ್ತು ಕಾನೂನಿನ ಅರಿವು, ಆಪ್ತ ಸಮಾಲೋಚನೆ, ಮಕ್ಕಳ ಮಾನಸಿಕ ಬೆಳವಣಿಗೆಗಳು ಇತ್ಯಾದಿ ವಿಚಾರಗಳ ಕುರಿತು ಮಾಹಿತಿ ನೀಡಲಾಗುತಿದೆ.

ಮನೆಯಲ್ಲಿತರಕಾರಿ ಬೆಳೆಯುವ ವಿಧಾನ, ಕೈತೋಟ ರಚನೆ, ಟೆರೇಸ್‌ ಗಾರ್ಡನ್‌, ಮನೆಯ ತ್ಯಾಜ್ಯಗಳಿಂದ ಸಾವಯವ ಗೊಬ್ಬರ ತಯಾರಿ, ಮನೆ ನಿರ್ವಹಣೆ ಕುರಿತು ಮಾಹಿತಿ, ಯೋಗಾಸನಗಳ ಕುರಿತು ಕಿರುಚಿತ್ರ, ಕೋವಿಡ್‌-19 ಸಂದರ್ಭ ಸ್ವಚ್ಛತೆ, ಅಂತರ ಕಾಯ್ದುಕೊಳ್ಳುವಿಕೆ ಮತ್ತು ಸಾಮಾಜಿಕ ಅಂತರದ ಮಹತ್ವ, ಸರಕಾರಿ ಯೋಜನೆಗಳನ್ನು ಪಡೆದುಕೊಳ್ಳುವ ಕುರಿತು ಮಾಹಿತಿ, ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಕುರಿತು ಮಾಹಿತಿ, ಮಕ್ಕಳಿಗಾಗಿ ಸುಭಾಷಿತ, ಮೌಲ್ಯಧರಿತ ಕಥೆಗಳು, ಮಹಿಳೆಯರು ಓದಬಹುದಾದ ಪುಸ್ತಕಗಳ ಕುರಿತು ಮಾಹಿತಿ ಹೀಗೆ ಹಲವಾರು ವಿಷಯಗಳಿಗೆ ಸಂಬಂಧಪಟ್ಟಂತೆ ಮಾಹಿತಿ ಕ್ರೋಡೀಕರಣ ಮತ್ತು ಗ್ರಾಮೀಣ ಭಾಗಕ್ಕೆ ತಲುಪಿಸುವ ನಿಟ್ಟಿನಲ್ಲಿಜ್ಞಾನವಿಕಾಸ ಯೂಟ್ಯೂಬ್‌ ಚಾನೆಲ್‌ ಮಹತ್ವಪೂರ್ಣವಾಗಿದೆ.

ಜ್ಞಾನವಿಕಾಸ ಯೂಟ್ಯೂಬ್ ಚಾನಲ್ ಬಿಡುಗಡೆ ವೇಳೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಯೂಟ್ಯೂಬ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ಕಿಸಿ👇🏼👇🏼👇🏼👇🏼👇🏼

https://www.youtube.com/channel/UCI8SB5NsAtv5GtTUFEaUQnQ

Spread the love
  • Related Posts

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಜಿಲ್ಲೆಯಾದ್ಯಂತ ಬಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ನದಿತೀರಗಳಿಗೆ ತಗ್ಗು ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಿದೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ Spread the love

    Spread the love

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ರಸ್ತೆ ಕಾಮಗಾರಿ ನಡೆದಿದ್ದು ಬಳಿಕ ಚರಂಡಿ ನಿರ್ಮಿಸಿದ್ದು, ಕೆಲವು ಕಡೆ ಮುಚ್ಚಲಾಗಿಲ್ಲ, ಇಂದು ಸಂಜೆ ತೆರೆದ ಚರಂಡಿಯ ಬಗ್ಗೆ ಅರಿವಿಲ್ಲದೆ ಅಂಗಡಿಯಿಂದ ಸಾಮಾಗ್ರಿ ಖರೀದಿಸಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯಗೊಂಡಿರುವ…

    Spread the love

    You Missed

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 139 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 154 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 97 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 56 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    • By admin
    • June 11, 2025
    • 68 views
    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು

    • By admin
    • June 11, 2025
    • 75 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು