ಮಹಿಳೆಯರಿಗಾಗಿ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯೂಟ್ಯೂಬ್‌ ಚಾನೆಲ್ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಹಿಳೆಯರಿಗೆ ಉಪಯುಕ್ತ ಮಾಹಿತಿಗಳನ್ನು ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳ ‘ಜ್ಞಾನವಿಕಾಸ ಯೂ ಟ್ಯೂಬ್‌’ ಚಾನೆಲನ್ನು
ಗೆಳತಿ ಜ್ಞಾನ ಕೇಂದ್ರದ ಅಧ್ಯಕ್ಷರಾದ ಶ್ರದ್ಧಾ ಅಮಿತ್‌ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಪ್ರಾರಂಭಿಸಲಾದ ಜ್ಞಾನ ವಿಕಾಸ ಯೂ ಟ್ಯೂಬ್‌ ಚಾನೆಲ್‌ನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ.ಹೆಗ್ಗಡೆ ಲೋಕಾರ್ಪಣೆಗೊಳಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳದಿಂದ ನಡೆಸುತ್ತಿರುವ ಅನೇಕ ಸಂಸ್ಥೆಗಳಲ್ಲಿ ಇರುವ ಮಾಹಿತಿ, ಸಂಪನ್ಮೂಲಗಳನ್ನು ಸದಸ್ಯರಿಗೆ ತಲುಪಿಸುವುದಕ್ಕಾಗಿ ಹಾಗೂ ಮಹಿಳೆಯರ ದೈನಂದಿನ ಜೀವನ ನಿರ್ವಹಣೆ, ಆರೋಗ್ಯ ಮತ್ತು ನೈರ್ಮಲ್ಯ ನಿರ್ವಹಣೆ, ಸರಕಾರಿ ಯೋಜನೆಗಳ ಮಾಹಿತಿ, ಸ್ವ-ಉದ್ಯೋಗಕ್ಕೆ ಇರುವ ಅವಕಾಶಗಳು ಮತ್ತು ಕಾನೂನಿನ ಅರಿವು, ಆಪ್ತ ಸಮಾಲೋಚನೆ, ಮಕ್ಕಳ ಮಾನಸಿಕ ಬೆಳವಣಿಗೆಗಳು ಇತ್ಯಾದಿ ವಿಚಾರಗಳ ಕುರಿತು ಮಾಹಿತಿ ನೀಡಲಾಗುತಿದೆ.

ಮನೆಯಲ್ಲಿತರಕಾರಿ ಬೆಳೆಯುವ ವಿಧಾನ, ಕೈತೋಟ ರಚನೆ, ಟೆರೇಸ್‌ ಗಾರ್ಡನ್‌, ಮನೆಯ ತ್ಯಾಜ್ಯಗಳಿಂದ ಸಾವಯವ ಗೊಬ್ಬರ ತಯಾರಿ, ಮನೆ ನಿರ್ವಹಣೆ ಕುರಿತು ಮಾಹಿತಿ, ಯೋಗಾಸನಗಳ ಕುರಿತು ಕಿರುಚಿತ್ರ, ಕೋವಿಡ್‌-19 ಸಂದರ್ಭ ಸ್ವಚ್ಛತೆ, ಅಂತರ ಕಾಯ್ದುಕೊಳ್ಳುವಿಕೆ ಮತ್ತು ಸಾಮಾಜಿಕ ಅಂತರದ ಮಹತ್ವ, ಸರಕಾರಿ ಯೋಜನೆಗಳನ್ನು ಪಡೆದುಕೊಳ್ಳುವ ಕುರಿತು ಮಾಹಿತಿ, ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಕುರಿತು ಮಾಹಿತಿ, ಮಕ್ಕಳಿಗಾಗಿ ಸುಭಾಷಿತ, ಮೌಲ್ಯಧರಿತ ಕಥೆಗಳು, ಮಹಿಳೆಯರು ಓದಬಹುದಾದ ಪುಸ್ತಕಗಳ ಕುರಿತು ಮಾಹಿತಿ ಹೀಗೆ ಹಲವಾರು ವಿಷಯಗಳಿಗೆ ಸಂಬಂಧಪಟ್ಟಂತೆ ಮಾಹಿತಿ ಕ್ರೋಡೀಕರಣ ಮತ್ತು ಗ್ರಾಮೀಣ ಭಾಗಕ್ಕೆ ತಲುಪಿಸುವ ನಿಟ್ಟಿನಲ್ಲಿಜ್ಞಾನವಿಕಾಸ ಯೂಟ್ಯೂಬ್‌ ಚಾನೆಲ್‌ ಮಹತ್ವಪೂರ್ಣವಾಗಿದೆ.

ಜ್ಞಾನವಿಕಾಸ ಯೂಟ್ಯೂಬ್ ಚಾನಲ್ ಬಿಡುಗಡೆ ವೇಳೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಯೂಟ್ಯೂಬ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ಕಿಸಿ👇🏼👇🏼👇🏼👇🏼👇🏼

https://www.youtube.com/channel/UCI8SB5NsAtv5GtTUFEaUQnQ

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 10 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ