ಕ್ವಾರಂಟೈನ್‌ ದಿನಗಳನ್ನು ವ್ಯರ್ಥ ಮಾಡದೆ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಿ ರಾಜ್ಯಕ್ಕೆ ಮಾದರಿಯಾದ ಮುಂಬೈ ಕನ್ನಡಿಗರು

ಬೆಳ್ತಂಗಡಿ: ಮುಂಬೈನಿಂದ ಬಂದು ಮರೋಡಿ ಗ್ರಾಮದ ಮೂರು ಶಾಲೆಗಳಲ್ಲಿ ಕ್ವಾರಂಟೈನ್‌ನಲ್ಲಿದ್ದ ಸುಮಾರು 64 ಮಂದಿಗೆ ಶಾಸಕ ಹರೀಶ್‌ ಪೂಂಜ ಅವರು ಭಾನುವಾರ ತೆಂಗಿನ ಸಸಿಗಳನ್ನು ವಿತರಿಸಿ, ಬೀಳ್ಕೊಟ್ಟರು.

ಕೂಕ್ರಬೆಟ್ಟು ಸರ್ಕಾರಿ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹರೀಶ್‌ ಪೂಂಜ ಮಾತನಾಡಿ, ‘ಈ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ 25 ಮಂದಿ ಶಾಲೆಗೆ ಹೊಸ ರೂಪವನ್ನು ಕೊಟ್ಟಿದ್ದಾರೆ. ಕ್ವಾರಂಟೈನ್‌ ಅವಧಿಯ ದಿನಗಳನ್ನು ವ್ಯರ್ಥ ಮಾಡದೆ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಉದ್ಯೋಗ ಅರಸಿ ಪರವೂರಿಗೆ ಹೋದವರು ಸಂಕಷ್ಟಕ್ಕೆ ಸಿಲುಕಿದಾಗ ಅವರಿಗೆ ಸ್ಪಂದಿಸುವುದು ಊರಿನವರು ಕರ್ತವ್ಯ. ಈ ನಿಟ್ಟಿನಲ್ಲಿ ಇಲ್ಲಿನ ಗ್ರಾಮಸ್ಥರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್‌ ಮಾತನಾಡಿ, ‘ಮುಂಬೈನಲ್ಲಿ ಒಂದೇ ಕುಟುಂಬದಂತೆ ಇದ್ದ 25 ಮಂದಿ ಕೂಕ್ರಬೆಟ್ಟು ಶಾಲೆಗೆ ಬಸ್‌ನಲ್ಲಿ ಬಂದು 14 ದಿನ ಕ್ವಾರಂಟೈನ್‌ ಮುಗಿಸಿದ್ದಾರೆ. ಅವರು ಕೂಕ್ರಬೆಟ್ಟು ಶಾಲೆಯಲ್ಲಿ ಶ್ರಮದಾನದ ಮೂಲಕ ಶಾಲೆಗೆ ವಿಶೇಷ ಮೆರುಗು ನೀಡಿದ್ದಾರೆ. ದಾನಿಗಳ ಸಹಕಾರದಿಂದ ಅವರಿಗೆ ಊಟೋಪಚಾರ ನೀಡಲಾಗಿದೆ. ಮರೋಡಿ ಗ್ರಾಮದಲ್ಲಿ ಕ್ವಾರಂಟೈನ್‌ನಲ್ಲಿದ್ದ ಎಲ್ಲರ ಕೋವಿಡ್‌ ವರದಿ ನೆಗೆಟಿವ್‌ ಬಂದಿದೆ’ ಎಂದರು.

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ, ಧಾರ್ಮಿಕ ಪರಿಷತ್‌ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾತನಾಡಿ, ‘ತುಳುನಾಡಿನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಮುಂಬೈ ಕನ್ನಡಿಗರ ಕೊಡುಗೆ ಅಪಾರವಾದುದು. ಕೋವಿಡ್‌ನಿಂದಾಗಿ ಮುಂಬೈನಲ್ಲಿ ಸಂಕಷ್ಟ ಎದುರಾದಾಗ ನಮ್ಮವರ ಕಷ್ಟಕ್ಕೆ ಸ್ಪಂದಿಸುವುದು ಮಾನವೀಯತೆ’ ಎಂದು ಹೇಳಿದರು.

ಮರೋಡಿ ಶ್ರೀ ಆದಿಶಕ್ತಿ ಸೇವಾ ಸಮಿತಿಯ ಅಧ್ಯಕ್ಷ ರತ್ನಾಕರ ಬುಣ್ಣಾನ್‌, ಕೂಕ್ರಬೆಟ್ಟು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜುಪೂಜಾರಿ, ಮುಖ್ಯಶಿಕ್ಷಕಿ ಸುಫಲಾ, ಮರೋಡಿ ಗ್ರಾಮ ಪಂಚಾಯಿತಿ ಪಿಡಿಒ ಆಶಾಲತಾ, ಸದಸ್ಯರಾದ ಉಮೇಶ್‌ ಪೂಜಾರಿ, ಪದ್ಮಶ್ರೀ ಜೈನ್‌, ಶಿವಾನಂದ ಆಚಾರ್ಯ, ಬಾರ್ಯ ಸಿ.ಎ. ಬ್ಯಾಂಕ್‌ ಅಧ್ಯಕ್ಷ ಸುಬ್ರಹ್ಮಣ್ಯ ಗೌಡ, ಸದಾನಂದ ಉಂಗಿಲಬೈಲು, ಮಾಜಿ ಅಧ್ಯಕ್ಷ ಬಾಲಕೃಷ್ಣ ಬಂಗೇರ, ಮಹೇಶ್‌ ಪೂಜಾರಿ ಮರೋಡಿ ಮತ್ತಿತರರು ಉಪಸ್ಥಿತರಿದ್ದರು.

Spread the love
  • Related Posts

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟಗೊಳ್ಳಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು: ದಿನಾಂಕ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರ ನೇತೃತ್ವದಲ್ಲಿ ಏಪ್ರಿಲ್ 14ರಿಂದ ಪ್ರಾರಂಭವಾಗಿ ಏಪ್ರಿಲ್ 21ರಂದು ಮಂಗಳವಾರ ಬ್ರಹ್ಮರಥೋತ್ಸವದ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ನೆರವೇರಿತು. ರಾತ್ರಿ ಒಳಾಂಗಣದಲ್ಲಿ…

    Spread the love

    You Missed

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 15 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 39 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 25 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 57 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 44 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!