ಕ್ವಾರಂಟೈನ್‌ ದಿನಗಳನ್ನು ವ್ಯರ್ಥ ಮಾಡದೆ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಿ ರಾಜ್ಯಕ್ಕೆ ಮಾದರಿಯಾದ ಮುಂಬೈ ಕನ್ನಡಿಗರು

ಬೆಳ್ತಂಗಡಿ: ಮುಂಬೈನಿಂದ ಬಂದು ಮರೋಡಿ ಗ್ರಾಮದ ಮೂರು ಶಾಲೆಗಳಲ್ಲಿ ಕ್ವಾರಂಟೈನ್‌ನಲ್ಲಿದ್ದ ಸುಮಾರು 64 ಮಂದಿಗೆ ಶಾಸಕ ಹರೀಶ್‌ ಪೂಂಜ ಅವರು ಭಾನುವಾರ ತೆಂಗಿನ ಸಸಿಗಳನ್ನು ವಿತರಿಸಿ, ಬೀಳ್ಕೊಟ್ಟರು.

ಕೂಕ್ರಬೆಟ್ಟು ಸರ್ಕಾರಿ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹರೀಶ್‌ ಪೂಂಜ ಮಾತನಾಡಿ, ‘ಈ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ 25 ಮಂದಿ ಶಾಲೆಗೆ ಹೊಸ ರೂಪವನ್ನು ಕೊಟ್ಟಿದ್ದಾರೆ. ಕ್ವಾರಂಟೈನ್‌ ಅವಧಿಯ ದಿನಗಳನ್ನು ವ್ಯರ್ಥ ಮಾಡದೆ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಉದ್ಯೋಗ ಅರಸಿ ಪರವೂರಿಗೆ ಹೋದವರು ಸಂಕಷ್ಟಕ್ಕೆ ಸಿಲುಕಿದಾಗ ಅವರಿಗೆ ಸ್ಪಂದಿಸುವುದು ಊರಿನವರು ಕರ್ತವ್ಯ. ಈ ನಿಟ್ಟಿನಲ್ಲಿ ಇಲ್ಲಿನ ಗ್ರಾಮಸ್ಥರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್‌ ಮಾತನಾಡಿ, ‘ಮುಂಬೈನಲ್ಲಿ ಒಂದೇ ಕುಟುಂಬದಂತೆ ಇದ್ದ 25 ಮಂದಿ ಕೂಕ್ರಬೆಟ್ಟು ಶಾಲೆಗೆ ಬಸ್‌ನಲ್ಲಿ ಬಂದು 14 ದಿನ ಕ್ವಾರಂಟೈನ್‌ ಮುಗಿಸಿದ್ದಾರೆ. ಅವರು ಕೂಕ್ರಬೆಟ್ಟು ಶಾಲೆಯಲ್ಲಿ ಶ್ರಮದಾನದ ಮೂಲಕ ಶಾಲೆಗೆ ವಿಶೇಷ ಮೆರುಗು ನೀಡಿದ್ದಾರೆ. ದಾನಿಗಳ ಸಹಕಾರದಿಂದ ಅವರಿಗೆ ಊಟೋಪಚಾರ ನೀಡಲಾಗಿದೆ. ಮರೋಡಿ ಗ್ರಾಮದಲ್ಲಿ ಕ್ವಾರಂಟೈನ್‌ನಲ್ಲಿದ್ದ ಎಲ್ಲರ ಕೋವಿಡ್‌ ವರದಿ ನೆಗೆಟಿವ್‌ ಬಂದಿದೆ’ ಎಂದರು.

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ, ಧಾರ್ಮಿಕ ಪರಿಷತ್‌ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾತನಾಡಿ, ‘ತುಳುನಾಡಿನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಮುಂಬೈ ಕನ್ನಡಿಗರ ಕೊಡುಗೆ ಅಪಾರವಾದುದು. ಕೋವಿಡ್‌ನಿಂದಾಗಿ ಮುಂಬೈನಲ್ಲಿ ಸಂಕಷ್ಟ ಎದುರಾದಾಗ ನಮ್ಮವರ ಕಷ್ಟಕ್ಕೆ ಸ್ಪಂದಿಸುವುದು ಮಾನವೀಯತೆ’ ಎಂದು ಹೇಳಿದರು.

ಮರೋಡಿ ಶ್ರೀ ಆದಿಶಕ್ತಿ ಸೇವಾ ಸಮಿತಿಯ ಅಧ್ಯಕ್ಷ ರತ್ನಾಕರ ಬುಣ್ಣಾನ್‌, ಕೂಕ್ರಬೆಟ್ಟು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜುಪೂಜಾರಿ, ಮುಖ್ಯಶಿಕ್ಷಕಿ ಸುಫಲಾ, ಮರೋಡಿ ಗ್ರಾಮ ಪಂಚಾಯಿತಿ ಪಿಡಿಒ ಆಶಾಲತಾ, ಸದಸ್ಯರಾದ ಉಮೇಶ್‌ ಪೂಜಾರಿ, ಪದ್ಮಶ್ರೀ ಜೈನ್‌, ಶಿವಾನಂದ ಆಚಾರ್ಯ, ಬಾರ್ಯ ಸಿ.ಎ. ಬ್ಯಾಂಕ್‌ ಅಧ್ಯಕ್ಷ ಸುಬ್ರಹ್ಮಣ್ಯ ಗೌಡ, ಸದಾನಂದ ಉಂಗಿಲಬೈಲು, ಮಾಜಿ ಅಧ್ಯಕ್ಷ ಬಾಲಕೃಷ್ಣ ಬಂಗೇರ, ಮಹೇಶ್‌ ಪೂಜಾರಿ ಮರೋಡಿ ಮತ್ತಿತರರು ಉಪಸ್ಥಿತರಿದ್ದರು.

Spread the love
  • Related Posts

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಿಸಿಲಿನ ತಾಪಮಾನವು ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ತೀವ್ರ ಉಷ್ಣತೆಯಿಂದ ಮಾನವರ ಜೊತೆಗೆ ಪ್ರಾಣಿ–ಪಕ್ಷಿಗಳೂ ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿವೆ. ವಿಶೇಷವಾಗಿ ನೀರಿನ ಕೊರತೆಯಿಂದ ಅನೇಕ ಪಕ್ಷಿಗಳು ಹಾಗೂ ಪ್ರಾಣಿಗಳು ಜೀವಕ್ಕೆ ಹಾನಿಯಾಗುವ ಪರಿಸ್ಥಿತಿ ಎದುರಿಸುತ್ತಿವೆ.…

    Spread the love

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯದ ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಲಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಸುಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು ಮಾಡಿ 2025-26…

    Spread the love

    You Missed

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 26 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 76 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 77 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    • By admin
    • April 27, 2026
    • 22 views
    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    • By admin
    • April 26, 2026
    • 78 views
    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    • By admin
    • April 26, 2026
    • 78 views
    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು