ಕ್ವಾರಂಟೈನ್‌ ದಿನಗಳನ್ನು ವ್ಯರ್ಥ ಮಾಡದೆ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಿ ರಾಜ್ಯಕ್ಕೆ ಮಾದರಿಯಾದ ಮುಂಬೈ ಕನ್ನಡಿಗರು

ಬೆಳ್ತಂಗಡಿ: ಮುಂಬೈನಿಂದ ಬಂದು ಮರೋಡಿ ಗ್ರಾಮದ ಮೂರು ಶಾಲೆಗಳಲ್ಲಿ ಕ್ವಾರಂಟೈನ್‌ನಲ್ಲಿದ್ದ ಸುಮಾರು 64 ಮಂದಿಗೆ ಶಾಸಕ ಹರೀಶ್‌ ಪೂಂಜ ಅವರು ಭಾನುವಾರ ತೆಂಗಿನ ಸಸಿಗಳನ್ನು ವಿತರಿಸಿ, ಬೀಳ್ಕೊಟ್ಟರು.

ಕೂಕ್ರಬೆಟ್ಟು ಸರ್ಕಾರಿ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹರೀಶ್‌ ಪೂಂಜ ಮಾತನಾಡಿ, ‘ಈ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ 25 ಮಂದಿ ಶಾಲೆಗೆ ಹೊಸ ರೂಪವನ್ನು ಕೊಟ್ಟಿದ್ದಾರೆ. ಕ್ವಾರಂಟೈನ್‌ ಅವಧಿಯ ದಿನಗಳನ್ನು ವ್ಯರ್ಥ ಮಾಡದೆ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಉದ್ಯೋಗ ಅರಸಿ ಪರವೂರಿಗೆ ಹೋದವರು ಸಂಕಷ್ಟಕ್ಕೆ ಸಿಲುಕಿದಾಗ ಅವರಿಗೆ ಸ್ಪಂದಿಸುವುದು ಊರಿನವರು ಕರ್ತವ್ಯ. ಈ ನಿಟ್ಟಿನಲ್ಲಿ ಇಲ್ಲಿನ ಗ್ರಾಮಸ್ಥರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್‌ ಮಾತನಾಡಿ, ‘ಮುಂಬೈನಲ್ಲಿ ಒಂದೇ ಕುಟುಂಬದಂತೆ ಇದ್ದ 25 ಮಂದಿ ಕೂಕ್ರಬೆಟ್ಟು ಶಾಲೆಗೆ ಬಸ್‌ನಲ್ಲಿ ಬಂದು 14 ದಿನ ಕ್ವಾರಂಟೈನ್‌ ಮುಗಿಸಿದ್ದಾರೆ. ಅವರು ಕೂಕ್ರಬೆಟ್ಟು ಶಾಲೆಯಲ್ಲಿ ಶ್ರಮದಾನದ ಮೂಲಕ ಶಾಲೆಗೆ ವಿಶೇಷ ಮೆರುಗು ನೀಡಿದ್ದಾರೆ. ದಾನಿಗಳ ಸಹಕಾರದಿಂದ ಅವರಿಗೆ ಊಟೋಪಚಾರ ನೀಡಲಾಗಿದೆ. ಮರೋಡಿ ಗ್ರಾಮದಲ್ಲಿ ಕ್ವಾರಂಟೈನ್‌ನಲ್ಲಿದ್ದ ಎಲ್ಲರ ಕೋವಿಡ್‌ ವರದಿ ನೆಗೆಟಿವ್‌ ಬಂದಿದೆ’ ಎಂದರು.

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ, ಧಾರ್ಮಿಕ ಪರಿಷತ್‌ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾತನಾಡಿ, ‘ತುಳುನಾಡಿನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಮುಂಬೈ ಕನ್ನಡಿಗರ ಕೊಡುಗೆ ಅಪಾರವಾದುದು. ಕೋವಿಡ್‌ನಿಂದಾಗಿ ಮುಂಬೈನಲ್ಲಿ ಸಂಕಷ್ಟ ಎದುರಾದಾಗ ನಮ್ಮವರ ಕಷ್ಟಕ್ಕೆ ಸ್ಪಂದಿಸುವುದು ಮಾನವೀಯತೆ’ ಎಂದು ಹೇಳಿದರು.

ಮರೋಡಿ ಶ್ರೀ ಆದಿಶಕ್ತಿ ಸೇವಾ ಸಮಿತಿಯ ಅಧ್ಯಕ್ಷ ರತ್ನಾಕರ ಬುಣ್ಣಾನ್‌, ಕೂಕ್ರಬೆಟ್ಟು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜುಪೂಜಾರಿ, ಮುಖ್ಯಶಿಕ್ಷಕಿ ಸುಫಲಾ, ಮರೋಡಿ ಗ್ರಾಮ ಪಂಚಾಯಿತಿ ಪಿಡಿಒ ಆಶಾಲತಾ, ಸದಸ್ಯರಾದ ಉಮೇಶ್‌ ಪೂಜಾರಿ, ಪದ್ಮಶ್ರೀ ಜೈನ್‌, ಶಿವಾನಂದ ಆಚಾರ್ಯ, ಬಾರ್ಯ ಸಿ.ಎ. ಬ್ಯಾಂಕ್‌ ಅಧ್ಯಕ್ಷ ಸುಬ್ರಹ್ಮಣ್ಯ ಗೌಡ, ಸದಾನಂದ ಉಂಗಿಲಬೈಲು, ಮಾಜಿ ಅಧ್ಯಕ್ಷ ಬಾಲಕೃಷ್ಣ ಬಂಗೇರ, ಮಹೇಶ್‌ ಪೂಜಾರಿ ಮರೋಡಿ ಮತ್ತಿತರರು ಉಪಸ್ಥಿತರಿದ್ದರು.

Spread the love
  • Related Posts

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    🖊️• ಚೈತ್ರೇಶ್ ಸಿ. ಪತ್ರಕರ್ತರು, ಬೆಳ್ತಂಗಡಿ ಶಿಕ್ಷಣವೆಂಬುದು ವ್ಯಾಪಾರ ಆದಾಗಿನಿಂದ ಫಲಿತಾಂಶವೆಂಬುದು ವಿದ್ಯಾರ್ಥಿಗಳ ಪಾಲಿಗೆ ಮಾನಸಿಕ ಖಿನ್ನತೆಯ ಭಾಗವಾಗಿದೆ. ಮೌಲ್ಯಮಾಪನ ಮಾಡುವ ಕೆಲ ಉಪನ್ಯಾಸಕರ ನಿಲುವಿನಿಂದ ಮೌಲ್ಯಮಾಪನ ಮೌಲ್ಯವನ್ನೇ ಕಳೆದುಕೊಳ್ಳುವಂತಾಗಿದೆ. ಇದಕ್ಕೆ ಕಾರಣ ಪ್ರಸಕ್ತ ಸಾಲಿನ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ…

    Spread the love

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ  ಮೊಬೈಲ್ ಫೋನ್ ನ್ನು ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ  ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ.  ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್…

    Spread the love

    You Missed

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 61 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 37 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 36 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 92 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

    • By admin
    • May 7, 2026
    • 23 views
    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

    ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅಮಾನತು ಆದೇಶ ರದ್ದು???

    • By admin
    • May 7, 2026
    • 10 views
    ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅಮಾನತು ಆದೇಶ ರದ್ದು???