ಕ್ವಾರಂಟೈನ್‌ ದಿನಗಳನ್ನು ವ್ಯರ್ಥ ಮಾಡದೆ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಿ ರಾಜ್ಯಕ್ಕೆ ಮಾದರಿಯಾದ ಮುಂಬೈ ಕನ್ನಡಿಗರು

ಬೆಳ್ತಂಗಡಿ: ಮುಂಬೈನಿಂದ ಬಂದು ಮರೋಡಿ ಗ್ರಾಮದ ಮೂರು ಶಾಲೆಗಳಲ್ಲಿ ಕ್ವಾರಂಟೈನ್‌ನಲ್ಲಿದ್ದ ಸುಮಾರು 64 ಮಂದಿಗೆ ಶಾಸಕ ಹರೀಶ್‌ ಪೂಂಜ ಅವರು ಭಾನುವಾರ ತೆಂಗಿನ ಸಸಿಗಳನ್ನು ವಿತರಿಸಿ, ಬೀಳ್ಕೊಟ್ಟರು.

ಕೂಕ್ರಬೆಟ್ಟು ಸರ್ಕಾರಿ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹರೀಶ್‌ ಪೂಂಜ ಮಾತನಾಡಿ, ‘ಈ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ 25 ಮಂದಿ ಶಾಲೆಗೆ ಹೊಸ ರೂಪವನ್ನು ಕೊಟ್ಟಿದ್ದಾರೆ. ಕ್ವಾರಂಟೈನ್‌ ಅವಧಿಯ ದಿನಗಳನ್ನು ವ್ಯರ್ಥ ಮಾಡದೆ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಉದ್ಯೋಗ ಅರಸಿ ಪರವೂರಿಗೆ ಹೋದವರು ಸಂಕಷ್ಟಕ್ಕೆ ಸಿಲುಕಿದಾಗ ಅವರಿಗೆ ಸ್ಪಂದಿಸುವುದು ಊರಿನವರು ಕರ್ತವ್ಯ. ಈ ನಿಟ್ಟಿನಲ್ಲಿ ಇಲ್ಲಿನ ಗ್ರಾಮಸ್ಥರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್‌ ಮಾತನಾಡಿ, ‘ಮುಂಬೈನಲ್ಲಿ ಒಂದೇ ಕುಟುಂಬದಂತೆ ಇದ್ದ 25 ಮಂದಿ ಕೂಕ್ರಬೆಟ್ಟು ಶಾಲೆಗೆ ಬಸ್‌ನಲ್ಲಿ ಬಂದು 14 ದಿನ ಕ್ವಾರಂಟೈನ್‌ ಮುಗಿಸಿದ್ದಾರೆ. ಅವರು ಕೂಕ್ರಬೆಟ್ಟು ಶಾಲೆಯಲ್ಲಿ ಶ್ರಮದಾನದ ಮೂಲಕ ಶಾಲೆಗೆ ವಿಶೇಷ ಮೆರುಗು ನೀಡಿದ್ದಾರೆ. ದಾನಿಗಳ ಸಹಕಾರದಿಂದ ಅವರಿಗೆ ಊಟೋಪಚಾರ ನೀಡಲಾಗಿದೆ. ಮರೋಡಿ ಗ್ರಾಮದಲ್ಲಿ ಕ್ವಾರಂಟೈನ್‌ನಲ್ಲಿದ್ದ ಎಲ್ಲರ ಕೋವಿಡ್‌ ವರದಿ ನೆಗೆಟಿವ್‌ ಬಂದಿದೆ’ ಎಂದರು.

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ, ಧಾರ್ಮಿಕ ಪರಿಷತ್‌ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾತನಾಡಿ, ‘ತುಳುನಾಡಿನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಮುಂಬೈ ಕನ್ನಡಿಗರ ಕೊಡುಗೆ ಅಪಾರವಾದುದು. ಕೋವಿಡ್‌ನಿಂದಾಗಿ ಮುಂಬೈನಲ್ಲಿ ಸಂಕಷ್ಟ ಎದುರಾದಾಗ ನಮ್ಮವರ ಕಷ್ಟಕ್ಕೆ ಸ್ಪಂದಿಸುವುದು ಮಾನವೀಯತೆ’ ಎಂದು ಹೇಳಿದರು.

ಮರೋಡಿ ಶ್ರೀ ಆದಿಶಕ್ತಿ ಸೇವಾ ಸಮಿತಿಯ ಅಧ್ಯಕ್ಷ ರತ್ನಾಕರ ಬುಣ್ಣಾನ್‌, ಕೂಕ್ರಬೆಟ್ಟು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜುಪೂಜಾರಿ, ಮುಖ್ಯಶಿಕ್ಷಕಿ ಸುಫಲಾ, ಮರೋಡಿ ಗ್ರಾಮ ಪಂಚಾಯಿತಿ ಪಿಡಿಒ ಆಶಾಲತಾ, ಸದಸ್ಯರಾದ ಉಮೇಶ್‌ ಪೂಜಾರಿ, ಪದ್ಮಶ್ರೀ ಜೈನ್‌, ಶಿವಾನಂದ ಆಚಾರ್ಯ, ಬಾರ್ಯ ಸಿ.ಎ. ಬ್ಯಾಂಕ್‌ ಅಧ್ಯಕ್ಷ ಸುಬ್ರಹ್ಮಣ್ಯ ಗೌಡ, ಸದಾನಂದ ಉಂಗಿಲಬೈಲು, ಮಾಜಿ ಅಧ್ಯಕ್ಷ ಬಾಲಕೃಷ್ಣ ಬಂಗೇರ, ಮಹೇಶ್‌ ಪೂಜಾರಿ ಮರೋಡಿ ಮತ್ತಿತರರು ಉಪಸ್ಥಿತರಿದ್ದರು.

Spread the love
  • Related Posts

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ(Illegal land allocation) ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನದ(Arrest) ಭೀತಿ ಎದುರಿಸುತ್ತಿರುವ ಕಂದಾಯ ಮತ್ತು ಭೂಮಾಪನಾ (Survey) ಇಲಾಖೆಯ ನೂರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಮೂಹಿಕ ರಜೆ ಮೇಲೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ…

    Spread the love

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಿ…

    Spread the love

    You Missed

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 7 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 5 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 4 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 6 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 8 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 11 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ