ಕ್ವಾರಂಟೈನ್‌ ದಿನಗಳನ್ನು ವ್ಯರ್ಥ ಮಾಡದೆ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಿ ರಾಜ್ಯಕ್ಕೆ ಮಾದರಿಯಾದ ಮುಂಬೈ ಕನ್ನಡಿಗರು

ಬೆಳ್ತಂಗಡಿ: ಮುಂಬೈನಿಂದ ಬಂದು ಮರೋಡಿ ಗ್ರಾಮದ ಮೂರು ಶಾಲೆಗಳಲ್ಲಿ ಕ್ವಾರಂಟೈನ್‌ನಲ್ಲಿದ್ದ ಸುಮಾರು 64 ಮಂದಿಗೆ ಶಾಸಕ ಹರೀಶ್‌ ಪೂಂಜ ಅವರು ಭಾನುವಾರ ತೆಂಗಿನ ಸಸಿಗಳನ್ನು ವಿತರಿಸಿ, ಬೀಳ್ಕೊಟ್ಟರು.

ಕೂಕ್ರಬೆಟ್ಟು ಸರ್ಕಾರಿ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹರೀಶ್‌ ಪೂಂಜ ಮಾತನಾಡಿ, ‘ಈ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ 25 ಮಂದಿ ಶಾಲೆಗೆ ಹೊಸ ರೂಪವನ್ನು ಕೊಟ್ಟಿದ್ದಾರೆ. ಕ್ವಾರಂಟೈನ್‌ ಅವಧಿಯ ದಿನಗಳನ್ನು ವ್ಯರ್ಥ ಮಾಡದೆ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಉದ್ಯೋಗ ಅರಸಿ ಪರವೂರಿಗೆ ಹೋದವರು ಸಂಕಷ್ಟಕ್ಕೆ ಸಿಲುಕಿದಾಗ ಅವರಿಗೆ ಸ್ಪಂದಿಸುವುದು ಊರಿನವರು ಕರ್ತವ್ಯ. ಈ ನಿಟ್ಟಿನಲ್ಲಿ ಇಲ್ಲಿನ ಗ್ರಾಮಸ್ಥರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್‌ ಮಾತನಾಡಿ, ‘ಮುಂಬೈನಲ್ಲಿ ಒಂದೇ ಕುಟುಂಬದಂತೆ ಇದ್ದ 25 ಮಂದಿ ಕೂಕ್ರಬೆಟ್ಟು ಶಾಲೆಗೆ ಬಸ್‌ನಲ್ಲಿ ಬಂದು 14 ದಿನ ಕ್ವಾರಂಟೈನ್‌ ಮುಗಿಸಿದ್ದಾರೆ. ಅವರು ಕೂಕ್ರಬೆಟ್ಟು ಶಾಲೆಯಲ್ಲಿ ಶ್ರಮದಾನದ ಮೂಲಕ ಶಾಲೆಗೆ ವಿಶೇಷ ಮೆರುಗು ನೀಡಿದ್ದಾರೆ. ದಾನಿಗಳ ಸಹಕಾರದಿಂದ ಅವರಿಗೆ ಊಟೋಪಚಾರ ನೀಡಲಾಗಿದೆ. ಮರೋಡಿ ಗ್ರಾಮದಲ್ಲಿ ಕ್ವಾರಂಟೈನ್‌ನಲ್ಲಿದ್ದ ಎಲ್ಲರ ಕೋವಿಡ್‌ ವರದಿ ನೆಗೆಟಿವ್‌ ಬಂದಿದೆ’ ಎಂದರು.

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ, ಧಾರ್ಮಿಕ ಪರಿಷತ್‌ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾತನಾಡಿ, ‘ತುಳುನಾಡಿನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಮುಂಬೈ ಕನ್ನಡಿಗರ ಕೊಡುಗೆ ಅಪಾರವಾದುದು. ಕೋವಿಡ್‌ನಿಂದಾಗಿ ಮುಂಬೈನಲ್ಲಿ ಸಂಕಷ್ಟ ಎದುರಾದಾಗ ನಮ್ಮವರ ಕಷ್ಟಕ್ಕೆ ಸ್ಪಂದಿಸುವುದು ಮಾನವೀಯತೆ’ ಎಂದು ಹೇಳಿದರು.

ಮರೋಡಿ ಶ್ರೀ ಆದಿಶಕ್ತಿ ಸೇವಾ ಸಮಿತಿಯ ಅಧ್ಯಕ್ಷ ರತ್ನಾಕರ ಬುಣ್ಣಾನ್‌, ಕೂಕ್ರಬೆಟ್ಟು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜುಪೂಜಾರಿ, ಮುಖ್ಯಶಿಕ್ಷಕಿ ಸುಫಲಾ, ಮರೋಡಿ ಗ್ರಾಮ ಪಂಚಾಯಿತಿ ಪಿಡಿಒ ಆಶಾಲತಾ, ಸದಸ್ಯರಾದ ಉಮೇಶ್‌ ಪೂಜಾರಿ, ಪದ್ಮಶ್ರೀ ಜೈನ್‌, ಶಿವಾನಂದ ಆಚಾರ್ಯ, ಬಾರ್ಯ ಸಿ.ಎ. ಬ್ಯಾಂಕ್‌ ಅಧ್ಯಕ್ಷ ಸುಬ್ರಹ್ಮಣ್ಯ ಗೌಡ, ಸದಾನಂದ ಉಂಗಿಲಬೈಲು, ಮಾಜಿ ಅಧ್ಯಕ್ಷ ಬಾಲಕೃಷ್ಣ ಬಂಗೇರ, ಮಹೇಶ್‌ ಪೂಜಾರಿ ಮರೋಡಿ ಮತ್ತಿತರರು ಉಪಸ್ಥಿತರಿದ್ದರು.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 9 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 9 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 6 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 11 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 11 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 14 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ