ಅಡಿಕೆ ಖರೀದಿಸಿ ಹಣ ನೀಡದೆ ಪಂಗನಾಮ! ಅಡಿಕೆ ಖರೀದಿಸಿದ ವ್ಯಾಪಾರಿ ನಿಗೂಢ ನಾಪತ್ತೆ! ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಅಡಿಕೆ ವ್ಯಾಪಾರಿಯೊಬ್ಬರು ಅಡಿಕೆ ಬೆಳೆಗಾರರಿಂದ ಅಡಿಕೆ ಖರೀದಿಸಿ ಹಣ ನೀಡದೇ ವಂಚನೆ ಮಾಡಿರುವ ಘಟನೆ ಬಂದಾರು ಗ್ರಾಮದ ಪಾಣೆಕಲ್ಲು ಎಂಬಲ್ಲಿ ನಡೆದಿದೆ.

ತಾಲೂಕಿನ ಬಂದಾರು ಗ್ರಾಮದ ಪಾಣೆಕಲ್ಲು ಬಟ್ಲಡ್ಕ ಎಂಟರ್‌ ಪ್ರೈಸಸ್ಸ್‌ನ ಅಡಿಕೆ ವ್ಯಾಪಾರಸ್ಥ ಬಿ ಎಮ್‌ ರಫೀಕ್‌ ರವರೊಂದಿಗೆ ದೂರುದಾರ ಡಾಕಯ್ಯ ಗೌಡ ಕೊಯ್ಯೂರು ಇವರು ಸುಮಾರು 3 ವರ್ಷಗಳಿಂದ ಅಡಿಕೆ ನೀಡುತ್ತಾ ವ್ಯವಹಾರವನ್ನು ಮಾಡುತ್ತಾ ಬಂದಿರುತ್ತಾರೆ.

ಅಡಿಕೆಗೆ ಮಾರುಕಟ್ಟೆ ಧಾರಣೆಗೆ ಅನುಗುಣವಾಗಿ ದರ ನಿಗದಿಮಾಡುತ್ತಿದ್ದು ಅಗತ್ಯ ಬಂದಾಗ ಆತನಿಂದ ಹಣ ಪಡೆದುಕೊಳ್ಳುತ್ತಿದ್ದರು . 07-05-2020 ರಂದು ಐದು ಲಕ್ಷದ ಇಪ್ಪತ್ತೈದುಸಾವಿರದ ಐನೂರಾ ಎಂಬತ್ತೆಂಟು ರೂಪಾಯಿ ಮೊತ್ತದ ಅಡಿಕೆಯನ್ನು ಬಿ ಎಮ್‌ ರಫೀಕ್‌ ರವರಿಗೆ ಕೊಟ್ಟಿದ್ದು ಆ ಸಮಯ ಎರಡು ಲಕ್ಷದ ಇಪ್ಪತ್ತು ಸಾವಿರ ರೂಪಾಯಿಯನ್ನು ನೀಡಿದ್ದು ಉಳಿದ ಮೂರು ಲಕ್ಷದ ಐದು ಸಾವಿರದ ಐನೂರಾ ಎಂಬತ್ತೆಂಟು ರೂಪಾಯಿಯನ್ನು (3,05,588/-) ಒಂದು ವಾರ ಬಿಟ್ಟು ನೀಡುತ್ತೇನೆಂದು ತಿಳಿಸಿದ್ದು ಅದರಂತೆ ಮೇಲಿನ ವಿಶ್ವಾಸದಿಂದ ಒಪ್ಪಿಕೊಂಡು ಒಂದು ವಾರ ಬಿಟ್ಟು ಹೋದಾಗ ಮತ್ತೆ 10 ದಿನಗಳ ಕಾಲಾವಕಾಶ ಕೇಳಿದ್ದು ಅದರಂತೆ 26-05-2020 ರಂದು ಆತನ ಅಂಗಡಿಗೆ ಹೋದಾಗ ಆತನ ಅಂಗಡಿ ಮುಚ್ಚಿದ್ದು ಆತನಿಗೆ ದೂರವಾಣಿ ಕರೆಮಾಡಿದಾಗ ಕರೆ ಸ್ವೀಕರಿಸದೇ ಇದ್ದುದ್ದರಿಂದ ಆತನ ಮಗನಾದ ರಮೀಜಾ ನಲ್ಲಿ ವಿಚಾರಿಸಿದಾಗ ಆತನು ಕೂಡಾ ಆತನ ತಂದೆ ಎಲ್ಲಿರುತ್ತಾರೆ ಎಂದು ತಿಳಿಸಿದೇ ತಂದೆಯ ಮೋಸಕ್ಕೆ ಸಹಕರಿಸಿರುತ್ತಾನೆ ಎಂಬುದು ತಿಳಿದು ಬಂದಿದೆ.

ತಾಲೂಕಿನ ಬಂದಾರು, ಮೊಗ್ರು, ಕೊಯ್ಯೂರು, ಬೆಳಾಲು ಗ್ರಾಮದ 100ಕ್ಕೂ ಆಧಿಕ ಗ್ರಾಹಕರ ಮನವೊಲಿಸಿ ವಿಶ್ವಾಸದ ನೆಲೆಯಲ್ಲಿ ಮುಂಗಡ ಅಡಕೆ ಖರೀದಿಸಿ ಸುಮಾರು 1.5 ಕೋಟಿ ರೂಪಾಯಿಗಳನ್ನು ಕೊಡಲು ಬಾಕಿ ಇಟ್ಟುಕೊಂಡಿದ್ದ ಅಡಿಕೆ ವ್ಯಾಪಾರಿ ರಫೀಕ್ ಅವರು ಇದೀಗ ಒಂದು ವಾರದಿಂದ ನಾಪತ್ತೆಯಾಗಿದ್ದು ಗ್ರಾಹಕರ ಆತಂಕಕ್ಕೆ ಕಾರಣವಾಗಿದೆ.

ಈ ಬಗ್ಗೆ ಊರಿನಲ್ಲಿ ವಿಚಾರಿಸಿದಾಗ ರಮಾನಂದ ಭಟ್‌, ಗೋವಿಂದ, ದಿನೇಶ್‌ ಕಿಣಾಜೆ, ನಾರಾಯಣ ಮೈಂದಕೋಡಿ, ಪೂವಪ್ಪ ಗೌಡ ಉಮಿಯಾ, ಲಿಂಗಪ್ಪ ಗೌಡ ಕಜೆ, ನಾಣ್ಯಪ್ಪ ಗೌಡ ಡೆಂಬುಗ, ಲಿಂಗಪ್ಪ ಗೌಡ ಉಮಿಯಾ, ಕುಶಾಲಪ್ಪ ಗೌಡ ಬಂದಾರು,ಧನಂಜಯ ಉಗ್ರೋಡಿ ಹಾಗೂ ಇನ್ನು ಕೆಲವರಿಂದ ಕೂಡಾ ಅಡಿಕೆ ಖರೀದಿಸಿ ಹಣ ನೀಡದೇ ಮೋಸ ಮಾಡಿರುತ್ತಾರೆ ಎಂಬುದಾಗಿ ತಿಳಿದುಬಂದಿದೆ.

ಈ ಬಗ್ಗೆ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಡಾಕಯ್ಯ ಗೌಡ ಕೊಯ್ಯೂರುರವರು ನೀಡಿದ ದೂರಿನ ಅನ್ವಯ ಅಡಿಕೆ ವ್ಯಾಪಾರಿ ಬಿ.ಎಮ್‌ ರಫೀಕ್‌ ಹಾಗೂ ಆತನ ಮಗನಾದ ರಮೀಜಾ ವಿರುದ್ಧ ಪ್ರಕರಣ ದಾಖಲಾಗಿದ್ದು ಆರೋಪಿಯ ಪತ್ತೆಗಾಗಿ ಪೋಲೀಸರು ಬಲೆ ಬೀಸಿದ್ದಾರೆ.

Spread the love
  • Related Posts

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡ ಉದ್ಘಾಟನೆ ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.…

    Spread the love

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಸಿಇಟಿ ಫಲಿತಾಂಶದಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ ಗುರುವಾಯನಕೆರೆ, ಜೂನ್ 7: ಇತ್ತೀಚೆಗೆ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಮ್ಮೆ ಗಮನಾರ್ಹ ಸಾಧನೆ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಮೇಲುಗೈಯನ್ನು…

    Spread the love

    You Missed

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 185 views

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 239 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 104 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 88 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 40 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 37 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ