50 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜಾರವರು ನೆರವೇರಿಸಿದರು

ಬೆಳ್ತಂಗಡಿ: ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾನಗರ, ನಂದಿಕಾಡು, ಸಿಂಗನಾರು ಪರಿಶಿಷ್ಟ ಪಂಗಡಗಳ ಸುಮಾರು 50 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.ಕಳೆದ 65 ವರುಷಗಳಿಂದ ರಸ್ತೆಗಾಗಿ ಹಲವಾರ ಬಾರಿ ಶಾಸಕರುಗಳಿಗೆ ,ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಸ್ಪಂದಿಸಿರಲಿಲ್ಲ .ಅದರೆ ಶಾಸಕ ಹರೀಶ್ ಪೂಂಜರಿಗೆ ರಸ್ತೆಯ ಬಗ್ಗೆ ಮನವಿ ಮಾಡಿದಾಗ ತಕ್ಷಣ ಸ್ಪಂದಿಸಿ ಕೇವಲ 6 ತಿಂಗಳಲ್ಲಿ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಿ ಆ ಪರಿಸರದ ಜನತೆಯ ಕಷ್ಟವನ್ನು ದೂರ ಮಾಡಿದ್ದಾರೆ.

ಶಾಸಕರ ಈ ಕಾರ್ಯವನ್ನು ಮುಕ್ತಕಂಠದಿಂದ ಮೆಚ್ಚುಗೆ ವ್ಯಕ್ತಪಡಿಸಿದ ಸ್ಥಳೀಯರು ಶಾಸಕರನ್ನು ಸನ್ಮಾನಿಸಿ ಗೌರವಿಸಿದರು. ಕಳೆದ ಮಳೆಗಾಲದಲ್ಲಿ ಬಂದ್ದ ನೆರೆ ಸಂದರ್ಭದಲ್ಲೂ ನೆರೆಯಿಂದ ಸಂಕಟದಲ್ಲಿದ್ದಾಗ ಶಾಸಕರು ನಮ್ಮೊಂದಿಗೆ ಇದ್ದು ನಮ್ಮ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸುತ್ತ ಬಂದಿದ್ದಾರೆ ಇಂತಹ ಶಾಸಕರು ನಮಗೆ ಸಿಕ್ಕಿದ್ದು ನಮ್ಮ ಅದೃಷ್ಟ ಎಂದು ಎಂದು ಶಾಸಕರ ಬಗ್ಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೊಟ್ಯಾನ್, ರೈತ ಮೋರ್ಚಾ ಅದ್ಯಕ್ಷ ಜಯಂತ ಗೌಡ, ಜಿ.ಪಂ ಸದಸ್ಯೆ ಸೌಮ್ಯಲತಾ ಜಯಂತ್ ಗೌಡ, ಮಿತ್ತಬಾಗಿಲು ಪ.ಪಂ ಅಧ್ಯಕ್ಷ ಭಾಸ್ಕರ ಪೂಜಾರಿ,ಸದಸ್ಯ ಕೇಶವ ಎಮ್ ಕೆ, ಅಂಡಿಂಜೆ ಗ್ರಾ.ಪಂ ಅಧ್ಯಕ್ಷ ಮೋಹನ್,ಪ್ರಮುಖರಾದ ಜಯಂತ ಹೆಗ್ಡೆ ,ದಿನೇಶ್ ಗೌಡ, ಡೀಕಯ್ಯ ತೀಕ್ಷಿತ್, ಪ್ರಮೋದ್, ಸದಾಶಿವ,ಇನ್ನಿತರರು ಉಪಸ್ಥಿತರಿದ್ದರು.

ಸೇತುವೆ ನಿರ್ಮಿಸಿಕೊಡುವಂತೆ ಶಾಸಕರಿಗೆ ಮನವಿ

ಸುಮಾರು 20 ಮನೆಗಳಿಗೆ ಸಂಪರ್ಕ ಕಲ್ಪಿಸಲು ನಂದಿಕಾಡು ಕೊಟ್ರಡ್ಕ ಹೊಳೆಗೆ ಇಂದ್ಲಾಜೆ ಗುಂಡಿ ಎಂಬಲ್ಲಿ ಸೇತುವೆ ನಿರ್ಮಿಸಲು ಶಾಸಕರಿಗೆ ಸ್ಥಳೀಯ ನಿವಾಸಿಗಳು ಮನವಿ ಮಾಡಿದರು.ಇವರ ಮನವಿಗೆ ಸ್ಪಂದಿಸಿದ ಶಾಸಕರು ಮುಂದಿನ ದಿನಗಳಲ್ಲಿ ಸೇತುವೆಯ ಭರವಸೆಯನ್ನು ನೀಡಿದರು ಈ ಸಂದರ್ಭದಲ್ಲಿ ಸ್ಥಳೀಯರಾದ ಡೀಕಯ್ಯmk ,ಸುಧಾಕರ ಮಲ್ಲ,ಪದ್ಮ ಎಂ ಕೆ ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 3 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 5 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 9 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ