ಗುಟ್ಕಾ-ಪಾನ್ ಮಸಾಲ ಪ್ರೀಯರೇ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನ ಜಗಿದರೆ ಬೀಳುತ್ತೆ ಕೇಸ್! ಇಂದು 32ಮಂದಿಯ ವಿರುದ್ಧ ಪ್ರಕರಣ ದಾಖಲು!

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ-ಪಾನ್ ಮಸಾಲ ತಿನ್ನುವವರ ವಿರುದ್ಧ ಕಾರ್ಯಾಚರಣೆ ನಡೆಸಿದ ಆಹಾರ ಸುರಕ್ಷತಾ ಅಧಿಕಾರಿಗಳು, 32 ಮಂದಿಯ ವಿರುದ್ಧ ಕೇಸು ದಾಖಲಿಸಿದ್ದಾರೆ.

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ತಂಡವು ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಹಾಗೂ ಕೋಪ್ಟಾ -2003 ಕಾಯಿದೆ ಉಲ್ಲಂಘನೆ ವಿರುದ್ದ ನಗರದ ಹೊರವಲಯದ ದೇರಳಕಟ್ಟೆ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿತು.

ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಾದ ಬಸ್‍ಸ್ಟಾಂಡ್, ರಸ್ತೆ ಬದಿಗಳಲ್ಲಿ, ಅಂಗಡಿ ವಠಾರ ಮತ್ತಿತರ ಸ್ಥಳಗಳಲ್ಲಿ ಹಲವು ಮಂದಿ ಬಹಿರಂಗವಾಗಿಯೇ ಪಾನ್ ಮಸಾಲೆ ಹಾಗೂ ತಂಬಾಕು ಉತ್ಪನ್ನಗಳನ್ನು ತಿನ್ನುತ್ತಿದ್ದವರ ವಿರುದ್ಧ ಸ್ಥಳದಲ್ಲಿಯೇ ಪ್ರಕರಣ ದಾಖಲಿಸಿಕೊಂಡಿದೆ. ಒಟ್ಟು 32 ಪ್ರಕರಣ ದಾಖಲಿಸಿ ರೂ. 3100 ದಂಡ ವಿಧಿಸಲಾಯಿತು.

ಇದೇ ಸಂದರ್ಭದಲ್ಲಿ ಕೋಪ್ಟಾ ಕಾಯಿದೆಯ ಕುರಿತಂತೆ ಅಂಗಡಿ ಹಾಗೂ ಹೋಟೇಲ್ ಮಾಲಿಕರಿಗೆ ಮಾಹಿತಿ ನೀಡಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ಪಾನ್ ಮಸಾಲ ಹಾಗೂ ತಂಬಾಕು ಉತ್ಪನ್ನಗಳನ್ನು ತಿನ್ನದಂತೆ ಗ್ರಾಹಕರಿಗೆ ಸೂಚಿಸಲು ಅಂಗಡಿ ಮಾಲೀಕರಿಗೆ ಸೂಚಿಸಲಾಯಿತು. ಅಲ್ಲದೇ, ಈ ಕುರಿತು ಸಹಕರಿಸದಿದ್ದರೆ, ಕಾಯಿದೆಯನ್ವಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಯಿತು.

ಜಗಿಯುವ ತಂಬಾಕು ಹಾಗೂ ಪಾನ್ ಮಸಾಲ ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್ 19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಂಭವ ಅಧಿಕವಾಗಿದೆ. ಪ್ರಸಕ್ತ ಕೋವಿಡ್ ವ್ಯಾಪಕವಾಗಿರುವುದರಿಂದ ಈ ರೀತಿ ಪಾನ್ ಮಸಾಲೆ ತಿಂದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಹೆಚ್ಚು ಅಪಾಯಕಾರಿಯಾಗಿದೆ. ಇಂತಹ ಉಗುಳನ್ನು ಇತರ ಸಾರ್ವಜನಿಕರಿಗೆ ನಡೆದುಕೊಂಡು ಹೋಗುವಾಗ ಗೊತ್ತಿಲ್ಲದೇ ಮೆಟ್ಟುವುದರಿಂದ ಇದು ಸಾಂಕ್ರಾಮಿಕ ರೋಗ ಹಬ್ಬಲೂ ಕಾರಣವಾಗುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಹಿರಿಯ ಆಹಾರ ಸುರಕ್ಷತಾಧಿಕಾರಿ ರಾಜು, ಸಮಾಜ ಕಾರ್ಯಕರ್ತೆ ಶ್ರುತಿ ಸಾಲ್ಯಾನ್, ಕೋಣಾಜೆ ಠಾಣಾ ಪೊಲೀಸ್ ಉಪನಿರೀಕ್ಷಕ ಶರಣಪ್ಪ , ಸಿಬ್ಬಂದಿ ಪುನೀತ್, ವಿದ್ಯಾ ಮತ್ತಿತರು ಉಪಸ್ಥಿತರಿದ್ದರು.

ಮುಂದಿನ ದಿನಗಳಲ್ಲಿ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಆಹಾರ ಸುರಕ್ಷತಾಧಿಕಾರಿಗಳು ತಿಳಿಸಿದ್ದಾರೆ.

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 21 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 100 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 41 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 125 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 122 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 51 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!