‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸಿದ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು


ಬೆಳ್ತಂಗಡಿ: ಉಜಿರೆ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು ‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಮಾರುಕಟ್ಟೆ ಬೆಲೆಗಿಂತ ಅತ್ಯಂತ ಕಡಿಮೆ ದರದಲ್ಲಿ ಸಿದ್ಧಪಡಿಸಲಾಗಿದ್ದು, ಜನಸಾಮಾನ್ಯರಿಗೆ, ಸಂಘ, ಸಂಸ್ಥೆಗಳಿಗೆ ಹೀಗೆ ಎಲ್ಲರಿಗೂ ಬಳಕೆಗೆ ಯೋಗ್ಯವಾಗಿದೆ.ಮಾರುಕಟ್ಟೆಯಲ್ಲಿ ಕಾಲಿನಿಂದ ಬಳಸಬಹುದಾದ ಡಿಸ್ಪೆನ್ಸರ್‌ಗಳು ಲಭ್ಯವಿದ್ದರೂ ಬಳಕೆಯ ದೃಷ್ಟಿಯಿಂದ ಒಂದಷ್ಟು ಅನಾನುಕೂಲಗಳಿವೆ. ಎಸ್​​ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಮಾರ್ಗದರ್ಶನ ಮತ್ತು ಉಜಿರೆಯ ಎಸ್​​ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದ ಕಾರ್ಯವೈಖರಿಯಿಂದ ಈ ಆಟೋಮ್ಯಾಟಿಕ್ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸೆರ್ ತಯಾರಾಗಿದೆ.

ಯಂತ್ರದ ಕಾರ್ಯವೈಖರಿ: ಈ ಯಂತ್ರದ ತಾಂತ್ರಿಕ ಕಾರ್ಯವೈಖರಿ ಅತ್ಯುನ್ನತ ಮಟ್ಟದ್ದು. ಇದೊಂದು ವಿದ್ಯುತ್ ಚಾಲಿತ ಯಂತ್ರವಾಗಿದ್ದು, ಅಲ್ಟ್ರಾಸಾನಿಕ್ ಸೆನ್ಸರ್ ಮೂಲಕ ಕಾರ್ಯನಿರ್ವಹಿಸುತ್ತದೆ. ಯಂತ್ರದ ನಿರ್ದಿಷ್ಟ ಭಾಗದಲ್ಲಿ ಕೈಯನ್ನು ಹಿಡಿದಾಗ, ಇದರಲ್ಲಿರುವ ಸೆನ್ಸರ್‌ಗಳು ಚಲನೆಯನ್ನು ಗುರುತಿಸಿ ಹ್ಯಾಂಡ್ ಸ್ಯಾನಿಟೈಸರ್ ನ್ನು ಕೈಗಳಿಗೆ ಸಿಂಪಡಿಸುತ್ತದೆ. ಹೀಗಾಗಿ ಯಾರೊಬ್ಬರೂ ಈ ಯಂತ್ರವನ್ನು ಮುಟ್ಟುವ ಪ್ರಮೇಯವೇ ಇಲ್ಲ. ಈಗಾಗಲೇ ಲಭ್ಯವಿರುವ ಕಾಲಿನಿಂದ ಬಳಸುವ ಡಿಸ್ಪೆನ್ಸರ್‌ಗಳ ಸರಿ ಸುಮಾರು ದರದಲ್ಲಿ ಸಂಪೂರ್ಣ ಸ್ವಯಂಚಾಲಿತ ಡಿಸ್ಪೆನ್ಸರ್ ನಿರ್ಮಿಸಿರುವುದು ಬಳಕೆದಾರರಿಗೂ ಅನುಕೂಲವಾಗುತ್ತದೆ.

ಡಾ.ಡಿ ವೀರೇಂದ್ರ ಹೆಗ್ಗಡೆ ಸಾಧನೆಗೆ ಮೆಚ್ಚುಗೆ: ಸದ್ಯ ಪ್ರಥಮ ಆಟೋಮ್ಯಾಟಿಕ್ ಸ್ಯಾನಿಟೈಸರ್ ಡಿಸ್ಪೆನ್ಸರ್ ಯಂತ್ರವನ್ನು ಧರ್ಮಸ್ಥಳಕ್ಕೆ ಅರ್ಪಿಸಲಾಗಿದೆ. ಇದನ್ನು ಪರೀಕ್ಷಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ, ಮತ್ತಷ್ಟು ಅನ್ವೇಷಣೆಗಳನ್ನು ನಡೆಸಲು ಪ್ರೋತ್ಸಾಹಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಂತಹ ಕೇಂದ್ರಗಳಲ್ಲಿ ಹ್ಯಾಂಡ್ ಸ್ಯಾನಿಟೈಸೇಷನ್‌ಗೆ ಪೂರಕವಾಗಿ ಸ್ಯಾನಿಟೈಸರ್‌ಗಳ ಬಳಕೆಗೆ ಮಾರ್ಗಸೂಚಿಗಳೂ ಬಂದಿವೆ. ಸ್ಯಾನಿಟರಿ ಬಾಟಲ್‌ಗಳನ್ನು ಮುಟ್ಟುವ ಪ್ರಸಂಗ ಬರಬಹುದು. ಇದೂ ಅಪಾಯಕಾರಿ. ಇದಕ್ಕಾಗಿ ತಂತ್ರಜ್ಞಾನ ಬಳಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯೋಚಿಸಿದಾಗ ’ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ಬಳಸುವ ಕುರಿತು ಯೋಚನೆ ಬಂತು. ಮಾರುಕಟ್ಟೆಗಳಲ್ಲಿ ವಿಚಾರಿಸಿದಾಗ 6 ಸಾವಿರಕ್ಕಿಂತ ಕಡಿಮೆ ಬೆಲೆಯ ಯಾವುದೇ ಸ್ವಯಂ ಚಾಲಿತ ಡಿಸ್ಪೆನ್ಸರ್‌ಗಳು ಲಭ್ಯವಿರಲಿಲ್ಲ ಎಂದು ಕಾಲೇಜಿನ ಪ್ರಿನ್ಸಿಪಾಲ್ ಕೆ. ಪಿ. ಪ್ರಸಾದ್ ಮಾಹಿತಿ ನೀಡಿದರು.

ವೀಡಿಯೋಗಾಗಿ ಇಲ್ಲಿ ಕ್ಲಿಕ್ಕಿಸಿ👇🏼👇🏼👇🏼👇🏼

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 65 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ