‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸಿದ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು


ಬೆಳ್ತಂಗಡಿ: ಉಜಿರೆ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು ‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಮಾರುಕಟ್ಟೆ ಬೆಲೆಗಿಂತ ಅತ್ಯಂತ ಕಡಿಮೆ ದರದಲ್ಲಿ ಸಿದ್ಧಪಡಿಸಲಾಗಿದ್ದು, ಜನಸಾಮಾನ್ಯರಿಗೆ, ಸಂಘ, ಸಂಸ್ಥೆಗಳಿಗೆ ಹೀಗೆ ಎಲ್ಲರಿಗೂ ಬಳಕೆಗೆ ಯೋಗ್ಯವಾಗಿದೆ.ಮಾರುಕಟ್ಟೆಯಲ್ಲಿ ಕಾಲಿನಿಂದ ಬಳಸಬಹುದಾದ ಡಿಸ್ಪೆನ್ಸರ್‌ಗಳು ಲಭ್ಯವಿದ್ದರೂ ಬಳಕೆಯ ದೃಷ್ಟಿಯಿಂದ ಒಂದಷ್ಟು ಅನಾನುಕೂಲಗಳಿವೆ. ಎಸ್​​ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಮಾರ್ಗದರ್ಶನ ಮತ್ತು ಉಜಿರೆಯ ಎಸ್​​ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದ ಕಾರ್ಯವೈಖರಿಯಿಂದ ಈ ಆಟೋಮ್ಯಾಟಿಕ್ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸೆರ್ ತಯಾರಾಗಿದೆ.

ಯಂತ್ರದ ಕಾರ್ಯವೈಖರಿ: ಈ ಯಂತ್ರದ ತಾಂತ್ರಿಕ ಕಾರ್ಯವೈಖರಿ ಅತ್ಯುನ್ನತ ಮಟ್ಟದ್ದು. ಇದೊಂದು ವಿದ್ಯುತ್ ಚಾಲಿತ ಯಂತ್ರವಾಗಿದ್ದು, ಅಲ್ಟ್ರಾಸಾನಿಕ್ ಸೆನ್ಸರ್ ಮೂಲಕ ಕಾರ್ಯನಿರ್ವಹಿಸುತ್ತದೆ. ಯಂತ್ರದ ನಿರ್ದಿಷ್ಟ ಭಾಗದಲ್ಲಿ ಕೈಯನ್ನು ಹಿಡಿದಾಗ, ಇದರಲ್ಲಿರುವ ಸೆನ್ಸರ್‌ಗಳು ಚಲನೆಯನ್ನು ಗುರುತಿಸಿ ಹ್ಯಾಂಡ್ ಸ್ಯಾನಿಟೈಸರ್ ನ್ನು ಕೈಗಳಿಗೆ ಸಿಂಪಡಿಸುತ್ತದೆ. ಹೀಗಾಗಿ ಯಾರೊಬ್ಬರೂ ಈ ಯಂತ್ರವನ್ನು ಮುಟ್ಟುವ ಪ್ರಮೇಯವೇ ಇಲ್ಲ. ಈಗಾಗಲೇ ಲಭ್ಯವಿರುವ ಕಾಲಿನಿಂದ ಬಳಸುವ ಡಿಸ್ಪೆನ್ಸರ್‌ಗಳ ಸರಿ ಸುಮಾರು ದರದಲ್ಲಿ ಸಂಪೂರ್ಣ ಸ್ವಯಂಚಾಲಿತ ಡಿಸ್ಪೆನ್ಸರ್ ನಿರ್ಮಿಸಿರುವುದು ಬಳಕೆದಾರರಿಗೂ ಅನುಕೂಲವಾಗುತ್ತದೆ.

ಡಾ.ಡಿ ವೀರೇಂದ್ರ ಹೆಗ್ಗಡೆ ಸಾಧನೆಗೆ ಮೆಚ್ಚುಗೆ: ಸದ್ಯ ಪ್ರಥಮ ಆಟೋಮ್ಯಾಟಿಕ್ ಸ್ಯಾನಿಟೈಸರ್ ಡಿಸ್ಪೆನ್ಸರ್ ಯಂತ್ರವನ್ನು ಧರ್ಮಸ್ಥಳಕ್ಕೆ ಅರ್ಪಿಸಲಾಗಿದೆ. ಇದನ್ನು ಪರೀಕ್ಷಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ, ಮತ್ತಷ್ಟು ಅನ್ವೇಷಣೆಗಳನ್ನು ನಡೆಸಲು ಪ್ರೋತ್ಸಾಹಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಂತಹ ಕೇಂದ್ರಗಳಲ್ಲಿ ಹ್ಯಾಂಡ್ ಸ್ಯಾನಿಟೈಸೇಷನ್‌ಗೆ ಪೂರಕವಾಗಿ ಸ್ಯಾನಿಟೈಸರ್‌ಗಳ ಬಳಕೆಗೆ ಮಾರ್ಗಸೂಚಿಗಳೂ ಬಂದಿವೆ. ಸ್ಯಾನಿಟರಿ ಬಾಟಲ್‌ಗಳನ್ನು ಮುಟ್ಟುವ ಪ್ರಸಂಗ ಬರಬಹುದು. ಇದೂ ಅಪಾಯಕಾರಿ. ಇದಕ್ಕಾಗಿ ತಂತ್ರಜ್ಞಾನ ಬಳಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯೋಚಿಸಿದಾಗ ’ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ಬಳಸುವ ಕುರಿತು ಯೋಚನೆ ಬಂತು. ಮಾರುಕಟ್ಟೆಗಳಲ್ಲಿ ವಿಚಾರಿಸಿದಾಗ 6 ಸಾವಿರಕ್ಕಿಂತ ಕಡಿಮೆ ಬೆಲೆಯ ಯಾವುದೇ ಸ್ವಯಂ ಚಾಲಿತ ಡಿಸ್ಪೆನ್ಸರ್‌ಗಳು ಲಭ್ಯವಿರಲಿಲ್ಲ ಎಂದು ಕಾಲೇಜಿನ ಪ್ರಿನ್ಸಿಪಾಲ್ ಕೆ. ಪಿ. ಪ್ರಸಾದ್ ಮಾಹಿತಿ ನೀಡಿದರು.

ವೀಡಿಯೋಗಾಗಿ ಇಲ್ಲಿ ಕ್ಲಿಕ್ಕಿಸಿ👇🏼👇🏼👇🏼👇🏼

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ