‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸಿದ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು


ಬೆಳ್ತಂಗಡಿ: ಉಜಿರೆ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು ‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಮಾರುಕಟ್ಟೆ ಬೆಲೆಗಿಂತ ಅತ್ಯಂತ ಕಡಿಮೆ ದರದಲ್ಲಿ ಸಿದ್ಧಪಡಿಸಲಾಗಿದ್ದು, ಜನಸಾಮಾನ್ಯರಿಗೆ, ಸಂಘ, ಸಂಸ್ಥೆಗಳಿಗೆ ಹೀಗೆ ಎಲ್ಲರಿಗೂ ಬಳಕೆಗೆ ಯೋಗ್ಯವಾಗಿದೆ.ಮಾರುಕಟ್ಟೆಯಲ್ಲಿ ಕಾಲಿನಿಂದ ಬಳಸಬಹುದಾದ ಡಿಸ್ಪೆನ್ಸರ್‌ಗಳು ಲಭ್ಯವಿದ್ದರೂ ಬಳಕೆಯ ದೃಷ್ಟಿಯಿಂದ ಒಂದಷ್ಟು ಅನಾನುಕೂಲಗಳಿವೆ. ಎಸ್​​ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಮಾರ್ಗದರ್ಶನ ಮತ್ತು ಉಜಿರೆಯ ಎಸ್​​ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದ ಕಾರ್ಯವೈಖರಿಯಿಂದ ಈ ಆಟೋಮ್ಯಾಟಿಕ್ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸೆರ್ ತಯಾರಾಗಿದೆ.

ಯಂತ್ರದ ಕಾರ್ಯವೈಖರಿ: ಈ ಯಂತ್ರದ ತಾಂತ್ರಿಕ ಕಾರ್ಯವೈಖರಿ ಅತ್ಯುನ್ನತ ಮಟ್ಟದ್ದು. ಇದೊಂದು ವಿದ್ಯುತ್ ಚಾಲಿತ ಯಂತ್ರವಾಗಿದ್ದು, ಅಲ್ಟ್ರಾಸಾನಿಕ್ ಸೆನ್ಸರ್ ಮೂಲಕ ಕಾರ್ಯನಿರ್ವಹಿಸುತ್ತದೆ. ಯಂತ್ರದ ನಿರ್ದಿಷ್ಟ ಭಾಗದಲ್ಲಿ ಕೈಯನ್ನು ಹಿಡಿದಾಗ, ಇದರಲ್ಲಿರುವ ಸೆನ್ಸರ್‌ಗಳು ಚಲನೆಯನ್ನು ಗುರುತಿಸಿ ಹ್ಯಾಂಡ್ ಸ್ಯಾನಿಟೈಸರ್ ನ್ನು ಕೈಗಳಿಗೆ ಸಿಂಪಡಿಸುತ್ತದೆ. ಹೀಗಾಗಿ ಯಾರೊಬ್ಬರೂ ಈ ಯಂತ್ರವನ್ನು ಮುಟ್ಟುವ ಪ್ರಮೇಯವೇ ಇಲ್ಲ. ಈಗಾಗಲೇ ಲಭ್ಯವಿರುವ ಕಾಲಿನಿಂದ ಬಳಸುವ ಡಿಸ್ಪೆನ್ಸರ್‌ಗಳ ಸರಿ ಸುಮಾರು ದರದಲ್ಲಿ ಸಂಪೂರ್ಣ ಸ್ವಯಂಚಾಲಿತ ಡಿಸ್ಪೆನ್ಸರ್ ನಿರ್ಮಿಸಿರುವುದು ಬಳಕೆದಾರರಿಗೂ ಅನುಕೂಲವಾಗುತ್ತದೆ.

ಡಾ.ಡಿ ವೀರೇಂದ್ರ ಹೆಗ್ಗಡೆ ಸಾಧನೆಗೆ ಮೆಚ್ಚುಗೆ: ಸದ್ಯ ಪ್ರಥಮ ಆಟೋಮ್ಯಾಟಿಕ್ ಸ್ಯಾನಿಟೈಸರ್ ಡಿಸ್ಪೆನ್ಸರ್ ಯಂತ್ರವನ್ನು ಧರ್ಮಸ್ಥಳಕ್ಕೆ ಅರ್ಪಿಸಲಾಗಿದೆ. ಇದನ್ನು ಪರೀಕ್ಷಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ, ಮತ್ತಷ್ಟು ಅನ್ವೇಷಣೆಗಳನ್ನು ನಡೆಸಲು ಪ್ರೋತ್ಸಾಹಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಂತಹ ಕೇಂದ್ರಗಳಲ್ಲಿ ಹ್ಯಾಂಡ್ ಸ್ಯಾನಿಟೈಸೇಷನ್‌ಗೆ ಪೂರಕವಾಗಿ ಸ್ಯಾನಿಟೈಸರ್‌ಗಳ ಬಳಕೆಗೆ ಮಾರ್ಗಸೂಚಿಗಳೂ ಬಂದಿವೆ. ಸ್ಯಾನಿಟರಿ ಬಾಟಲ್‌ಗಳನ್ನು ಮುಟ್ಟುವ ಪ್ರಸಂಗ ಬರಬಹುದು. ಇದೂ ಅಪಾಯಕಾರಿ. ಇದಕ್ಕಾಗಿ ತಂತ್ರಜ್ಞಾನ ಬಳಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯೋಚಿಸಿದಾಗ ’ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ಬಳಸುವ ಕುರಿತು ಯೋಚನೆ ಬಂತು. ಮಾರುಕಟ್ಟೆಗಳಲ್ಲಿ ವಿಚಾರಿಸಿದಾಗ 6 ಸಾವಿರಕ್ಕಿಂತ ಕಡಿಮೆ ಬೆಲೆಯ ಯಾವುದೇ ಸ್ವಯಂ ಚಾಲಿತ ಡಿಸ್ಪೆನ್ಸರ್‌ಗಳು ಲಭ್ಯವಿರಲಿಲ್ಲ ಎಂದು ಕಾಲೇಜಿನ ಪ್ರಿನ್ಸಿಪಾಲ್ ಕೆ. ಪಿ. ಪ್ರಸಾದ್ ಮಾಹಿತಿ ನೀಡಿದರು.

ವೀಡಿಯೋಗಾಗಿ ಇಲ್ಲಿ ಕ್ಲಿಕ್ಕಿಸಿ👇🏼👇🏼👇🏼👇🏼

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 100 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 61 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 189 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 195 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 98 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 116 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ