‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸಿದ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು


ಬೆಳ್ತಂಗಡಿ: ಉಜಿರೆ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು ‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಮಾರುಕಟ್ಟೆ ಬೆಲೆಗಿಂತ ಅತ್ಯಂತ ಕಡಿಮೆ ದರದಲ್ಲಿ ಸಿದ್ಧಪಡಿಸಲಾಗಿದ್ದು, ಜನಸಾಮಾನ್ಯರಿಗೆ, ಸಂಘ, ಸಂಸ್ಥೆಗಳಿಗೆ ಹೀಗೆ ಎಲ್ಲರಿಗೂ ಬಳಕೆಗೆ ಯೋಗ್ಯವಾಗಿದೆ.ಮಾರುಕಟ್ಟೆಯಲ್ಲಿ ಕಾಲಿನಿಂದ ಬಳಸಬಹುದಾದ ಡಿಸ್ಪೆನ್ಸರ್‌ಗಳು ಲಭ್ಯವಿದ್ದರೂ ಬಳಕೆಯ ದೃಷ್ಟಿಯಿಂದ ಒಂದಷ್ಟು ಅನಾನುಕೂಲಗಳಿವೆ. ಎಸ್​​ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಮಾರ್ಗದರ್ಶನ ಮತ್ತು ಉಜಿರೆಯ ಎಸ್​​ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದ ಕಾರ್ಯವೈಖರಿಯಿಂದ ಈ ಆಟೋಮ್ಯಾಟಿಕ್ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸೆರ್ ತಯಾರಾಗಿದೆ.

ಯಂತ್ರದ ಕಾರ್ಯವೈಖರಿ: ಈ ಯಂತ್ರದ ತಾಂತ್ರಿಕ ಕಾರ್ಯವೈಖರಿ ಅತ್ಯುನ್ನತ ಮಟ್ಟದ್ದು. ಇದೊಂದು ವಿದ್ಯುತ್ ಚಾಲಿತ ಯಂತ್ರವಾಗಿದ್ದು, ಅಲ್ಟ್ರಾಸಾನಿಕ್ ಸೆನ್ಸರ್ ಮೂಲಕ ಕಾರ್ಯನಿರ್ವಹಿಸುತ್ತದೆ. ಯಂತ್ರದ ನಿರ್ದಿಷ್ಟ ಭಾಗದಲ್ಲಿ ಕೈಯನ್ನು ಹಿಡಿದಾಗ, ಇದರಲ್ಲಿರುವ ಸೆನ್ಸರ್‌ಗಳು ಚಲನೆಯನ್ನು ಗುರುತಿಸಿ ಹ್ಯಾಂಡ್ ಸ್ಯಾನಿಟೈಸರ್ ನ್ನು ಕೈಗಳಿಗೆ ಸಿಂಪಡಿಸುತ್ತದೆ. ಹೀಗಾಗಿ ಯಾರೊಬ್ಬರೂ ಈ ಯಂತ್ರವನ್ನು ಮುಟ್ಟುವ ಪ್ರಮೇಯವೇ ಇಲ್ಲ. ಈಗಾಗಲೇ ಲಭ್ಯವಿರುವ ಕಾಲಿನಿಂದ ಬಳಸುವ ಡಿಸ್ಪೆನ್ಸರ್‌ಗಳ ಸರಿ ಸುಮಾರು ದರದಲ್ಲಿ ಸಂಪೂರ್ಣ ಸ್ವಯಂಚಾಲಿತ ಡಿಸ್ಪೆನ್ಸರ್ ನಿರ್ಮಿಸಿರುವುದು ಬಳಕೆದಾರರಿಗೂ ಅನುಕೂಲವಾಗುತ್ತದೆ.

ಡಾ.ಡಿ ವೀರೇಂದ್ರ ಹೆಗ್ಗಡೆ ಸಾಧನೆಗೆ ಮೆಚ್ಚುಗೆ: ಸದ್ಯ ಪ್ರಥಮ ಆಟೋಮ್ಯಾಟಿಕ್ ಸ್ಯಾನಿಟೈಸರ್ ಡಿಸ್ಪೆನ್ಸರ್ ಯಂತ್ರವನ್ನು ಧರ್ಮಸ್ಥಳಕ್ಕೆ ಅರ್ಪಿಸಲಾಗಿದೆ. ಇದನ್ನು ಪರೀಕ್ಷಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ, ಮತ್ತಷ್ಟು ಅನ್ವೇಷಣೆಗಳನ್ನು ನಡೆಸಲು ಪ್ರೋತ್ಸಾಹಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಂತಹ ಕೇಂದ್ರಗಳಲ್ಲಿ ಹ್ಯಾಂಡ್ ಸ್ಯಾನಿಟೈಸೇಷನ್‌ಗೆ ಪೂರಕವಾಗಿ ಸ್ಯಾನಿಟೈಸರ್‌ಗಳ ಬಳಕೆಗೆ ಮಾರ್ಗಸೂಚಿಗಳೂ ಬಂದಿವೆ. ಸ್ಯಾನಿಟರಿ ಬಾಟಲ್‌ಗಳನ್ನು ಮುಟ್ಟುವ ಪ್ರಸಂಗ ಬರಬಹುದು. ಇದೂ ಅಪಾಯಕಾರಿ. ಇದಕ್ಕಾಗಿ ತಂತ್ರಜ್ಞಾನ ಬಳಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯೋಚಿಸಿದಾಗ ’ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ಬಳಸುವ ಕುರಿತು ಯೋಚನೆ ಬಂತು. ಮಾರುಕಟ್ಟೆಗಳಲ್ಲಿ ವಿಚಾರಿಸಿದಾಗ 6 ಸಾವಿರಕ್ಕಿಂತ ಕಡಿಮೆ ಬೆಲೆಯ ಯಾವುದೇ ಸ್ವಯಂ ಚಾಲಿತ ಡಿಸ್ಪೆನ್ಸರ್‌ಗಳು ಲಭ್ಯವಿರಲಿಲ್ಲ ಎಂದು ಕಾಲೇಜಿನ ಪ್ರಿನ್ಸಿಪಾಲ್ ಕೆ. ಪಿ. ಪ್ರಸಾದ್ ಮಾಹಿತಿ ನೀಡಿದರು.

ವೀಡಿಯೋಗಾಗಿ ಇಲ್ಲಿ ಕ್ಲಿಕ್ಕಿಸಿ👇🏼👇🏼👇🏼👇🏼

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 21 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 100 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 41 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 125 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 122 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 51 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!