‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸಿದ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು


ಬೆಳ್ತಂಗಡಿ: ಉಜಿರೆ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು ‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಮಾರುಕಟ್ಟೆ ಬೆಲೆಗಿಂತ ಅತ್ಯಂತ ಕಡಿಮೆ ದರದಲ್ಲಿ ಸಿದ್ಧಪಡಿಸಲಾಗಿದ್ದು, ಜನಸಾಮಾನ್ಯರಿಗೆ, ಸಂಘ, ಸಂಸ್ಥೆಗಳಿಗೆ ಹೀಗೆ ಎಲ್ಲರಿಗೂ ಬಳಕೆಗೆ ಯೋಗ್ಯವಾಗಿದೆ.ಮಾರುಕಟ್ಟೆಯಲ್ಲಿ ಕಾಲಿನಿಂದ ಬಳಸಬಹುದಾದ ಡಿಸ್ಪೆನ್ಸರ್‌ಗಳು ಲಭ್ಯವಿದ್ದರೂ ಬಳಕೆಯ ದೃಷ್ಟಿಯಿಂದ ಒಂದಷ್ಟು ಅನಾನುಕೂಲಗಳಿವೆ. ಎಸ್​​ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಮಾರ್ಗದರ್ಶನ ಮತ್ತು ಉಜಿರೆಯ ಎಸ್​​ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದ ಕಾರ್ಯವೈಖರಿಯಿಂದ ಈ ಆಟೋಮ್ಯಾಟಿಕ್ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸೆರ್ ತಯಾರಾಗಿದೆ.

ಯಂತ್ರದ ಕಾರ್ಯವೈಖರಿ: ಈ ಯಂತ್ರದ ತಾಂತ್ರಿಕ ಕಾರ್ಯವೈಖರಿ ಅತ್ಯುನ್ನತ ಮಟ್ಟದ್ದು. ಇದೊಂದು ವಿದ್ಯುತ್ ಚಾಲಿತ ಯಂತ್ರವಾಗಿದ್ದು, ಅಲ್ಟ್ರಾಸಾನಿಕ್ ಸೆನ್ಸರ್ ಮೂಲಕ ಕಾರ್ಯನಿರ್ವಹಿಸುತ್ತದೆ. ಯಂತ್ರದ ನಿರ್ದಿಷ್ಟ ಭಾಗದಲ್ಲಿ ಕೈಯನ್ನು ಹಿಡಿದಾಗ, ಇದರಲ್ಲಿರುವ ಸೆನ್ಸರ್‌ಗಳು ಚಲನೆಯನ್ನು ಗುರುತಿಸಿ ಹ್ಯಾಂಡ್ ಸ್ಯಾನಿಟೈಸರ್ ನ್ನು ಕೈಗಳಿಗೆ ಸಿಂಪಡಿಸುತ್ತದೆ. ಹೀಗಾಗಿ ಯಾರೊಬ್ಬರೂ ಈ ಯಂತ್ರವನ್ನು ಮುಟ್ಟುವ ಪ್ರಮೇಯವೇ ಇಲ್ಲ. ಈಗಾಗಲೇ ಲಭ್ಯವಿರುವ ಕಾಲಿನಿಂದ ಬಳಸುವ ಡಿಸ್ಪೆನ್ಸರ್‌ಗಳ ಸರಿ ಸುಮಾರು ದರದಲ್ಲಿ ಸಂಪೂರ್ಣ ಸ್ವಯಂಚಾಲಿತ ಡಿಸ್ಪೆನ್ಸರ್ ನಿರ್ಮಿಸಿರುವುದು ಬಳಕೆದಾರರಿಗೂ ಅನುಕೂಲವಾಗುತ್ತದೆ.

ಡಾ.ಡಿ ವೀರೇಂದ್ರ ಹೆಗ್ಗಡೆ ಸಾಧನೆಗೆ ಮೆಚ್ಚುಗೆ: ಸದ್ಯ ಪ್ರಥಮ ಆಟೋಮ್ಯಾಟಿಕ್ ಸ್ಯಾನಿಟೈಸರ್ ಡಿಸ್ಪೆನ್ಸರ್ ಯಂತ್ರವನ್ನು ಧರ್ಮಸ್ಥಳಕ್ಕೆ ಅರ್ಪಿಸಲಾಗಿದೆ. ಇದನ್ನು ಪರೀಕ್ಷಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ, ಮತ್ತಷ್ಟು ಅನ್ವೇಷಣೆಗಳನ್ನು ನಡೆಸಲು ಪ್ರೋತ್ಸಾಹಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಂತಹ ಕೇಂದ್ರಗಳಲ್ಲಿ ಹ್ಯಾಂಡ್ ಸ್ಯಾನಿಟೈಸೇಷನ್‌ಗೆ ಪೂರಕವಾಗಿ ಸ್ಯಾನಿಟೈಸರ್‌ಗಳ ಬಳಕೆಗೆ ಮಾರ್ಗಸೂಚಿಗಳೂ ಬಂದಿವೆ. ಸ್ಯಾನಿಟರಿ ಬಾಟಲ್‌ಗಳನ್ನು ಮುಟ್ಟುವ ಪ್ರಸಂಗ ಬರಬಹುದು. ಇದೂ ಅಪಾಯಕಾರಿ. ಇದಕ್ಕಾಗಿ ತಂತ್ರಜ್ಞಾನ ಬಳಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯೋಚಿಸಿದಾಗ ’ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ಬಳಸುವ ಕುರಿತು ಯೋಚನೆ ಬಂತು. ಮಾರುಕಟ್ಟೆಗಳಲ್ಲಿ ವಿಚಾರಿಸಿದಾಗ 6 ಸಾವಿರಕ್ಕಿಂತ ಕಡಿಮೆ ಬೆಲೆಯ ಯಾವುದೇ ಸ್ವಯಂ ಚಾಲಿತ ಡಿಸ್ಪೆನ್ಸರ್‌ಗಳು ಲಭ್ಯವಿರಲಿಲ್ಲ ಎಂದು ಕಾಲೇಜಿನ ಪ್ರಿನ್ಸಿಪಾಲ್ ಕೆ. ಪಿ. ಪ್ರಸಾದ್ ಮಾಹಿತಿ ನೀಡಿದರು.

ವೀಡಿಯೋಗಾಗಿ ಇಲ್ಲಿ ಕ್ಲಿಕ್ಕಿಸಿ👇🏼👇🏼👇🏼👇🏼

Spread the love
  • Related Posts

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಬಾರ್ಯ : ಬಾರ್ಯ ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ಭಾಗದ ನಾಗರಿಕರ ಹಲವಾರು ವರ್ಷದ ಬಹುಬೇಡಿಕೆಯ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ನೀಡಿದ ಭರವಸೆಯಂತೆ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡು ಸಂಚಾರಕ್ಕೆ ಸುಗಮವಾಗಿದೆ. ಶಾಸಕರಿಗೆ…

    Spread the love

    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    ಕಡಿರುದ್ಯಾವರ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಹೇಡ್ಯದಿಂದ ಕುಕ್ಕಾವುವರೆಗೆ ಅಲ್ಲಲ್ಲಿ ರಸ್ತೆ ಹಾಳಾಗಿದ್ದು, ಎರ್ಮಾಲ್ ಪಲ್ಕೆ ಬಳಿ ಮೋರಿ ಕುಸಿದು ವಾಹನ ಸವಾರರಿಗೆ ತುಂಬ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡು ಕಡಿರುದ್ಯಾವರದ ಕಾನರ್ಪ ಪಣಿಕಲ್ ನವೀನ್ ಅವರು ತನ್ನ ಸ್ವಂತ ಖರ್ಚಿನಿಂದ ಹಿಟಾಚಿ…

    Spread the love

    You Missed

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    • By admin
    • November 12, 2025
    • 118 views
    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    • By admin
    • November 11, 2025
    • 187 views
    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    • By admin
    • November 10, 2025
    • 66 views
    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    • By admin
    • November 9, 2025
    • 242 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ

    • By admin
    • November 5, 2025
    • 194 views
    ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ

    ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

    • By admin
    • November 5, 2025
    • 82 views
    ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ