‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸಿದ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು


ಬೆಳ್ತಂಗಡಿ: ಉಜಿರೆ SDM ಪಾಲಿಟೆಕ್ನಿಕ್​​ ಕಾಲೇಜು ಉಪನ್ಯಾಸಕರು ‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಮಾರುಕಟ್ಟೆ ಬೆಲೆಗಿಂತ ಅತ್ಯಂತ ಕಡಿಮೆ ದರದಲ್ಲಿ ಸಿದ್ಧಪಡಿಸಲಾಗಿದ್ದು, ಜನಸಾಮಾನ್ಯರಿಗೆ, ಸಂಘ, ಸಂಸ್ಥೆಗಳಿಗೆ ಹೀಗೆ ಎಲ್ಲರಿಗೂ ಬಳಕೆಗೆ ಯೋಗ್ಯವಾಗಿದೆ.ಮಾರುಕಟ್ಟೆಯಲ್ಲಿ ಕಾಲಿನಿಂದ ಬಳಸಬಹುದಾದ ಡಿಸ್ಪೆನ್ಸರ್‌ಗಳು ಲಭ್ಯವಿದ್ದರೂ ಬಳಕೆಯ ದೃಷ್ಟಿಯಿಂದ ಒಂದಷ್ಟು ಅನಾನುಕೂಲಗಳಿವೆ. ಎಸ್​​ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಮಾರ್ಗದರ್ಶನ ಮತ್ತು ಉಜಿರೆಯ ಎಸ್​​ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದ ಕಾರ್ಯವೈಖರಿಯಿಂದ ಈ ಆಟೋಮ್ಯಾಟಿಕ್ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸೆರ್ ತಯಾರಾಗಿದೆ.

ಯಂತ್ರದ ಕಾರ್ಯವೈಖರಿ: ಈ ಯಂತ್ರದ ತಾಂತ್ರಿಕ ಕಾರ್ಯವೈಖರಿ ಅತ್ಯುನ್ನತ ಮಟ್ಟದ್ದು. ಇದೊಂದು ವಿದ್ಯುತ್ ಚಾಲಿತ ಯಂತ್ರವಾಗಿದ್ದು, ಅಲ್ಟ್ರಾಸಾನಿಕ್ ಸೆನ್ಸರ್ ಮೂಲಕ ಕಾರ್ಯನಿರ್ವಹಿಸುತ್ತದೆ. ಯಂತ್ರದ ನಿರ್ದಿಷ್ಟ ಭಾಗದಲ್ಲಿ ಕೈಯನ್ನು ಹಿಡಿದಾಗ, ಇದರಲ್ಲಿರುವ ಸೆನ್ಸರ್‌ಗಳು ಚಲನೆಯನ್ನು ಗುರುತಿಸಿ ಹ್ಯಾಂಡ್ ಸ್ಯಾನಿಟೈಸರ್ ನ್ನು ಕೈಗಳಿಗೆ ಸಿಂಪಡಿಸುತ್ತದೆ. ಹೀಗಾಗಿ ಯಾರೊಬ್ಬರೂ ಈ ಯಂತ್ರವನ್ನು ಮುಟ್ಟುವ ಪ್ರಮೇಯವೇ ಇಲ್ಲ. ಈಗಾಗಲೇ ಲಭ್ಯವಿರುವ ಕಾಲಿನಿಂದ ಬಳಸುವ ಡಿಸ್ಪೆನ್ಸರ್‌ಗಳ ಸರಿ ಸುಮಾರು ದರದಲ್ಲಿ ಸಂಪೂರ್ಣ ಸ್ವಯಂಚಾಲಿತ ಡಿಸ್ಪೆನ್ಸರ್ ನಿರ್ಮಿಸಿರುವುದು ಬಳಕೆದಾರರಿಗೂ ಅನುಕೂಲವಾಗುತ್ತದೆ.

ಡಾ.ಡಿ ವೀರೇಂದ್ರ ಹೆಗ್ಗಡೆ ಸಾಧನೆಗೆ ಮೆಚ್ಚುಗೆ: ಸದ್ಯ ಪ್ರಥಮ ಆಟೋಮ್ಯಾಟಿಕ್ ಸ್ಯಾನಿಟೈಸರ್ ಡಿಸ್ಪೆನ್ಸರ್ ಯಂತ್ರವನ್ನು ಧರ್ಮಸ್ಥಳಕ್ಕೆ ಅರ್ಪಿಸಲಾಗಿದೆ. ಇದನ್ನು ಪರೀಕ್ಷಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ, ಮತ್ತಷ್ಟು ಅನ್ವೇಷಣೆಗಳನ್ನು ನಡೆಸಲು ಪ್ರೋತ್ಸಾಹಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಂತಹ ಕೇಂದ್ರಗಳಲ್ಲಿ ಹ್ಯಾಂಡ್ ಸ್ಯಾನಿಟೈಸೇಷನ್‌ಗೆ ಪೂರಕವಾಗಿ ಸ್ಯಾನಿಟೈಸರ್‌ಗಳ ಬಳಕೆಗೆ ಮಾರ್ಗಸೂಚಿಗಳೂ ಬಂದಿವೆ. ಸ್ಯಾನಿಟರಿ ಬಾಟಲ್‌ಗಳನ್ನು ಮುಟ್ಟುವ ಪ್ರಸಂಗ ಬರಬಹುದು. ಇದೂ ಅಪಾಯಕಾರಿ. ಇದಕ್ಕಾಗಿ ತಂತ್ರಜ್ಞಾನ ಬಳಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯೋಚಿಸಿದಾಗ ’ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ಬಳಸುವ ಕುರಿತು ಯೋಚನೆ ಬಂತು. ಮಾರುಕಟ್ಟೆಗಳಲ್ಲಿ ವಿಚಾರಿಸಿದಾಗ 6 ಸಾವಿರಕ್ಕಿಂತ ಕಡಿಮೆ ಬೆಲೆಯ ಯಾವುದೇ ಸ್ವಯಂ ಚಾಲಿತ ಡಿಸ್ಪೆನ್ಸರ್‌ಗಳು ಲಭ್ಯವಿರಲಿಲ್ಲ ಎಂದು ಕಾಲೇಜಿನ ಪ್ರಿನ್ಸಿಪಾಲ್ ಕೆ. ಪಿ. ಪ್ರಸಾದ್ ಮಾಹಿತಿ ನೀಡಿದರು.

ವೀಡಿಯೋಗಾಗಿ ಇಲ್ಲಿ ಕ್ಲಿಕ್ಕಿಸಿ👇🏼👇🏼👇🏼👇🏼

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 10 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ