ಡೆಂಗ್ಯೂ ತಡೆಗಟ್ಟುವ ನಿಟ್ಟಿನಲ್ಲಿ ಮಾಸ್ಟರ್ ಲಾರ್ವಾ ಸರ್ವೇ ನಡೆಸಿದ ಆರೋಗ್ಯ ಸೇನಾನಿಗಳು

ಬೆಳ್ತಂಗಡಿ: ಕೊರೋನಾ ಮಹಾಮಾರಿಯ ಬೆನ್ನಲೆ ಕಾಡುತ್ತಿದೆ ಡೆಂಗ್ಯೂ ಪ್ರಕರಣಗಳು. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ನಿರ್ದೇಶನದಲ್ಲಿ, ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕಡಿರುದ್ಯಾವರ ಪಂಚಾಯತ್ ಹಾಗೂ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರ ಸಹಕಾರದಲ್ಲಿ ಮಾಸ್ಟರ್ ಲಾರ್ವಾ ಸರ್ವೇಯನ್ನು ನಡೆಸಲಾಯಿತು.

ಮುಂಡಾಜೆ ಪ್ರಾ.ಆ. ಕೇಂದ್ರದ ವೈದ್ಯಾಧಿಕಾರಿ ಡಾ.ಕಾವ್ಯಾ ಹಾಗೂ ತಾಲೂಕು ಆರೋಗ್ಯ ಸಹಾಯಕ ಗಿರೀಶ್ ನೇತ್ರತ್ವ ವಹಿಸಿದ್ದರು.

ಮಾಸ್ಟರ್ ಲಾರ್ವಾ ಸರ್ವೇ:

ಮಳೆಗಾಲ ಆರಂಭಕ್ಕೆ ಆಯಾಯ ಗ್ರಾಮದ ವಾರ್ಡ್ ನ ಕಿರಿಯ ಆರೋಗ್ಯ ಸಹಾಯಕಿಯರು,ಆಶಾ ಕಾರ್ಯಕರ್ತೆಯರು ಪ್ರತಿ ಮನೆಗೆ ಭೇಟಿ ನೀಡಿ ಲಾರ್ವಾ ಸರ್ವೇ ನಡೆಸುತ್ತಾರೆ. ಆದರೆ ಈಗ ಪ್ರಕರಣಗಳು ಅಧಿಕಗೊಳ್ಳುತ್ತಿರುವ ಕಾರಣ, ಮುಂಡಾಜೆ ಪ್ರಾ.ಆ.ಕೇಂದ್ರದ 5 ಉಪ ಆರೋಗ್ಯ ಕೇಂದ್ರಗಳ ಕಿರಿಯ ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರನ್ನು ಒಂದೆಡೆ ಸೇರಿಸಿ ಇಲ್ಲಿ ಮಾಸ್ಟರ್ ಲಾರ್ವಾ ಸರ್ವೇ ನಡೆಸಲಾಯಿತು. ಇವರು ಗ್ರಾಮದ ಪ್ರತಿ ಮನೆಗಳಿಗೆ ತೆರಳಿ ಲಾರ್ವಾ ಉತ್ಪತ್ತಿಯಾಗುವ ಸ್ಥಳಗಳನ್ನು ಪತ್ತೆ ಹಚ್ಚಿ ಮುನ್ನೆಚ್ಚರಿಕೆ ಕೈಗೊಳ್ಳುತ್ತಾರೆ.

“ನೀರು ನಿಲ್ಲದಂತೆ ಎಚ್ಚರ ವಹಿಸಿ”

“ಈಗಾಗಲೇ ಈ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಾಹಿತಿ ಶಿಬಿರ, ಲಾರ್ವಾ ಸಮೀಕ್ಷೆ ನಡೆಸಲಾಗಿದೆ. ಈ ಬಾರಿ ಮಳೆಗಾಲ ಇನ್ನೂ ಕೂಡ ಸರಿಯಾಗಿ ಆರಂಭವಾಗದ ಕಾರಣ ಈಗಿನ ಮಳೆ ಬಿಸಿಲಿನ ವಾತಾವರಣ ಲಾರ್ವಾ ಉತ್ಪತ್ತಿಗೆ ಪೂರಕವಾಗಿದೆ. ಸಾರ್ವಜನಿಕರು ತಮ್ಮ ಪರಿಸರದಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ ಸ್ವಚ್ಛತೆ ಕಾಪಾಡುವುದು ಅತೀ ಅಗತ್ಯ”

ಡಾ.ಕಾವ್ಯಾ,
ವೈದ್ಯಾಧಿಕಾರಿ,
ಪ್ರಾ.ಆ.ಕೇಂದ್ರ, ಮುಂಡಾಜೆ

ಎಲ್ಲೆಂದರಲ್ಲಿ ಎಸೆಯುತ್ತಿರುವ ತ್ಯಾಜ್ಯ:

ಕಡಿರುದ್ಯಾವರ ಗ್ರಾಮದ ಮುಖ್ಯ ರಸ್ತೆ ಬದಿಗಳ ಮನೆಗಳಿರುವ ಪ್ರದೇಶದಲ್ಲಿ ಹಲವು ಸಮಯದಿಂದ ಇರುವ ಬಾಟಲಿ, ಪ್ಲಾಸ್ಟಿಕ್ ಮೊದಲಾದ ತ್ಯಾಜ್ಯ ತಂದು ಹಾಕಿದ್ದು ಅದನ್ನು ವಿಲೇವಾರಿ ಮಾಡಲಾಗಿಲ್ಲ.ಇದು ಸಾಂಕ್ರಾಮಿಕ ರೋಗ ಹರಡಲು ಮೂಲ ಕಾರಣವೆಂದು ಸ್ಥಳೀಯರು ಹೇಳುತ್ತಿದ್ದಾರೆ.

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ