ಮದ್ಯ ಪ್ರೀಯರಿಗೆ ಬಿಗ್ ಶಾಕ್ ಅಬಕಾರಿ ಸುಂಕ ಹೆಚ್ಚಿಸಿದ ರಾಜ್ಯ ಸರಕಾರ

ಬೆಂಗಳೂರು: ಕೊರೋನಾ ಸಂಕಷ್ಟ ಮತ್ತು ಲಾಕ್‌ಡೌನ್ ನಿಂದಾಗಿ ಸಂಪನ್ಮೂಲ ಕ್ರೋಢೀಕರಣಕ್ಕೆ ಕರ್ನಾಟಕ ಸರ್ಕಾರ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಶೇ.11 ರಿಂದ ಶೇ.17ಕ್ಕೆ ಏರಿಸಿದೆ.

ಲಾಕ್‌ಡೌನ್‌ನಿಂದಾಗಿ ಕಳೆದ 45 ದಿನಗಳಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಆದರೆ, ಸೋಮವಾರದಿಂದ ರಾಷ್ಟ್ರದಾದ್ಯಂತ ಮದ್ಯದ ಮಾರಾಟಕ್ಕೆ ಅವಕಾಶಮಾಡಿಕೊಡಲಾಗಿದ್ದು ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಕಳೆದ ಎರಡು ದಿನದ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 1,000 ಕೋಟಿಯಷ್ಟು ಮದ್ಯ ಮಾರಾಟವಾಗಿರಬಹುದು ಎಂದು ಅಂದಾಜಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಆದಾಯವನ್ನು ಹೆಚ್ಚಿಸುವ ಸಲುವಾಗಿ ರಾಜ್ಯ ಸರ್ಕಾರ ಮತ್ತೆ ಅಬಕಾರಿ ಸುಂಕವನ್ನು ಹೆಚ್ಚಿಸಿದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ಅಬಕಾರಿ ಸುಂಕು ಶೇ.5 ರಷ್ಟಿತ್ತು. ಆದರೆ, ಕಳೆದ ಸಾಲಿನ ಬಜೆಟ್‌ ವೇಳೆ ಈ ಸುಂಕವನ್ನು ಶೇ.11ಕ್ಕೆ ಏರಿಸಲಾಗಿತ್ತು. ಆದರೆ, ಇಂದು ರಾಜ್ಯ ಸರ್ಕಾರ ಮತ್ತೊಮ್ಮೆ ಅಬಕಾರಿ ಸುಂಕವನ್ನು ಶೇ.6 ರಷ್ಟು ಏರಿಸಿದೆ. ಪರಿಣಾಮ ರಾಜ್ಯದಲ್ಲಿ ಒಟ್ಟಾರೆ ಅಬಕಾರಿ ಸುಂಕ ಶೇ.17ಕ್ಕೆ ಏರಿಕೆಯಾದಂತಾಗಿದೆ.

ಹೀಗಾಗಿ ಇನ್ನೂ ಎರಡು ಅಥವಾ ಮೂರು ದಿನಗಳಲ್ಲಿ ಮದ್ಯದ ಬಾಟಲ್‌ಗಳ ಮೇಲೆ ಹೊಸ ದರಗಳ ಲೇಬಲ್ ಗಳೊಂದಿಗೆ ಮಾರಾಟ ಆರಂಭವಾಗಲಿದೆ. ಆದರೆ, ಮೊದಲೇ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಮದ್ಯಪ್ರಿಯರು ದಿಢೀರ್ ಅಬಕಾರಿ ಸುಂಕ ಏರಿಕೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಲಿದ್ದಾರೆ ಎನ್ನಲಾಗುತ್ತಿದೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 1 views

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 9 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 8 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 9 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 9 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 12 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!