7ಹೆಜ್ಜೆ ಇಡಲು 17 ಸೂತ್ರ ಪಾಲಿಸುವಂತೆ ರಾಜ್ಯ ಸರಕಾರದ ಮಹತ್ತರದ ಆದೇಶ

ಬೆಂಗಳೂರು: ಕೊರೋನಾ ಮಹಾಮಾರಿಯಿಂದಾಗಿ ದೇಶಾದ್ಯಂತ ಲಾಕ್ ಡೌನ್ ಮುಂದುವರಿದಿದ್ದು ರಾಜ್ಯಾದ್ಯಂತ ಮದುವೆ ಸಮಾರಂಭ, ಕಾರ್ಯಕ್ರಮಗಳು ಕೂಡ ಸರ್ಕಾರದ ನಿಯಮಾನುಸಾರವೇ ನಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಲವು ಮಾರ್ಗಸೂಚಿಯನ್ನು ರೂಪಿಸಿ ಕಡ್ಡಾಯವಾಗಿ ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ. ಈಗಾಗಲೇ, ಮದುವೆ ಸಮಾರಂಭದಲ್ಲಿ ಐವತ್ತು ಜನರು ಮೀರಿ ಭಾಗವಹಿಸುವಂತಿಲ್ಲ ಎನ್ನುವ ಆದೇಶವನ್ನು ಸರಕಾರ ಹೊರಡಿಸಿದೆ. ಜೊತೆಗೆ, ಸಾಮಾಜಿಕ ಅಂತರ ಕಾಪಾಡಿಕೊಂಡು ಬರುವುದು ಮತ್ತು ಮಾಸ್ಕ್ ಧರಿಸುವುದನ್ನೂ ಈ ಹಿಂದೆಯೇ ಖಡ್ಡಾಯ ಮಾಡಲಾಗಿತ್ತು.

ಯಾವುದೇ ಮದುವೆಗಳಿಗೆ ಸ್ಥಳೀಯ ಆಡಳಿತ ಸಂಸ್ಥೆಗಳಿಂದ ಅನುಮತಿ ಕಡ್ಡಾಯ.

ಒಂದು ಮದುವೆಯಲ್ಲಿ 50 ಜನಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ

ಗರ್ಭಿಣಿಯರು, 65 ವರ್ಷ ಮೇಲ್ಪಟ್ಟ ವೃದ್ಧರು, 10 ವರ್ಷದೊಳಗಿನ ಮಕ್ಕಳಿಗೆ ನಿರ್ಬಂಧ.

ಕಂಟೈನ್ಮೆಂಟ್ ವಲಯದವರಿಗೆ ಪ್ರವೇಶ ನಿರ್ಬಂಧ.

ಸೂಕ್ತ ಸಾರ್ವಜನಿಕ ಸ್ಥಳ ಮತ್ತು ನೈಸರ್ಗಿಕ ವಾತಾವರಣ ಇರುವೆಡೆ ಮಾತ್ರ ಮದುವೆಗೆ ಅವಕಾಶ

ಮದುವೆಗಳಲ್ಲಿ ಹವಾನಿಯಂತ್ರಿತಗಳನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.

ಮದುವೆಗಳಲ್ಲಿ ಒಬ್ಬ ನೋಡಲ್ ಅಧಿಕಾರಿ ಇರುವುದು ಕಡ್ಡಾಯವಾಗಿದೆ

ಮದುವೆಗೆ ಬಂದವರ ಲಿಸ್ಟ್ ಮಾಡಿ ನೋಡಲ್ ಅಧಿಕಾರಿಗೆ ಸಲ್ಲಿಸುವುದು ಕಡ್ಡಾಯ

ಮದುವೆಗೆ ಬರುವವರು ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಿಕೊಳ್ಳಬೇಕು

ಮದುವೆ ಸ್ಥಳಗಳ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸುವುದು ಕಡ್ಡಾಯ.

ಮದುವೆಗೆ ಬರುವವರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.

ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ. 99.5 ಸೆಲ್ಸಿಯಸ್ ಉಷ್ಣತೆ, ಜ್ವರ, ಕೆಮ್ಮು, ನೆಗಡಿ, ಉಸಿರಾಟ ಸಮಸ್ಯೆ ಇರೋರನ್ನು ನಿರ್ಬಂಧಿಸಿ ಅವರನ್ನು ಆಸ್ಪತ್ರೆಗೆ ಕಳಿಸಬೇಕು.

ಒಂದು ಮೀಟರ್ ವೈಯುಕ್ತಿಕ ಅಂತರ ಕಾಪಾಡಿಕೊಳ್ಳಬೇಕು.

ಸಾಬೂನಿನಲ್ಲಿ ಹ್ಯಾಂಡ್ ವಾಷ್ ಗೆ ವ್ಯವಸ್ಥೆ ಮಾಡಿರಬೇಕು

ಸಾರ್ವಜನಿಕವಾಗಿ ಉಗುಳುವಂತಿಲ್ಲ.

ಮದುವೆ ಸ್ಥಳಗಳಲ್ಲಿ ಸ್ವಚ್ಛತೆಯನ್ನ ಕಾಪಾಡಬೇಕು.

ಮದ್ಯ, ಪಾನ್, ಗುಟ್ಕಾ, ತಂಬಾಕು ಸೇವನೆ ನಿಷಿದ್ಧ.

ಲಾಕ್ ಡೌನ್ ಅವಧಿ ಮುಗಿಯುತ್ತಾ ಬಂದರೂ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ನಡುವೆ ಮೇ 18ರಿಂದ ಲಾಕ್ ಡೌನ್ ನಲ್ಲಿ ಇನ್ನಷ್ಟು ಸಡಿಲಿಕೆ ಆಗಲಿದೆ. ಇದೇ ವೇಳೆ ರಾಜ್ಯದ ವಿವಿಧೆಡೆಗಳಲ್ಲಿ ಮದುವೆ ಸೀಜನ್ ಕೂಡ ಆರಂಭವಾಗಿದ್ದು, ಕೊರೊನಾ ಸೋಂಕು ನಿಯಂತ್ರಿಸುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಪ್ತಪದಿಗೆ 17 ಮಾರ್ಗಸೂಚಿಯನ್ನು ರೂಪಿಸಿ, ಮದುವೆಯಲ್ಲಿಯೂ ಸಾಮಾಜಿಕ ಅಂತರ ಕಡ್ಡಾಯವಾಗಿ ಹೇಗೆ ಕಾಯ್ದುಕೊಳ್ಳಬೇಕು ಎಂಬ ಬಗ್ಗೆ ನಿಯಮಗಳು ಜಾರಿ ಮಾಡಿದೆ.

Spread the love
  • Related Posts

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರೌಢಶಾಲೆಯ ಕುಮಾರಿ ಕು.ಯಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ 7…

    Spread the love

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್…

    Spread the love

    You Missed

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 54 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 52 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 28 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 23 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 49 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 43 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ