7ಹೆಜ್ಜೆ ಇಡಲು 17 ಸೂತ್ರ ಪಾಲಿಸುವಂತೆ ರಾಜ್ಯ ಸರಕಾರದ ಮಹತ್ತರದ ಆದೇಶ

ಬೆಂಗಳೂರು: ಕೊರೋನಾ ಮಹಾಮಾರಿಯಿಂದಾಗಿ ದೇಶಾದ್ಯಂತ ಲಾಕ್ ಡೌನ್ ಮುಂದುವರಿದಿದ್ದು ರಾಜ್ಯಾದ್ಯಂತ ಮದುವೆ ಸಮಾರಂಭ, ಕಾರ್ಯಕ್ರಮಗಳು ಕೂಡ ಸರ್ಕಾರದ ನಿಯಮಾನುಸಾರವೇ ನಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಲವು ಮಾರ್ಗಸೂಚಿಯನ್ನು ರೂಪಿಸಿ ಕಡ್ಡಾಯವಾಗಿ ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ. ಈಗಾಗಲೇ, ಮದುವೆ ಸಮಾರಂಭದಲ್ಲಿ ಐವತ್ತು ಜನರು ಮೀರಿ ಭಾಗವಹಿಸುವಂತಿಲ್ಲ ಎನ್ನುವ ಆದೇಶವನ್ನು ಸರಕಾರ ಹೊರಡಿಸಿದೆ. ಜೊತೆಗೆ, ಸಾಮಾಜಿಕ ಅಂತರ ಕಾಪಾಡಿಕೊಂಡು ಬರುವುದು ಮತ್ತು ಮಾಸ್ಕ್ ಧರಿಸುವುದನ್ನೂ ಈ ಹಿಂದೆಯೇ ಖಡ್ಡಾಯ ಮಾಡಲಾಗಿತ್ತು.

ಯಾವುದೇ ಮದುವೆಗಳಿಗೆ ಸ್ಥಳೀಯ ಆಡಳಿತ ಸಂಸ್ಥೆಗಳಿಂದ ಅನುಮತಿ ಕಡ್ಡಾಯ.

ಒಂದು ಮದುವೆಯಲ್ಲಿ 50 ಜನಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ

ಗರ್ಭಿಣಿಯರು, 65 ವರ್ಷ ಮೇಲ್ಪಟ್ಟ ವೃದ್ಧರು, 10 ವರ್ಷದೊಳಗಿನ ಮಕ್ಕಳಿಗೆ ನಿರ್ಬಂಧ.

ಕಂಟೈನ್ಮೆಂಟ್ ವಲಯದವರಿಗೆ ಪ್ರವೇಶ ನಿರ್ಬಂಧ.

ಸೂಕ್ತ ಸಾರ್ವಜನಿಕ ಸ್ಥಳ ಮತ್ತು ನೈಸರ್ಗಿಕ ವಾತಾವರಣ ಇರುವೆಡೆ ಮಾತ್ರ ಮದುವೆಗೆ ಅವಕಾಶ

ಮದುವೆಗಳಲ್ಲಿ ಹವಾನಿಯಂತ್ರಿತಗಳನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.

ಮದುವೆಗಳಲ್ಲಿ ಒಬ್ಬ ನೋಡಲ್ ಅಧಿಕಾರಿ ಇರುವುದು ಕಡ್ಡಾಯವಾಗಿದೆ

ಮದುವೆಗೆ ಬಂದವರ ಲಿಸ್ಟ್ ಮಾಡಿ ನೋಡಲ್ ಅಧಿಕಾರಿಗೆ ಸಲ್ಲಿಸುವುದು ಕಡ್ಡಾಯ

ಮದುವೆಗೆ ಬರುವವರು ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಿಕೊಳ್ಳಬೇಕು

ಮದುವೆ ಸ್ಥಳಗಳ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸುವುದು ಕಡ್ಡಾಯ.

ಮದುವೆಗೆ ಬರುವವರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.

ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ. 99.5 ಸೆಲ್ಸಿಯಸ್ ಉಷ್ಣತೆ, ಜ್ವರ, ಕೆಮ್ಮು, ನೆಗಡಿ, ಉಸಿರಾಟ ಸಮಸ್ಯೆ ಇರೋರನ್ನು ನಿರ್ಬಂಧಿಸಿ ಅವರನ್ನು ಆಸ್ಪತ್ರೆಗೆ ಕಳಿಸಬೇಕು.

ಒಂದು ಮೀಟರ್ ವೈಯುಕ್ತಿಕ ಅಂತರ ಕಾಪಾಡಿಕೊಳ್ಳಬೇಕು.

ಸಾಬೂನಿನಲ್ಲಿ ಹ್ಯಾಂಡ್ ವಾಷ್ ಗೆ ವ್ಯವಸ್ಥೆ ಮಾಡಿರಬೇಕು

ಸಾರ್ವಜನಿಕವಾಗಿ ಉಗುಳುವಂತಿಲ್ಲ.

ಮದುವೆ ಸ್ಥಳಗಳಲ್ಲಿ ಸ್ವಚ್ಛತೆಯನ್ನ ಕಾಪಾಡಬೇಕು.

ಮದ್ಯ, ಪಾನ್, ಗುಟ್ಕಾ, ತಂಬಾಕು ಸೇವನೆ ನಿಷಿದ್ಧ.

ಲಾಕ್ ಡೌನ್ ಅವಧಿ ಮುಗಿಯುತ್ತಾ ಬಂದರೂ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ನಡುವೆ ಮೇ 18ರಿಂದ ಲಾಕ್ ಡೌನ್ ನಲ್ಲಿ ಇನ್ನಷ್ಟು ಸಡಿಲಿಕೆ ಆಗಲಿದೆ. ಇದೇ ವೇಳೆ ರಾಜ್ಯದ ವಿವಿಧೆಡೆಗಳಲ್ಲಿ ಮದುವೆ ಸೀಜನ್ ಕೂಡ ಆರಂಭವಾಗಿದ್ದು, ಕೊರೊನಾ ಸೋಂಕು ನಿಯಂತ್ರಿಸುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಪ್ತಪದಿಗೆ 17 ಮಾರ್ಗಸೂಚಿಯನ್ನು ರೂಪಿಸಿ, ಮದುವೆಯಲ್ಲಿಯೂ ಸಾಮಾಜಿಕ ಅಂತರ ಕಡ್ಡಾಯವಾಗಿ ಹೇಗೆ ಕಾಯ್ದುಕೊಳ್ಳಬೇಕು ಎಂಬ ಬಗ್ಗೆ ನಿಯಮಗಳು ಜಾರಿ ಮಾಡಿದೆ.

Spread the love
  • Related Posts

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರಿಗೆ ಇಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಮನವಿ…

    Spread the love

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    You Missed

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 2 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 8 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 7 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 9 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ