![](https://kalanirnayanews.com/wp-content/uploads/2020/05/FB_IMG_1589979392365.jpg)
ಬೆಂಗಳೂರು: ಕೊರೋನಾ ಮಹಾಮಾರಿಯಿಂದಾಗಿ ಹೊರರಾಜ್ಯದಿಂದ ತವರೂರಿಗೆ ಬರಲಾಗದೆ ಮಹಾರಾಷ್ಟ್ರ ಗಡಿಭಾಗ ನಿಪ್ಪಾಣಿಯಲ್ಲಿ ಸಿಲುಕಿಹಾಕಿಕೊಂಡ ಕರಾವಳಿಗರು ಮತ್ತು ಇತರ ಜಿಲ್ಲೆಗಳ ಕನ್ನಡಿಗರನ್ನು ತವರಿಗೆ ಕರೆತರಲು ಸಹಕರಿಸುವಂತೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರಲ್ಲಿ ಮನವಿ ಮಾಡಿದ್ದಾರೆ.
![](https://kalanirnayanews.com/wp-content/uploads/2020/05/FB_IMG_1589979384482-1.jpg)
ಯಾರೋ ಮಾಡಿದ ತಪ್ಪಿಗೆ ಬಲಿಯಾಗಿ ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಇತರ ಜಿಲ್ಲೆಗಳ ಗರ್ಭಿಣಿ, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಹಲವಾರು ಮಂದಿ ಕರ್ನಾಟಕ-ಮಹಾರಾಷ್ಟ್ರ ಗಡಿಭಾಗ ನಿಪ್ಪಾಣಿಯಲ್ಲಿ ಸಿಲುಕಿಹಾಕಿಕೊಂಡಿದ್ದಾರೆ.
ಈ ಕುರಿತಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿ, ಅಲ್ಲಿರುವ ಜನರ ಸಮಸ್ಯೆಗಳ ಕುರಿತಾಗಿ ಮನವರಿಕೆ ಮಾಡಿಕೊಡಲಾಯಿತು. ಅವರ ಕ್ಷೇಮ ಕಾಪಾಡಲು ಸಿಲುಕಿಹಾಕಿಕೊಂಡಿರುವ ನನ್ನ ಬಂಧುಗಳನ್ನು ಕರ್ನಾಟಕಕ್ಕೆ ಬರಲು ಅನುಮತಿ ನೀಡಬೇಕೆಂದು ವಿನಂತಿ ಮಾಡಿದರು.