SSLC ಪರೀಕ್ಷೆಗೆ ಸಿದ್ಧತೆ ಆರಂಭಿಸಿ: ಶಿಕ್ಷಣ ಸಚಿವರ ಸೂಚನೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಶೀಘ್ರದಲ್ಲಿಯೇ ನಡೆಸಲು ಶಿಕ್ಷಣ ಇಲಾಖೆ ಸಿದ್ದತೆ ಮಾಡಿಕೊಂಡಿದೆ. ಅಲ್ಲದೇ ಡಿಡಿಪಿಐಗಳಿಗೆ ಸಚಿವರೇ ಖುದ್ದು ಸೂಚನೆ ನೀಡಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶವನ್ನು ಸಡಿಲ ಮಾಡಲಾಗಿದೆ. ಮೇ 17ರಂದು ಮೂರನೇ ಹಂತದ ಲಾಕ್ ಡೌನ್ ಮುಕ್ತಾಯಗೊಳ್ಳಲಿದೆ. ಹೀಗಾಗಿ ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಸದ್ಯದಲ್ಲಿಯೇ ನಡೆಸಲು ಚಿಂತನೆ ನಡೆಸಲಾಗಿದೆ.

ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲಾ ಜಿಲ್ಲೆಗಳ ಡಿಡಿಪಿಐಗಳ ಜೊತೆಗೆ ವಿಡಿಯೋ ಕಾನ್ಪರೆನ್ಸ್ ನಡೆಸಿದ್ದಾರೆ. ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತ ಸುರೇಶ್ ಕುಮಾರ್ ಅವರು ಸೂಚನೆಯನ್ನು ನೀಡಿದ್ದಾರೆ.

ಪ್ರತೀ ಪರೀಕ್ಷಾ ಕೊಠಡಿಗಳಲ್ಲಿ ಕೇವಲ 24 ವಿದ್ಯಾರ್ಥಿಗಳಿಗೆ ಮಾತ್ರವೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಹೀಗಾಗಿ ಹೆಚ್ಚುವರಿ ಕೊಠಡಿಗಳ ವ್ಯವಸ್ಥೆಯನ್ನು ಮಾಡಿಕೊಳ್ಳಲು ಸೂಚಿಸಲಾಗಿದೆ. ಎಸ್ಎಸ್ಎಲ್ ಸಿ ಪರೀಕ್ಷಾ ಕೊಠಡಿಗಳಲ್ಲಿ ಪ್ರತೀ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಸ್ಕ್ರೀನಿಂಗ್ ಗೆ ಒಳಪಡಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಬೇಕು. ಇನ್ನು ಕಂಟೈನ್ಮೆಂಟ್ ಪರೀಕ್ಷಾ ಕೇಂದ್ರಗಳನ್ನು ಶೀಪ್ಟ್ ಮಾಡುವಂತೆ ಸೂಚನೆ ನೀಡಲಾಗಿದೆ.

ಮಾಸ್ಕ್ , ಸ್ಯಾನಿಟೈಜರ್ ಹಾಗೂ ಜ್ವರ ತಪಾಸಣೆ ಕಡ್ಡಾಯ : ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಜರ್ ಗಳನ್ನು ಒದಗಿಸಿ ಥರ್ಮಲ್ ತಪಾಸಣೆಗೆ ಒಳಪಡಿಸಿ ಪರೀಕ್ಷೆಗೆ ಹಾಜರುಪಡಿಸಲು ಕ್ರಮ ಕೈಗೊಳ್ಳಬೇಕು. ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯನ್ನು ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು. ಯಾವುದೇ ವಿದ್ಯಾರ್ಥಿಯೂ ನೆಲದ ಮೇಲಾಗಲೀ, ಬಯಲಿನಲ್ಲಾಗಲೀ ಪರೀಕ್ಷೆ ಬರೆಯದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದ ಸಚಿವರು, ಅಗತ್ಯವಾದ ಡೆಸ್ಕ್, ಬೆಂಚ್ ಗಳನ್ನು ಅಸುಪಾಸಿನ ಶಾಲೆಗಳಿಂದ ಸಂಗ್ರಹಿಸಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಪರೀಕ್ಷಾ ವಾತಾವರಣವನ್ನು ಕಲ್ಪಿಸಬೇಕೆಂದು ಸಲಹೆ ನೀಡಿದರು.


ಆಂಗ್ಲ ಮಾಧ್ಯಮ ಪುನರ್ಮನನ ತರಗತಿಗಳ ಪ್ರಾರಂಭ : ಶಿಕ್ಷಣ ಇಲಾಖೆ ಚಂದನ ವಾಹಿನಿಯಲ್ಲಿ ಈಗಾಗಲೇ ಪರೀಕ್ಷಾರ್ಥಿಗಳಿಗೆ ಪುನರ್ಮನನ ತರಗತಿಗಳನ್ನು ನಡೆಸುತ್ತಿದ್ದು, ಈ ವಾರದಿಂದಲೇ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೂ ಪುನರ್ಮನನ ತರಗತಿಗಳನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಲಾಖೆಯ ಮಕ್ಕಳವಾಣಿ ಯೂ-ಟ್ಯೂಬ್ ಚಾನೆಲ್ ನಲ್ಲಿಯೂ ಸಹ ಪುನರ್ಮನನ ತರಗತಿಗಳು ವಿದ್ಯಾರ್ಥಿಗಳಿಗೆ ಲಭ್ಯವಿದ್ದು, ಎಸ್ಎಸ್ ಎಲ್ ಸಿ ಪರೀಕ್ಷೆ ಕುರಿತು ಮಕ್ಕಳಲ್ಲಿ ಅನುಮಾನ ಗಳಿದ್ದರೆ ಪರೀಕ್ಷೆ ಇಷ್ಟರಲ್ಲೇ ನಡೆಯಲಿದೆ ಎಂಬ ಕುರಿತು ಮಕ್ಕಳಿಗೆ ಮತ್ತು ಪೋಷಕರಿಗೆ ಮನವರಿಕೆ ಮಾಡಬೇಕೆಂದು ಸಚಿವರು ಡಿಡಿಪಿ ಐಗಳಿಗೆ ಸೂಚಿಸಿದರು.


ಪರೀಕ್ಷೆ ಸಿದ್ಧತೆಗೆ ಸಮಯ: ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುವ ಮೊದಲು ವಿಷಯವಾರು ಅವಶ್ಯಕ ಅಂತರವನ್ನು ಕಾಪಾಡಿಕೊಳ್ಳಲು ಯೋಜನೆ ರೂಪಿಸಬೇಕೆಂದು ಇಲಾಖಾ ಆಯುಕ್ತರಿಗೆ ಸೂಚಿಸಿದ ಸುರೇಶ್ ಕುಮಾರ್, ಈಗಾಗಲೇ ಬೇರೆ ಊರುಗಳಿಗೆ ತೆರಳಿರುವ ವಿದ್ಯಾರ್ಥಿಗಳಿಗೆ ಅವರು ಪ್ರಸ್ತುತ ಇರುವ ಸ್ಥಳಗಳಲ್ಲಿಯೇ ಹತ್ತಿರದ ಪರೀಕ್ಷಾ ಕೇಂದ್ರಗಳನ್ನು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಕುರಿತಂತೆ ಕ್ರಿಯಾಯೋಜನೆ ರೂಪಿಸಬೇಕೆಂದು ಸೂಚಿಸಿದರು.
ಎಸ್ ಎಸ್ ಎಲ್ ಸಿ ಪರೀಕ್ಷಾ ಸಿದ್ಧತೆ ಕುರಿತು, ಆನ್ ಲೈನ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಶ್ನೆ ಪತ್ರಿಕೆ-ಉತ್ತರ ಪತ್ರಿಕೆ ವಿನಿಮಯ, ಸಹಾಯವಾಣಿ ಮೂಲಕ ಸಂದೇಹಗಳ ನಿವಾರಣೆ, ಸ್ಥಳೀಯ ರೇಡಿಯೋ ಕೇಬಲ್ ಟಿವಿ ಚಾನೆಲ್ ಗಳ ಮೂಲಕ ಬೋಧನಾ ಪ್ರಕ್ರಿಯೆ ನಿರ್ವಹಣೆ ಸೇರಿದಂತೆ ಇಲಾಖೆಯ ಜಿಲ್ಲಾ ಆಡಳಿತಗಳ ಹಲವಾರು ಉಪಕ್ರಮಗಳನ್ನು ಶ್ಲಾಘಿಸಿದ ಸಚಿವರು, ಪರೀಕ್ಷೆಗಳನ್ನುತುಂಬಾ ಆತ್ಮವಿಶ್ವಾಸದಿಂದ ಎದುರು ನೋಡುತ್ತಿರುವ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಇದೇ ರೀತಿಯ ಭರವಸೆ ಮೂಡಿಸುವ ಪ್ರಯತ್ನಗಳು ಪರೀಕ್ಷಾ ಪಕ್ರಿಯೆ ಪೂರ್ಣಗೊಳ್ಳುವವರೆಗೆ ನಿರಂತರವಾಗಿ ಜಾರಿಯಲ್ಲಿರಲಿ ಎಂದು ಸೂಚಿಸದರು.

Spread the love
  • Related Posts

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ಗುರುವಾಯನಕೆರೆ, ಆ.14: ಎಕ್ಸೆಲ್ ಪದವಿ ಪೂರ್ವ ಕಾಲೇಜು, ಗುರುವಾಯನಕೆರೆಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದ ಅಂಗವಾಗಿ ಆಗಸ್ಟ್ 15 ಹಾಗೂ 16ರಂದು ಎರಡು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಶೈಕ್ಷಣಿಕ ಸಾಧಕರ ಅಭಿನಂದನೆ ಹಾಗೂ “ರಕ್ಷಕ ನಮನ-2026” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆಗಸ್ಟ್ 15ರಂದು…

    Spread the love

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    You Missed

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 2 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 8 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 9 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 20 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 30 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 14 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ