ದೇಶಾದ್ಯಂತ ಮತ್ತೆ ಮುಂದುವರಿದ ಲಾಕ್ ಡೌನ್

ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮತ್ತಷ್ಟು ವಿಸ್ತರಣೆ ಮಾಡಿರುವ ಕೇಂದ್ರ ಗೃಹ ಇಲಾಖೆ ಹೊಸದಾಗಿ ಒಂದು ಕಠಿಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಮೇ 3ರಂದು ಎರಡನೇ ಹಂತದ ಲಾಕ್​ಡೌನ್ ಅವಧಿ ಮುಗಿಯಬೇಕಿತ್ತು. ಆದರೆ ದಿನೇದಿನೆ ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್​ ಡೌನ್​ ನ್ನು ಮೇ 17ರವರೆಗೆ ವಿಸ್ತರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ

ಇದೇ ವೇಳೆ ದೇಶದ ಜಿಲ್ಲೆಗಳನ್ನು ಕೆಂಪು (ಹಾಟ್‌ಸ್ಪಾಟ್), ಹಸಿರು ಮತ್ತು ಅರೇಂಜ್ ವಲಯಗಳಾಗಿ ಅಪಾಯದ ವಿವರಗಳ ಆಧಾರದ ಮೇಲೆ ಈ ಅವಧಿಯಲ್ಲಿ ವಿವಿಧ ಚಟುವಟಿಕೆಗಳನ್ನು ನಿಯಂತ್ರಿಸಲು ಎಂಹೆಚ್‌ಎ ಹೊಸ ಮಾರ್ಗಸೂಚಿಗಳನ್ನು ಸಹ ನೀಡಿದೆ.

ಏನಿದೆ ಮಾರ್ಗಸೂಚಿಯಲ್ಲಿ?

ಮತ್ತೆ 2 ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ
ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮ ರದ್ದು
ಬಸ್, ರೈಲು ಹಾಗೂ ವಿಮಾನ ಸಂಚಾರ ರದ್ದು
ಮಹಾನಗರಗಳಲ್ಲಿ ಮೆಟ್ರೋ ರೈಲು ಸಂಚಾರ ಇಲ್ಲ
ಟ್ಯಾಕ್ಸಿ ಹಾಗೂ ಆಟೋ ಸಂಚಾರ ಇಲ್ಲ
ಕಟಿಂಗ್ ಶಾಪ್’ಗಳನ್ನು ಎಲ್ಲಿಯೂ ತೆರೆಯುವಂತಿಲ್ಲ
ಅಗತ್ಯ ವಸ್ತು ಪೂರೈಕೆಯ ಗೂಡ್ಸ್‌ ರೈಲು, ವಾಹನಕ್ಕೆ ಮಾತ್ರ ಅವಕಾಶ
ಗರ್ಭಿಣಿ, ಮಕ್ಕಳು ಹಾಗೂ ವೃದ್ದರು ಕಡ್ಡಾಯವಾಗಿ ಮನೆಯಲ್ಲೇ ಇರಬೇಕು
ಅಗತ್ಯ ವಸ್ತು ಖರೀದಿಗೆ ಮಾತ್ರ ರಸ್ತೆಗೆ ಬರಬೇಕು
ಅನಗತ್ಯವಾಗಿ ಯಾರೂ ಮನೆಯಿಂದ ಹೊರಕ್ಕೆ ಓಡಾಡುವಂತಿಲ್ಲ
ಥಿಯೇಟರ್, ಮಾಲ್, ಜಿಮ್, ಸ್ವಿಮ್ಮಿಂಗ್ ಪೂಲ್ ತೆರೆಯುವಂತಿಲ್ಲ
ಸಂಜೆ 7ರಿಂದ ಮುಂಜಾನೆ 7ರವರೆಗೂ ಕಡ್ಡಾಯವಾಗಿ ಯಾರೂ ಓಡಾಡುವಂತಿಲ್ಲ
ಅಂತಾರಾಜ್ಯ ವಾಹನ ಸಂಚಾರ ಸಂಪೂರ್ಣ ಬಂದ್
ಯಾವುದೇ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ
ಕೈಗಾರಿಕೆಗಳಿಗೆ ಷರತ್ತುಬದ್ದ ಅನುಮತಿ
ಬಾರ್ ಅಂಡ್ ರೆಸ್ಟೋರೆಂಟ್’ಗಳಿಗೆ ಅನುಮತಿ ಇಲ್ಲ

ಆರೆಂಜ್ ಝೋನ್’ನಲ್ಲಿ ಯಾವುದಕ್ಕೆಲ್ಲ ಅವಕಾಶ?

ನಿಗದಿತ ಪಾಸ್ ಹೊಂದಿರುವವರು ಮಾತ್ರ ಓಡಾಡಬಹುದು
ಅಗತ್ಯವಿದ್ದಲ್ಲಿ ಕಾರು ಬಳಸಬಹುದು. ಆದರೆ, ಕಾರಿನಲ್ಲಿ ಚಾಲಕ ಸೇರಿ ಇಬ್ಬರಿಗೆ ಮಾತ್ರ ಅವಕಾಶ
ಬೈಕ್’ನಲ್ಲಿ ಕೇವಲ ಒಬ್ಬರು ಮಾತ್ರ ಸಂಚರಿಸಬಹುದು
ಬಸ್ ಸಂಚಾರ ಇರುವುದಿಲ್ಲ.

ಗ್ರೀನ್ ಝೋನ್’ನಲ್ಲಿ ಯಾವುದಕ್ಕೆ ಅವಕಾಶ?

ಈ ಜಿಲ್ಲಾ ವ್ಯಾಪ್ತಿಯಲ್ಲಿ ಬಸ್ ಓಡಾಟಕ್ಕೆ ಅವಕಾಶವಿದ್ದು, ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ
ಟ್ಯಾಕ್ಸಿ ಓಡಾಟಕ್ಕೆ ಅವಕಾಶವಿದ್ದು, ಚಾಲಕ ಸೇರಿ ಇಬ್ಬರಿಗೆ ಮಾತ್ರ ಅವಕಾಶ

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಿಸಿಲಿನ ತಾಪಮಾನವು ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ತೀವ್ರ ಉಷ್ಣತೆಯಿಂದ ಮಾನವರ ಜೊತೆಗೆ ಪ್ರಾಣಿ–ಪಕ್ಷಿಗಳೂ ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿವೆ. ವಿಶೇಷವಾಗಿ ನೀರಿನ ಕೊರತೆಯಿಂದ ಅನೇಕ ಪಕ್ಷಿಗಳು ಹಾಗೂ ಪ್ರಾಣಿಗಳು ಜೀವಕ್ಕೆ ಹಾನಿಯಾಗುವ ಪರಿಸ್ಥಿತಿ ಎದುರಿಸುತ್ತಿವೆ.…

    Spread the love

    You Missed

    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    • By admin
    • May 1, 2026
    • 22 views
    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 56 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 228 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 59 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 57 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 116 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ