ದೇಶಾದ್ಯಂತ ಮತ್ತೆ ಮುಂದುವರಿದ ಲಾಕ್ ಡೌನ್

ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮತ್ತಷ್ಟು ವಿಸ್ತರಣೆ ಮಾಡಿರುವ ಕೇಂದ್ರ ಗೃಹ ಇಲಾಖೆ ಹೊಸದಾಗಿ ಒಂದು ಕಠಿಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಮೇ 3ರಂದು ಎರಡನೇ ಹಂತದ ಲಾಕ್​ಡೌನ್ ಅವಧಿ ಮುಗಿಯಬೇಕಿತ್ತು. ಆದರೆ ದಿನೇದಿನೆ ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್​ ಡೌನ್​ ನ್ನು ಮೇ 17ರವರೆಗೆ ವಿಸ್ತರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ

ಇದೇ ವೇಳೆ ದೇಶದ ಜಿಲ್ಲೆಗಳನ್ನು ಕೆಂಪು (ಹಾಟ್‌ಸ್ಪಾಟ್), ಹಸಿರು ಮತ್ತು ಅರೇಂಜ್ ವಲಯಗಳಾಗಿ ಅಪಾಯದ ವಿವರಗಳ ಆಧಾರದ ಮೇಲೆ ಈ ಅವಧಿಯಲ್ಲಿ ವಿವಿಧ ಚಟುವಟಿಕೆಗಳನ್ನು ನಿಯಂತ್ರಿಸಲು ಎಂಹೆಚ್‌ಎ ಹೊಸ ಮಾರ್ಗಸೂಚಿಗಳನ್ನು ಸಹ ನೀಡಿದೆ.

ಏನಿದೆ ಮಾರ್ಗಸೂಚಿಯಲ್ಲಿ?

ಮತ್ತೆ 2 ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ
ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮ ರದ್ದು
ಬಸ್, ರೈಲು ಹಾಗೂ ವಿಮಾನ ಸಂಚಾರ ರದ್ದು
ಮಹಾನಗರಗಳಲ್ಲಿ ಮೆಟ್ರೋ ರೈಲು ಸಂಚಾರ ಇಲ್ಲ
ಟ್ಯಾಕ್ಸಿ ಹಾಗೂ ಆಟೋ ಸಂಚಾರ ಇಲ್ಲ
ಕಟಿಂಗ್ ಶಾಪ್’ಗಳನ್ನು ಎಲ್ಲಿಯೂ ತೆರೆಯುವಂತಿಲ್ಲ
ಅಗತ್ಯ ವಸ್ತು ಪೂರೈಕೆಯ ಗೂಡ್ಸ್‌ ರೈಲು, ವಾಹನಕ್ಕೆ ಮಾತ್ರ ಅವಕಾಶ
ಗರ್ಭಿಣಿ, ಮಕ್ಕಳು ಹಾಗೂ ವೃದ್ದರು ಕಡ್ಡಾಯವಾಗಿ ಮನೆಯಲ್ಲೇ ಇರಬೇಕು
ಅಗತ್ಯ ವಸ್ತು ಖರೀದಿಗೆ ಮಾತ್ರ ರಸ್ತೆಗೆ ಬರಬೇಕು
ಅನಗತ್ಯವಾಗಿ ಯಾರೂ ಮನೆಯಿಂದ ಹೊರಕ್ಕೆ ಓಡಾಡುವಂತಿಲ್ಲ
ಥಿಯೇಟರ್, ಮಾಲ್, ಜಿಮ್, ಸ್ವಿಮ್ಮಿಂಗ್ ಪೂಲ್ ತೆರೆಯುವಂತಿಲ್ಲ
ಸಂಜೆ 7ರಿಂದ ಮುಂಜಾನೆ 7ರವರೆಗೂ ಕಡ್ಡಾಯವಾಗಿ ಯಾರೂ ಓಡಾಡುವಂತಿಲ್ಲ
ಅಂತಾರಾಜ್ಯ ವಾಹನ ಸಂಚಾರ ಸಂಪೂರ್ಣ ಬಂದ್
ಯಾವುದೇ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ
ಕೈಗಾರಿಕೆಗಳಿಗೆ ಷರತ್ತುಬದ್ದ ಅನುಮತಿ
ಬಾರ್ ಅಂಡ್ ರೆಸ್ಟೋರೆಂಟ್’ಗಳಿಗೆ ಅನುಮತಿ ಇಲ್ಲ

ಆರೆಂಜ್ ಝೋನ್’ನಲ್ಲಿ ಯಾವುದಕ್ಕೆಲ್ಲ ಅವಕಾಶ?

ನಿಗದಿತ ಪಾಸ್ ಹೊಂದಿರುವವರು ಮಾತ್ರ ಓಡಾಡಬಹುದು
ಅಗತ್ಯವಿದ್ದಲ್ಲಿ ಕಾರು ಬಳಸಬಹುದು. ಆದರೆ, ಕಾರಿನಲ್ಲಿ ಚಾಲಕ ಸೇರಿ ಇಬ್ಬರಿಗೆ ಮಾತ್ರ ಅವಕಾಶ
ಬೈಕ್’ನಲ್ಲಿ ಕೇವಲ ಒಬ್ಬರು ಮಾತ್ರ ಸಂಚರಿಸಬಹುದು
ಬಸ್ ಸಂಚಾರ ಇರುವುದಿಲ್ಲ.

ಗ್ರೀನ್ ಝೋನ್’ನಲ್ಲಿ ಯಾವುದಕ್ಕೆ ಅವಕಾಶ?

ಈ ಜಿಲ್ಲಾ ವ್ಯಾಪ್ತಿಯಲ್ಲಿ ಬಸ್ ಓಡಾಟಕ್ಕೆ ಅವಕಾಶವಿದ್ದು, ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ
ಟ್ಯಾಕ್ಸಿ ಓಡಾಟಕ್ಕೆ ಅವಕಾಶವಿದ್ದು, ಚಾಲಕ ಸೇರಿ ಇಬ್ಬರಿಗೆ ಮಾತ್ರ ಅವಕಾಶ

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    🙏 ಪುಟ್ಟ ಶಿವಾನಿಯ ಚಿಕಿತ್ಸೆಗೆ ನೆರವಾಗಿ ನಿಮ್ಮ ಸಣ್ಣ ಸಹಾಯವೂ ಒಂದು ಜೀವ ಉಳಿಸಬಹುದು. “ಸಹಾಯಹಸ್ತ ನೀಡಲು ಇಲ್ಲಿ ಕ್ಲಿಕ್ ಮಾಡಿ” ❤️ DONATE NOW SHIVANI upi://pay?pa=107044785044457@cnrb&pn=PADMARAJA&mc=5198&tr=1234567887654321&am=0&mam=0&cu=INR ಬೆಳ್ತಂಗಡಿ, ಆ. 9: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿಗಳಾದ ಪದ್ಮರಾಜ್…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 9 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 8 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 9 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 13 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ