ದೇಶಾದ್ಯಂತ ಮತ್ತೆ ಮುಂದುವರಿದ ಲಾಕ್ ಡೌನ್

ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮತ್ತಷ್ಟು ವಿಸ್ತರಣೆ ಮಾಡಿರುವ ಕೇಂದ್ರ ಗೃಹ ಇಲಾಖೆ ಹೊಸದಾಗಿ ಒಂದು ಕಠಿಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಮೇ 3ರಂದು ಎರಡನೇ ಹಂತದ ಲಾಕ್​ಡೌನ್ ಅವಧಿ ಮುಗಿಯಬೇಕಿತ್ತು. ಆದರೆ ದಿನೇದಿನೆ ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್​ ಡೌನ್​ ನ್ನು ಮೇ 17ರವರೆಗೆ ವಿಸ್ತರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ

ಇದೇ ವೇಳೆ ದೇಶದ ಜಿಲ್ಲೆಗಳನ್ನು ಕೆಂಪು (ಹಾಟ್‌ಸ್ಪಾಟ್), ಹಸಿರು ಮತ್ತು ಅರೇಂಜ್ ವಲಯಗಳಾಗಿ ಅಪಾಯದ ವಿವರಗಳ ಆಧಾರದ ಮೇಲೆ ಈ ಅವಧಿಯಲ್ಲಿ ವಿವಿಧ ಚಟುವಟಿಕೆಗಳನ್ನು ನಿಯಂತ್ರಿಸಲು ಎಂಹೆಚ್‌ಎ ಹೊಸ ಮಾರ್ಗಸೂಚಿಗಳನ್ನು ಸಹ ನೀಡಿದೆ.

ಏನಿದೆ ಮಾರ್ಗಸೂಚಿಯಲ್ಲಿ?

ಮತ್ತೆ 2 ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ
ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮ ರದ್ದು
ಬಸ್, ರೈಲು ಹಾಗೂ ವಿಮಾನ ಸಂಚಾರ ರದ್ದು
ಮಹಾನಗರಗಳಲ್ಲಿ ಮೆಟ್ರೋ ರೈಲು ಸಂಚಾರ ಇಲ್ಲ
ಟ್ಯಾಕ್ಸಿ ಹಾಗೂ ಆಟೋ ಸಂಚಾರ ಇಲ್ಲ
ಕಟಿಂಗ್ ಶಾಪ್’ಗಳನ್ನು ಎಲ್ಲಿಯೂ ತೆರೆಯುವಂತಿಲ್ಲ
ಅಗತ್ಯ ವಸ್ತು ಪೂರೈಕೆಯ ಗೂಡ್ಸ್‌ ರೈಲು, ವಾಹನಕ್ಕೆ ಮಾತ್ರ ಅವಕಾಶ
ಗರ್ಭಿಣಿ, ಮಕ್ಕಳು ಹಾಗೂ ವೃದ್ದರು ಕಡ್ಡಾಯವಾಗಿ ಮನೆಯಲ್ಲೇ ಇರಬೇಕು
ಅಗತ್ಯ ವಸ್ತು ಖರೀದಿಗೆ ಮಾತ್ರ ರಸ್ತೆಗೆ ಬರಬೇಕು
ಅನಗತ್ಯವಾಗಿ ಯಾರೂ ಮನೆಯಿಂದ ಹೊರಕ್ಕೆ ಓಡಾಡುವಂತಿಲ್ಲ
ಥಿಯೇಟರ್, ಮಾಲ್, ಜಿಮ್, ಸ್ವಿಮ್ಮಿಂಗ್ ಪೂಲ್ ತೆರೆಯುವಂತಿಲ್ಲ
ಸಂಜೆ 7ರಿಂದ ಮುಂಜಾನೆ 7ರವರೆಗೂ ಕಡ್ಡಾಯವಾಗಿ ಯಾರೂ ಓಡಾಡುವಂತಿಲ್ಲ
ಅಂತಾರಾಜ್ಯ ವಾಹನ ಸಂಚಾರ ಸಂಪೂರ್ಣ ಬಂದ್
ಯಾವುದೇ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ
ಕೈಗಾರಿಕೆಗಳಿಗೆ ಷರತ್ತುಬದ್ದ ಅನುಮತಿ
ಬಾರ್ ಅಂಡ್ ರೆಸ್ಟೋರೆಂಟ್’ಗಳಿಗೆ ಅನುಮತಿ ಇಲ್ಲ

ಆರೆಂಜ್ ಝೋನ್’ನಲ್ಲಿ ಯಾವುದಕ್ಕೆಲ್ಲ ಅವಕಾಶ?

ನಿಗದಿತ ಪಾಸ್ ಹೊಂದಿರುವವರು ಮಾತ್ರ ಓಡಾಡಬಹುದು
ಅಗತ್ಯವಿದ್ದಲ್ಲಿ ಕಾರು ಬಳಸಬಹುದು. ಆದರೆ, ಕಾರಿನಲ್ಲಿ ಚಾಲಕ ಸೇರಿ ಇಬ್ಬರಿಗೆ ಮಾತ್ರ ಅವಕಾಶ
ಬೈಕ್’ನಲ್ಲಿ ಕೇವಲ ಒಬ್ಬರು ಮಾತ್ರ ಸಂಚರಿಸಬಹುದು
ಬಸ್ ಸಂಚಾರ ಇರುವುದಿಲ್ಲ.

ಗ್ರೀನ್ ಝೋನ್’ನಲ್ಲಿ ಯಾವುದಕ್ಕೆ ಅವಕಾಶ?

ಈ ಜಿಲ್ಲಾ ವ್ಯಾಪ್ತಿಯಲ್ಲಿ ಬಸ್ ಓಡಾಟಕ್ಕೆ ಅವಕಾಶವಿದ್ದು, ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ
ಟ್ಯಾಕ್ಸಿ ಓಡಾಟಕ್ಕೆ ಅವಕಾಶವಿದ್ದು, ಚಾಲಕ ಸೇರಿ ಇಬ್ಬರಿಗೆ ಮಾತ್ರ ಅವಕಾಶ

Spread the love
  • Related Posts

    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ, ಬಿಜೆಪಿ 2 ಸ್ಥಾನ ಬೆಂಗಳೂರು, ಜೂನ್ 18: ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿ 5 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ 2 ಸ್ಥಾನಗಳಲ್ಲಿ ಜಯಗಳಿಸಿದ್ದು,…

    Spread the love

    “ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

    ಐಐಟಿ ದೆಹಲಿ ಸೇರಿದಂತೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೆ ಎಕ್ಸೆಲ್ ವಿದ್ಯಾರ್ಥಿಗಳ ಆಯ್ಕೆ ಗುರುವಾಯನಕೆರೆ, ಜೂನ್ 18: ಭಾರತದ ಪ್ರತಿಷ್ಠಿತ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಾದ ಐಐಟಿ, ಎನ್‌ಐಟಿ, ಐಐಐಟಿ ಹಾಗೂ ಇತರೆ ಸರ್ಕಾರಿ ಅನುದಾನಿತ ತಾಂತ್ರಿಕ ಸಂಸ್ಥೆಗಳ (ಜಿಎಫ್‌ಟಿಐ) ಪ್ರವೇಶಕ್ಕಾಗಿ ಕೇಂದ್ರ ಶಿಕ್ಷಣ…

    Spread the love

    You Missed

    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    • By admin
    • June 18, 2026
    • 19 views
    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    “ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

    • By admin
    • June 18, 2026
    • 64 views
    “ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

    “ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”

    • By admin
    • June 18, 2026
    • 61 views
    “ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”

    “ಮೋಡಗಳ ಮುದ್ದಾಟದಲ್ಲಿ ಮಿಂದೇಳುವ ಪರ್ವತಗಳು, ಜಲಪಾತಗಳ ಜೋಗುಳದಲ್ಲಿ ತೇಲುವ ಕಣಿವೆಗಳು, ಹಸಿರಿನ ಹೊದಿಕೆಯಲ್ಲಿ ಕಂಗೊಳಿಸುವ ಭೂಮಿ – ಇದೇ ಪ್ರಕೃತಿಯ ಮಡಿಲಲ್ಲಿ ಸಿಗುವ ನಿಜವಾದ ಸ್ವರ್ಗಾನುಭವ”

    • By admin
    • June 18, 2026
    • 55 views
    “ಮೋಡಗಳ ಮುದ್ದಾಟದಲ್ಲಿ ಮಿಂದೇಳುವ ಪರ್ವತಗಳು, ಜಲಪಾತಗಳ ಜೋಗುಳದಲ್ಲಿ ತೇಲುವ ಕಣಿವೆಗಳು, ಹಸಿರಿನ ಹೊದಿಕೆಯಲ್ಲಿ ಕಂಗೊಳಿಸುವ ಭೂಮಿ – ಇದೇ ಪ್ರಕೃತಿಯ ಮಡಿಲಲ್ಲಿ ಸಿಗುವ ನಿಜವಾದ ಸ್ವರ್ಗಾನುಭವ”

    “ವೀರೇಂದ್ರ ಹೆಗ್ಗಡೆಯವರ ವಿರುದ್ಧ ಪೋಸ್ಟ್‌: ಗಿರೀಶ್‌ ಮಟ್ಟೆಣ್ಣನವರ್‌ಗೆ ಹೈಕೋರ್ಟ್‌ ತರಾಟೆ; ಪ್ರಮಾಣಪತ್ರ ಸಲ್ಲಿಸಲು ಸೂಚನೆ”

    • By admin
    • June 18, 2026
    • 41 views
    “ವೀರೇಂದ್ರ ಹೆಗ್ಗಡೆಯವರ ವಿರುದ್ಧ ಪೋಸ್ಟ್‌: ಗಿರೀಶ್‌ ಮಟ್ಟೆಣ್ಣನವರ್‌ಗೆ ಹೈಕೋರ್ಟ್‌ ತರಾಟೆ; ಪ್ರಮಾಣಪತ್ರ ಸಲ್ಲಿಸಲು ಸೂಚನೆ”

    “ದುರಸ್ತಿ ಕಾರ್ಯದಲ್ಲಿದ್ದ ಚಾಲಕನ ಮೇಲೆ ಹರಿದ ತಾನೇ ಚಲಾಯಿಸುವ ಲಾರಿ; ಚಾಲಕ ಸ್ಥಳದಲ್ಲೇ ಸಾವು”.

    • By admin
    • June 18, 2026
    • 65 views
    “ದುರಸ್ತಿ ಕಾರ್ಯದಲ್ಲಿದ್ದ ಚಾಲಕನ ಮೇಲೆ ಹರಿದ ತಾನೇ ಚಲಾಯಿಸುವ ಲಾರಿ; ಚಾಲಕ ಸ್ಥಳದಲ್ಲೇ ಸಾವು”.