ದೇಶಾದ್ಯಂತ ಮತ್ತೆ ಮುಂದುವರಿದ ಲಾಕ್ ಡೌನ್

ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮತ್ತಷ್ಟು ವಿಸ್ತರಣೆ ಮಾಡಿರುವ ಕೇಂದ್ರ ಗೃಹ ಇಲಾಖೆ ಹೊಸದಾಗಿ ಒಂದು ಕಠಿಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಮೇ 3ರಂದು ಎರಡನೇ ಹಂತದ ಲಾಕ್​ಡೌನ್ ಅವಧಿ ಮುಗಿಯಬೇಕಿತ್ತು. ಆದರೆ ದಿನೇದಿನೆ ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್​ ಡೌನ್​ ನ್ನು ಮೇ 17ರವರೆಗೆ ವಿಸ್ತರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ

ಇದೇ ವೇಳೆ ದೇಶದ ಜಿಲ್ಲೆಗಳನ್ನು ಕೆಂಪು (ಹಾಟ್‌ಸ್ಪಾಟ್), ಹಸಿರು ಮತ್ತು ಅರೇಂಜ್ ವಲಯಗಳಾಗಿ ಅಪಾಯದ ವಿವರಗಳ ಆಧಾರದ ಮೇಲೆ ಈ ಅವಧಿಯಲ್ಲಿ ವಿವಿಧ ಚಟುವಟಿಕೆಗಳನ್ನು ನಿಯಂತ್ರಿಸಲು ಎಂಹೆಚ್‌ಎ ಹೊಸ ಮಾರ್ಗಸೂಚಿಗಳನ್ನು ಸಹ ನೀಡಿದೆ.

ಏನಿದೆ ಮಾರ್ಗಸೂಚಿಯಲ್ಲಿ?

ಮತ್ತೆ 2 ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ
ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮ ರದ್ದು
ಬಸ್, ರೈಲು ಹಾಗೂ ವಿಮಾನ ಸಂಚಾರ ರದ್ದು
ಮಹಾನಗರಗಳಲ್ಲಿ ಮೆಟ್ರೋ ರೈಲು ಸಂಚಾರ ಇಲ್ಲ
ಟ್ಯಾಕ್ಸಿ ಹಾಗೂ ಆಟೋ ಸಂಚಾರ ಇಲ್ಲ
ಕಟಿಂಗ್ ಶಾಪ್’ಗಳನ್ನು ಎಲ್ಲಿಯೂ ತೆರೆಯುವಂತಿಲ್ಲ
ಅಗತ್ಯ ವಸ್ತು ಪೂರೈಕೆಯ ಗೂಡ್ಸ್‌ ರೈಲು, ವಾಹನಕ್ಕೆ ಮಾತ್ರ ಅವಕಾಶ
ಗರ್ಭಿಣಿ, ಮಕ್ಕಳು ಹಾಗೂ ವೃದ್ದರು ಕಡ್ಡಾಯವಾಗಿ ಮನೆಯಲ್ಲೇ ಇರಬೇಕು
ಅಗತ್ಯ ವಸ್ತು ಖರೀದಿಗೆ ಮಾತ್ರ ರಸ್ತೆಗೆ ಬರಬೇಕು
ಅನಗತ್ಯವಾಗಿ ಯಾರೂ ಮನೆಯಿಂದ ಹೊರಕ್ಕೆ ಓಡಾಡುವಂತಿಲ್ಲ
ಥಿಯೇಟರ್, ಮಾಲ್, ಜಿಮ್, ಸ್ವಿಮ್ಮಿಂಗ್ ಪೂಲ್ ತೆರೆಯುವಂತಿಲ್ಲ
ಸಂಜೆ 7ರಿಂದ ಮುಂಜಾನೆ 7ರವರೆಗೂ ಕಡ್ಡಾಯವಾಗಿ ಯಾರೂ ಓಡಾಡುವಂತಿಲ್ಲ
ಅಂತಾರಾಜ್ಯ ವಾಹನ ಸಂಚಾರ ಸಂಪೂರ್ಣ ಬಂದ್
ಯಾವುದೇ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ
ಕೈಗಾರಿಕೆಗಳಿಗೆ ಷರತ್ತುಬದ್ದ ಅನುಮತಿ
ಬಾರ್ ಅಂಡ್ ರೆಸ್ಟೋರೆಂಟ್’ಗಳಿಗೆ ಅನುಮತಿ ಇಲ್ಲ

ಆರೆಂಜ್ ಝೋನ್’ನಲ್ಲಿ ಯಾವುದಕ್ಕೆಲ್ಲ ಅವಕಾಶ?

ನಿಗದಿತ ಪಾಸ್ ಹೊಂದಿರುವವರು ಮಾತ್ರ ಓಡಾಡಬಹುದು
ಅಗತ್ಯವಿದ್ದಲ್ಲಿ ಕಾರು ಬಳಸಬಹುದು. ಆದರೆ, ಕಾರಿನಲ್ಲಿ ಚಾಲಕ ಸೇರಿ ಇಬ್ಬರಿಗೆ ಮಾತ್ರ ಅವಕಾಶ
ಬೈಕ್’ನಲ್ಲಿ ಕೇವಲ ಒಬ್ಬರು ಮಾತ್ರ ಸಂಚರಿಸಬಹುದು
ಬಸ್ ಸಂಚಾರ ಇರುವುದಿಲ್ಲ.

ಗ್ರೀನ್ ಝೋನ್’ನಲ್ಲಿ ಯಾವುದಕ್ಕೆ ಅವಕಾಶ?

ಈ ಜಿಲ್ಲಾ ವ್ಯಾಪ್ತಿಯಲ್ಲಿ ಬಸ್ ಓಡಾಟಕ್ಕೆ ಅವಕಾಶವಿದ್ದು, ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ
ಟ್ಯಾಕ್ಸಿ ಓಡಾಟಕ್ಕೆ ಅವಕಾಶವಿದ್ದು, ಚಾಲಕ ಸೇರಿ ಇಬ್ಬರಿಗೆ ಮಾತ್ರ ಅವಕಾಶ

Spread the love
  • Related Posts

    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವತಿಯಿಂದ ಕೈಗೊಂಡಿದ್ದ ರಾಸುವಿನ ಭ್ರೂಣ ವರ್ಗಾವಣೆ ಕಾರ್ಯಕ್ರಮದ ಪ್ರಥಮ ಪ್ರಯೋಗ ಯಶಸ್ವಿಯಾಗಿದೆ. ಈ ಕಾರ್ಯಕ್ರಮಕ್ಕೆ ಅಕ್ಟೋಬರ್ 11 2025 ರಂದು ದ ಕ ಹಾಲು ಒಕ್ಕೂಟದ ಅಧ್ಯಕ್ಷರಾದ ಶ್ರೀ ರವಿರಾಜ್ ಹೆಗ್ಡೆರವರು…

    Spread the love

    ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ

    ಮಂಗಳೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್ ಟಿಎ)ಯು ಕೇಂದ್ರ ವಿಶ್ವವಿದ್ಯಾಲಯ ಹಾಗೂ ದೇಶದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್‌ನ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರಮಟ್ಟದ ಕಾಮನ್ ಪ್ರವೇಶ ಪರೀಕ್ಷೆಯಾದ ಯೂನಿವರ್ಸಿಟಿ ಪ್ರವೇಶ ಪರೀಕ್ಷೆಯಲ್ಲಿ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದ್ವಿತೀಯ ಎಂ…

    Spread the love

    You Missed

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 4 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 11 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 9 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 10 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 10 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 13 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!