ದೇಶಾದ್ಯಂತ ಮತ್ತೆ ಮುಂದುವರಿದ ಲಾಕ್ ಡೌನ್

ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮತ್ತಷ್ಟು ವಿಸ್ತರಣೆ ಮಾಡಿರುವ ಕೇಂದ್ರ ಗೃಹ ಇಲಾಖೆ ಹೊಸದಾಗಿ ಒಂದು ಕಠಿಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಮೇ 3ರಂದು ಎರಡನೇ ಹಂತದ ಲಾಕ್​ಡೌನ್ ಅವಧಿ ಮುಗಿಯಬೇಕಿತ್ತು. ಆದರೆ ದಿನೇದಿನೆ ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್​ ಡೌನ್​ ನ್ನು ಮೇ 17ರವರೆಗೆ ವಿಸ್ತರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ

ಇದೇ ವೇಳೆ ದೇಶದ ಜಿಲ್ಲೆಗಳನ್ನು ಕೆಂಪು (ಹಾಟ್‌ಸ್ಪಾಟ್), ಹಸಿರು ಮತ್ತು ಅರೇಂಜ್ ವಲಯಗಳಾಗಿ ಅಪಾಯದ ವಿವರಗಳ ಆಧಾರದ ಮೇಲೆ ಈ ಅವಧಿಯಲ್ಲಿ ವಿವಿಧ ಚಟುವಟಿಕೆಗಳನ್ನು ನಿಯಂತ್ರಿಸಲು ಎಂಹೆಚ್‌ಎ ಹೊಸ ಮಾರ್ಗಸೂಚಿಗಳನ್ನು ಸಹ ನೀಡಿದೆ.

ಏನಿದೆ ಮಾರ್ಗಸೂಚಿಯಲ್ಲಿ?

ಮತ್ತೆ 2 ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ
ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮ ರದ್ದು
ಬಸ್, ರೈಲು ಹಾಗೂ ವಿಮಾನ ಸಂಚಾರ ರದ್ದು
ಮಹಾನಗರಗಳಲ್ಲಿ ಮೆಟ್ರೋ ರೈಲು ಸಂಚಾರ ಇಲ್ಲ
ಟ್ಯಾಕ್ಸಿ ಹಾಗೂ ಆಟೋ ಸಂಚಾರ ಇಲ್ಲ
ಕಟಿಂಗ್ ಶಾಪ್’ಗಳನ್ನು ಎಲ್ಲಿಯೂ ತೆರೆಯುವಂತಿಲ್ಲ
ಅಗತ್ಯ ವಸ್ತು ಪೂರೈಕೆಯ ಗೂಡ್ಸ್‌ ರೈಲು, ವಾಹನಕ್ಕೆ ಮಾತ್ರ ಅವಕಾಶ
ಗರ್ಭಿಣಿ, ಮಕ್ಕಳು ಹಾಗೂ ವೃದ್ದರು ಕಡ್ಡಾಯವಾಗಿ ಮನೆಯಲ್ಲೇ ಇರಬೇಕು
ಅಗತ್ಯ ವಸ್ತು ಖರೀದಿಗೆ ಮಾತ್ರ ರಸ್ತೆಗೆ ಬರಬೇಕು
ಅನಗತ್ಯವಾಗಿ ಯಾರೂ ಮನೆಯಿಂದ ಹೊರಕ್ಕೆ ಓಡಾಡುವಂತಿಲ್ಲ
ಥಿಯೇಟರ್, ಮಾಲ್, ಜಿಮ್, ಸ್ವಿಮ್ಮಿಂಗ್ ಪೂಲ್ ತೆರೆಯುವಂತಿಲ್ಲ
ಸಂಜೆ 7ರಿಂದ ಮುಂಜಾನೆ 7ರವರೆಗೂ ಕಡ್ಡಾಯವಾಗಿ ಯಾರೂ ಓಡಾಡುವಂತಿಲ್ಲ
ಅಂತಾರಾಜ್ಯ ವಾಹನ ಸಂಚಾರ ಸಂಪೂರ್ಣ ಬಂದ್
ಯಾವುದೇ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ
ಕೈಗಾರಿಕೆಗಳಿಗೆ ಷರತ್ತುಬದ್ದ ಅನುಮತಿ
ಬಾರ್ ಅಂಡ್ ರೆಸ್ಟೋರೆಂಟ್’ಗಳಿಗೆ ಅನುಮತಿ ಇಲ್ಲ

ಆರೆಂಜ್ ಝೋನ್’ನಲ್ಲಿ ಯಾವುದಕ್ಕೆಲ್ಲ ಅವಕಾಶ?

ನಿಗದಿತ ಪಾಸ್ ಹೊಂದಿರುವವರು ಮಾತ್ರ ಓಡಾಡಬಹುದು
ಅಗತ್ಯವಿದ್ದಲ್ಲಿ ಕಾರು ಬಳಸಬಹುದು. ಆದರೆ, ಕಾರಿನಲ್ಲಿ ಚಾಲಕ ಸೇರಿ ಇಬ್ಬರಿಗೆ ಮಾತ್ರ ಅವಕಾಶ
ಬೈಕ್’ನಲ್ಲಿ ಕೇವಲ ಒಬ್ಬರು ಮಾತ್ರ ಸಂಚರಿಸಬಹುದು
ಬಸ್ ಸಂಚಾರ ಇರುವುದಿಲ್ಲ.

ಗ್ರೀನ್ ಝೋನ್’ನಲ್ಲಿ ಯಾವುದಕ್ಕೆ ಅವಕಾಶ?

ಈ ಜಿಲ್ಲಾ ವ್ಯಾಪ್ತಿಯಲ್ಲಿ ಬಸ್ ಓಡಾಟಕ್ಕೆ ಅವಕಾಶವಿದ್ದು, ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ
ಟ್ಯಾಕ್ಸಿ ಓಡಾಟಕ್ಕೆ ಅವಕಾಶವಿದ್ದು, ಚಾಲಕ ಸೇರಿ ಇಬ್ಬರಿಗೆ ಮಾತ್ರ ಅವಕಾಶ

Spread the love
  • Related Posts

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಗುರುವಾಯನಕೆರೆ: ಎಕ್ಸೆಲ್ ಬೆಳಕು ಫೌಂಡೇಶನ್ ಉಚಿತ ಶಿಕ್ಷಣ ಯೋಜನೆಯ ಬಗ್ಗೆ ವಿಸ್ತೃತ ಮಾಹಿತಿಯನ್ನು ಇದೇ ಬರುವ 11/01/2026ನೇ ಭಾನುವಾರ ಮಧ್ಯಾಹ್ನ 2ರಿಂದ 4.30ರವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮ್ಮಿತ್ತ ವಿಶೇಷ ಕಾರ್ಯಗಾರವನ್ನು ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾಸಾಗರ…

    Spread the love

    You Missed

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 285 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 94 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 91 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 79 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 64 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 88 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ