ಯಕ್ಷ ಕಲಾವಿದರಿಗೆ ಗೌರವ ಸಮರ್ಪಣೆಯ ಜೊತೆ ಅಗತ್ಯ ವಸ್ತುಗಳ ಕಿಟ್ ವಿತರಣೆ

ಬೆಳ್ತಂಗಡಿ: ಯಕ್ಷಗಾನ ಕರಾವಳಿ ಭಾಗದ ಮಣ್ಣಿನ ಸಾಂಪ್ರದಾಯಿಕ ಕಲೆ ಕೊರೊನಾ ಮಹಾ ಮಾರಿಯಿಂದ ಯಕ್ಷಗಾನ ಕಲೆಯನ್ನೇ ಜೀವನಾಧಾರವನ್ನಾಗಿಸಿದ ಕಲಾವಿದರಿಗೆ ದಿಕ್ಕು ತೋಚದ ಸ್ಥಿತಿ ಉಂಟಾಗಿದ್ದು ಈ ನಿಟ್ಟಿನಲ್ಲಿ ರೋಟರಿ ಕ್ಲಬ್ ವತಿಯಿಂದ ತಾಲೂಕಿನ 10 ಯಕ್ಷಗಾನ ಕಲಾವಿದರನ್ನು ಗುರುತಿಸಿ ಅಗತ್ಯ ವಸ್ತುಗಳ ಕಿಟ್ ಹಾಗೂ ಗೌರವ ಸಮರ್ಪಿಸಲಾಯಿತು.

ದಿನಾಂಕ-29-04-2020ನೇ ಬುಧವಾರ ಅಂತರರಾಷ್ಟ್ರೀಯ ನೃತ್ಯ ದಿನದಂದು  ರೋಟರಿ ಕ್ಲಬ್  ಬೆಳ್ತಂಗಡಿ ಇದರ ವತಿಯಿಂದ ತಾಲೂಕಿನ ಹತ್ತು ಮಂದಿ ಯಕ್ಷಗಾನ ಕಲಾವಿದರನ್ನು ಗುರುತಿಸಿ ಒಟ್ಟು ರೂಪಾಯಿ ಹತ್ತು ಸಾವಿರ ಮೌಲ್ಯದ ಆಹಾರ ಸಾಮಗ್ರಿಗಳನ್ನು ವಿತರಿಸಿದರು.

ಆಹಾರದ ಕಿಟ್ ಗಳ ಪ್ರಾಯೋಜಕತ್ವವನ್ನು ಬೆಂಗಳೂರಿನ ಶ್ರೀಮತಿ ಮತ್ತು ಶ್ರೀ ಅನೀಶ್, ರೋ ಕೆ.ಪಿ ಪ್ರಸಾದ್ ,ಬಿ.ಕೆ ಗೋಪಾಲ್ ರಾವ್ ಹಾಗೂ ಬಿ.ಕೆ ವಿಘ್ನೇಶ್ ಕುಮಾರ್ ಕಿಲ್ಲೂರು ವಹಿಸಿದ್ದರು. ಗೌರವಾರ್ಪಣೆಯ ಪ್ರಾಯೋಜನೆಯನ್ನು ಯೋಗೀಶ್ ಭಿಡೆ ಹಾಗೂ ಅನೆಟ್ ಅನುಷಾ ಮಚ್ಚಿಮಲೆ ನೀಡಿದ್ದರು.

ಈ ಪ್ರಶಂಸನೀಯ ಕಾರ್ಯಕ್ರಮದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಉಜಿರೆ ಅಶೋಕ್ ಭಟ್, ರೋಟರಿ ಸದಸ್ಯರಾದ ರೋ. ಕೆ. ಪಿ ಪ್ರಸಾದ್, ರೋ ಪ್ರಕಾಶ್ ಪ್ರಭು, ರೋ. ಶ್ರೀಧರ್ ಕೆ.ವಿ, ರೋ ಶಶಿಕಾಂತ್ ಡೋಂಗ್ರೆ, ರೋ. ಬಿ. ಕೆ ಧನಂಜಯ್ ರಾವ್, ಶ್ರೀಮತಿ ರಾಜಶ್ರೀ, ಶ್ರೀಮತಿ ಗಾಯತ್ರಿ ಶ್ರೀಧರ್, ವಿಷ್ಣುಮೂರ್ತಿ ಭಟ್ ಹಾಗೂ ಯಕ್ಷ ಭಾರತಿಯ ಪ್ರತಿನಿಧಿಯಾಗಿ ಸಂಚಾಲಕ ಮಹೇಶ್ ಕನ್ಯಾಡಿ ಭಾಗವಹಿಸಿದ್ದರು.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ಹಾಗೂ ಜನಜಾಗೃತಿ ಪ್ರಾದೇಶಿಕ ವಿಭಾಗ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಕಲೇಶಪುರ ತಾಲೂಕಿನ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಗಾಗಿ ಒಂದು ದಿನದ ವಿಶೇಷ ತರಬೇತಿ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ