ಲಾಕ್ ಡೌನ್ ಸಂಕಟದಲ್ಲಿದ್ದ ಬಡ ಕುಟುಂಬಗಳ ನೆರವಿಗೆ ಬಂದ ಜನಸ್ಸೇಹಿ ಬೀಟ್ ಪೋಲೀಸ್ ಶಶಿಕುಮಾರ್

ಕಡಿರುದ್ಯಾವರ: ವಿಶ್ವಾದ್ಯಂತ ಕೊರೋನಾ ಮಹಾಮಾರಿ ಸೋಂಕು ಹರಡುತ್ತಿರುವ ಹಿನ್ನೆಲೆ ದೇಶವೇ ಲಾಕ್ ಡೌನ್ ಜಾರಿಯಲ್ಲಿದ್ದು ಈ ಸಂದರ್ಭದಲ್ಲಿ ಗ್ರಾಮ ಹಲವು ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳ ಸಹಾಯ ಹಸ್ತ ಮಾಡಿದ ಬೆಳ್ತಂಗಡಿ ಠಾಣೆಯ ಸಿಬ್ಬಂದಿ ಶಶಿಕುಮಾರ್.

ಮನೆಯೊಳಗಿನ ಜಗಳದಿಂದ ಹಿಡಿದು ದೇಶದೊಳಗಿನ ಎಲ್ಲಾ ಆಗುಹೋಗುಗಳಿಗೆ ಖಾಕಿಗಳು ಬೇಕೇ ಬೇಕು. ಹಾಗಾಗಿ ಖಾಕಿ ಅಂದರೆ ಪೋಲೀಸರಿಗೆ ಕಠಿಣ ಗುಣಗಳನ್ನು ಮೈಗೂಡಿಸಿಗೊಂಡಿರುವುದು ಅನಿವಾರ್ಯವಾಗಿರುತ್ತದೆ. ಆದರೆ, ಮಾನವೀಯತೆ ಮೇಲೈಸಿಕೊಂಡ ಆರಕ್ಷಕರು ಇದ್ದಾಗ ಸಮಾಜದಲ್ಲೊಂದು ಬದಲಾವಣೆ ಆಗೋದು ಖಂಡಿತ. ಇದಕ್ಕೊಂದು ಸಾಕ್ಷಾತ್ ಉದಾಹರಣೆ, ಕಡಿರುದ್ಯಾವರ ಗ್ರಾಮದ ಬೀಟ್ ಪೋಲೀಸ್ ಶ್ರೀ ಶಶಿಕುಮಾರ್.

ಮೂಲತ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದವರಾದ ಶ್ರೀ ಶಶಿಕುಮಾರ್ ಅವರು ಬೆಳ್ತಂಗಡಿ ಆರಕ್ಷಕ ಠಾಣೆಯಲ್ಲಿ ಕರ್ತವ್ಯನಿರ್ವಹಿಸುತಿದ್ದು, ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ಬೀಟ್ ಪೋಲೀಸ್ ಆಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಾರ್ಯನಿರ್ವಹಿಸುತ್ತಿರುವ ಗ್ರಾಮದಲ್ಲಿ ಪ್ರಾಮಾಣಿಕ ಸೇವೆ ನೀಡುತ್ತಾ, ಗ್ರಾಮದ ಜನರ ಪ್ರೀತಿಪಾತ್ರರಾಗಿರುವ ಇವರು ಕೊರೋನ ಮಹಾಮಾರಿಯ ವಿರುಧ್ಧದ ಸಮರದ ನಿಮಿತ್ತದ ಲಾಕ್ಡೌನ್ ನಿಂದ ತತ್ತರಿಸಿದ ಜನರ ಸಂಕಷ್ಟಕ್ಕೆ ಸ್ಪಂಧಿಸಿದ್ದಾರೆ. ಗ್ರಾಮದ ಕಡುಬಡತನದಲ್ಲಿದ್ದ ಮನೆಗಳಿಗೆ ತನ್ನ ವೈಯಕ್ತಿಕ ಸಹಾಯ ಹಸ್ತ ಚಾಚಿದ್ದಾರೆ. ಈ ನಿಟ್ಟಿನಲ್ಲಿ ಸ್ಪಂಧಿಸುತ್ತಿರುವಾಗ ಗ್ರಾಮದಲ್ಲಿ ಈ ರೀತಿಯಾದ ಇನ್ನು ಹಲವಾರು ಕುಟುಂಬಗಳಿವೆಂಬುದನ್ನು ತಿಳಿದು ಶ್ರೀ ಶಶಿಕುಮಾರ್ ಅವರು ಗ್ರಾಮದ ಒಂದಷ್ಟು ದಾನಿಗಳನ್ನು ಸಂಪರ್ಕಿಸಿ, ತೀರಾ ಅಗತ್ಯವಿರುವ ಹದಿನೈದು ಕುಟುಂಬಗಳಿಗೆ ದಿನಸಿ ಸಾಮಾನು ಕಿಟ್ ಗಳನ್ನು ವಿತರಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಸತ್ಕಾರ್ಯದಲ್ಲಿ ಇವರೊಂದಿಗೆ ಶ್ರೀ ಲಿಜೋ ಸ್ಕರಿಯ, ಹೇಡ್ಯ, ಶ್ರೀ ಸುದರ್ಶನ್ ರಾವ್, ಗಜಂತೋಡಿ, ಶ್ರೀಮತಿ ಬೇಬಿ ಸದಾಶಿವ ಗೌಡ ಕುದುರು, ಶ್ರೀ ಹರಿಪ್ರಸಾದ್ ಭಟ್ ಹಿತ್ತಿಲಕೋಡಿ, ಶ್ರೀ ಶಂಕರ್ ಭಟ್ ಬಸವದಡ್ಡು ಹಾಗೂ ಶ್ರೀ ಸೂರಜ್ ಅಡೂರು ಇವರುಗಳು ಸಹಕರಿಸಿದ್ದಾರೆ.

Spread the love
  • Related Posts

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡ ಉದ್ಘಾಟನೆ ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.…

    Spread the love

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಸಿಇಟಿ ಫಲಿತಾಂಶದಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ ಗುರುವಾಯನಕೆರೆ, ಜೂನ್ 7: ಇತ್ತೀಚೆಗೆ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಮ್ಮೆ ಗಮನಾರ್ಹ ಸಾಧನೆ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಮೇಲುಗೈಯನ್ನು…

    Spread the love

    You Missed

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    • By admin
    • June 12, 2026
    • 73 views
    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ,  ಅಖಿಲ್ ಕುಮಾರ್ ವಿಧಿವಶ

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 34 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 51 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 100 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 44 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 195 views