ಬಾಳೆ, ಅನಾನಸು, ಪಪ್ಪಾಯ ಬೆಳೆದ ರೈತರಿಂದ ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ಮಂಗಳೂರು: ಕೋವಿಡ್-19 ಕಾರಣದಿಂದಾಗಿ ದೇಶದಲ್ಲಿ ವಿಧಿಸಿದ ಲಾಕ್‍ಡೌನ್‍ನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಳೆ, ಅನಾನಸು ಹಾಗೂ ಪಪ್ಪಾಯ ಬೆಳೆ ಬೆಳೆದ ರೈತರು ದಿನಾಂಕ 24-03-2020 ರಿಂದ 31-05-2020 ರವರೆಗೆ ಕಟಾವಿಗೆ ಬಂದಿರುವ ಫಸಲುಗಳನ್ನು ಮಾರಾಟ ಮಾಡಲು ಆಗದೆ ಸಂಕಷ್ಟಕ್ಕೀಡಾಗಿರುತ್ತಾರೆ ಅಥವಾ ಮಾರಾಟ ಮಾಡಿದ ಫಸಲಿಗೆ ಸೂಕ್ತ ಬೆಲೆ ಸಿಗದೆ ನಷ್ಟ ಅನುಭವಿಸಿರುತ್ತಾರೆ.

ಈ ಕಾರಣಕ್ಕಾಗಿ ಕರ್ನಾಟಕ ಸರ್ಕಾರವು ಈ ಬೆಳೆಗಳನ್ನು ಬೆಳೆದು ನಷ್ಟ ಅನುಭವಿಸಿದ ರೈತರಿಗೆ ಹೆಕ್ಟೇರಿಗೆ ಗರಿಷ್ಠ ರೂ.15000 ಗಳಂತೆ (ಪ್ರತೀ ಸೆಂಟ್ಸ್‍ಗೆ ರೂ.60 ರಂತೆ) ಗರಿಷ್ಟ ಒಂದು ಹೆಕ್ಟೇರ್‍ವರೆಗೆ ಪರಿಹಾರ ನೀಡುವ ಕಾರ್ಯಕ್ರಮ ಜಾರಿಗೆ ತಂದಿರುತ್ತದೆ.

“ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ 2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರಬೇಕು. ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ದಿನಾಂಕ 24-03-2020 ರಿಂದ 31-05-2020ರಲ್ಲಿ ಕಟಾವು ಮಾಡಿರುವ ರೈತರು ಮಾತ್ರ ಅರ್ಹರು. ಸದರಿ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದಿರುವ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.”

ಈ ಹಿನ್ನೆಲೆಯಲ್ಲಿ ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ಬೆಳೆದು 2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರುವ ಹಾಗೂ ದಿನಾಂಕ 24-03-2020 ರಿಂದ 31-05-2020 ರವರೆಗಿನ ಅವಧಿಯಲ್ಲಿ ಫಸಲು ಕಟಾವು ಆಗಿರುವ, ಮೇಲಿನ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದ ರೈತರು ಮಾತ್ರ ಪರಿಹಾರಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿಗಳನ್ನು ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಅಥವಾ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಸಲ್ಲಿಸಬಹುದು. ತಾಲೂಕು ಹಾಗೂ ಜಿಲ್ಲಾ ಸಮಿತಿಗಳಿಂದ ಅನುಮೋದಿತವಾದ ರೈತರಿಗೆ ಪರಿಹಾರಧನವನ್ನು ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ರೈತರು ಅರ್ಜಿಯೊಂದಿಗೆ ಆಧಾರ್ ಲಿಂಕ್ ಹಾಗೂ NPCI ಸೀಡಿಂಗ್ ಆಗಿರುವ ಬ್ಯಾಂಕ್ ಖಾತೆಯ ವಿವರಗಳನ್ನು ಆಧಾರ್ ಪ್ರತಿಯೊಂದಿಗೆ ಮತ್ತು ನಿಗದಿತ ಸ್ವಯಂ ಘೋಷಣೆ ಪತ್ರವನ್ನು ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 25 ಆಗಿರುತ್ತದೆ.

ಈ ಕೆಳಗಿನ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.
ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ 2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರಬೇಕು. ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ದಿನಾಂಕ 24-03-2020 ರಿಂದ 31-05-2020ರಲ್ಲಿ ಕಟಾವು ಮಾಡಿರುವ ರೈತರು ಮಾತ್ರ ಅರ್ಹರು. ಸದರಿ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದಿರುವ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ:
ತೋಟಗಾರಿಕೆ ಉಪನಿರ್ದೇಶಕರು, ದ.ಕ.ಜಿ.ಪಂ., ಮಂಗಳೂರು – 9448999226 ,
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಮಂಗಳೂರು – 8277806378 (0824-2423615)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬಂಟ್ವಾಳ – 8277806371 (08255-234102)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಪುತ್ತೂರು – 9731854527 (08251-230905)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಸುಳ್ಯ 9880993238 (08257-232020)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬೆಳ್ತಂಗಡಿ – 8277806380 (08256-232148)
ಇವರನ್ನು ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Spread the love
  • Related Posts

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    “ಜೀವ ಉಳಿಸಲು ನಿಮ್ಮ ನೆರವು ಅಗತ್ಯ“ ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ನಿವಾಸಿ ವಸಂತ ಗೌಡರವರು 21/07/2026ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಪಡಂಗಡಿ ಸಮೀಪ ಹಾಲು ಹಿಡಿದು ಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಜಾರಿ ಬಿದ್ದು ತಲೆಗೆ…

    Spread the love

    You Missed

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 4 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 11 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 9 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 9 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 10 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 13 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!