SSLC ಪರೀಕ್ಷೆ ತಯಾರಿ ಬಗ್ಗೆ ಶಾಸಕರ ನೇತೃತ್ವದಲ್ಲಿ ಸಮಾಲೋಚನಾ ಸಭೆ


ಬೆಳ್ತಂಗಡಿ : ಲಾಕ್ ಡೌನ್ ನಿಂದ ಮುಂದೂಡಲ್ಪಟ್ಟಿದ್ದ 10 ನೇ ತರಗತಿಯ ಪರೀಕ್ಷೆಯು ಇದೇ ಬರುವ ಜೂ 25 ರಿಂದ ಜುಲೈ 4 ರ ವರೆಗೆ ಸರ್ಕಾರದ ವಿವಿಧ ಮಾರ್ಗಸೂಚಿಯಂತೆ ನಡೆಯಲಿದ್ದು ತಾಲೂಕಿನಲ್ಲಿ ನಡೆಯಲಿರುವ ಪರೀಕ್ಷೆಗಳ ತಯಾರಿ ಬಗ್ಗೆ ಶಾಸಕರ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳ ಸಭೆ ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆಯಿತು ಈ ಸಂದರ್ಭದಲ್ಲಿ ತಾಲೂಕಿನ ವಿವಿಧೆಡೆ 13 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು ಎಲ್ಲಾ ಪರೀಕ್ಷಾ ಕೇಂದ್ರಗಳ ಸುರಕ್ಷತೆಯ ಬಗ್ಗೆ ಕ್ರಮ ಜರುಗಿಸಬೇಕು ಪ್ರತೀ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡುವುದು,ಮಕ್ಕಳು ಪರೀಕ್ಷಾ ಕೊಠಡಿಯೊಳಗೆ ಪ್ರವೇಶ ಮಾಡುವ ಮೊದಲು ಸ್ಯಾನಿಟೈಸರ್ ಥರ್ಮಲ್ ಟೆಸ್ಟ್ ಅದಲ್ಲದೆ ಜ್ವರ ಶೀತ ಇರುವಂತಹ ಮಕ್ಕಳಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿ ಸಾಮಾಜಿಕ ಅಂತರದಲ್ಲಿ 20 ಮಕ್ಕಳನ್ನು ಕುಳಿತು ಕೊಳ್ಳಿಸಿ ಪರೀಕ್ಷೆ ಬರೆಸುವ ಬಗ್ಗೆ ಚರ್ಚಿಸಲಾಯಿತು ಪ್ರತೀ ವಿದ್ಯಾರ್ಥಿಗಳಿಗೆ ತಲಾ 3 ಸೆಟ್ ಮರುಬಳಕೆ ಮಾಡಬಹುದಾದ ಮಾಸ್ಕ್ ನೀಡುವುದು,ಅದಲ್ಲದೆ ಹೆಚ್ಚುವರಿಯಾಗಿ ಪ್ರತೀ ಕೇಂದ್ರಗಳಿಗೆ 100 ಮಾಸ್ಕ್ ವ್ಯವಸ್ಥೆ, ಪ್ರತೀ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾರ್ಥಿಗಳನ್ನು ಕರೆದುಕೊಂಡು ಬರಲು ಉಚಿತವಾಗಿ ಬಸ್ಸಿನ ವ್ಯವಸ್ಥೆ, ತುರ್ತು ಆರೋಗ್ಯ ಸೇವೆಗಾಗಿ ಒಂದು ಅಂಬುಲೆನ್ಸ್ ಸಿದ್ದಪಡಿಸಿ ಇಟ್ಟುಕೊಳ್ಳುವ ಬಗ್ಗೆಯೂ ಚರ್ಚಿಸಲಾಯಿತು ಪ್ರತೀ ಕೇಂದ್ರಗಳಲ್ಲಿ ಮಕ್ಕಳಿಗೆ ಸಾಮಾಜಿಕ ಅಂತರದಲ್ಲಿ ಥರ್ಮಲ್ ಟೆಸ್ಟ್ ಮಾಡಿಸುವುದಕ್ಕಾಗಿ ಶಾಮಿಯಾನ ಅದಲ್ಲದೆ , ಶೌಚಾಲಯದ ವ್ಯವಸ್ಥೆ ಎಲ್ಲ ರೀತಿಯಲ್ಲೂ ಮಕ್ಕಳಿಗೆ ಗೊಂದಲ ಆಗದ ರೀತಿಯಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಚರ್ಚಿಸಲಾಯಿತು.ತಾಲೂಕಿನಲ್ಲಿ ನಡೆಯುವ ಹತ್ತನೇ ತರಗತಿಯ ಪರೀಕ್ಷೆಯು ಯಾವುದೇ ಗೊಂದಲ ಇಲ್ಲದೆ ನಡೆಯಬೇಕು ಅದ್ದರಿಂದ ಎಲ್ಲಾ ಇಲಾಖೆಯ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕರ್ತವ್ಯವನ್ನು ನಿರ್ವಹಿಸಬೇಕು .ಅದಲ್ಲದೆ ಮಕ್ಕಳಿಗೆ ಮಾನಸಿಕವಾಗಿ ತಯಾರಾಗಲು ಶಿಕ್ಷಕರ ಪಾತ್ರ ಕೂಡ ಅತೀ ಮುಖ್ಯ ,ಎಲ್ಲ ರೀತಿಯಲ್ಲೂ ನನ್ನ ಸಹಕಾರ ಬೆಂಬಲ ನಿಮ್ಮೊಂದಿಗೆ ಇದೆ ಎಂದು ಇಲಾಖಾಧಿಕಾರಿಗಳನ್ನು ಉದ್ದೇಶಿಸಿ ಶಾಸಕ ಹರೀಶ್ ಪೂಂಜ ನುಡಿದರು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 283 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 297 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 198 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ