ಅಡಿಕೆ ಖರೀದಿಸಿ ಹಣ ನೀಡದೆ ಪಂಗನಾಮ! ಅಡಿಕೆ ಖರೀದಿಸಿದ ವ್ಯಾಪಾರಿ ನಿಗೂಢ ನಾಪತ್ತೆ! ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಅಡಿಕೆ ವ್ಯಾಪಾರಿಯೊಬ್ಬರು ಅಡಿಕೆ ಬೆಳೆಗಾರರಿಂದ ಅಡಿಕೆ ಖರೀದಿಸಿ ಹಣ ನೀಡದೇ ವಂಚನೆ ಮಾಡಿರುವ ಘಟನೆ ಬಂದಾರು ಗ್ರಾಮದ ಪಾಣೆಕಲ್ಲು ಎಂಬಲ್ಲಿ ನಡೆದಿದೆ.

ತಾಲೂಕಿನ ಬಂದಾರು ಗ್ರಾಮದ ಪಾಣೆಕಲ್ಲು ಬಟ್ಲಡ್ಕ ಎಂಟರ್‌ ಪ್ರೈಸಸ್ಸ್‌ನ ಅಡಿಕೆ ವ್ಯಾಪಾರಸ್ಥ ಬಿ ಎಮ್‌ ರಫೀಕ್‌ ರವರೊಂದಿಗೆ ದೂರುದಾರ ಡಾಕಯ್ಯ ಗೌಡ ಕೊಯ್ಯೂರು ಇವರು ಸುಮಾರು 3 ವರ್ಷಗಳಿಂದ ಅಡಿಕೆ ನೀಡುತ್ತಾ ವ್ಯವಹಾರವನ್ನು ಮಾಡುತ್ತಾ ಬಂದಿರುತ್ತಾರೆ.

ಅಡಿಕೆಗೆ ಮಾರುಕಟ್ಟೆ ಧಾರಣೆಗೆ ಅನುಗುಣವಾಗಿ ದರ ನಿಗದಿಮಾಡುತ್ತಿದ್ದು ಅಗತ್ಯ ಬಂದಾಗ ಆತನಿಂದ ಹಣ ಪಡೆದುಕೊಳ್ಳುತ್ತಿದ್ದರು . 07-05-2020 ರಂದು ಐದು ಲಕ್ಷದ ಇಪ್ಪತ್ತೈದುಸಾವಿರದ ಐನೂರಾ ಎಂಬತ್ತೆಂಟು ರೂಪಾಯಿ ಮೊತ್ತದ ಅಡಿಕೆಯನ್ನು ಬಿ ಎಮ್‌ ರಫೀಕ್‌ ರವರಿಗೆ ಕೊಟ್ಟಿದ್ದು ಆ ಸಮಯ ಎರಡು ಲಕ್ಷದ ಇಪ್ಪತ್ತು ಸಾವಿರ ರೂಪಾಯಿಯನ್ನು ನೀಡಿದ್ದು ಉಳಿದ ಮೂರು ಲಕ್ಷದ ಐದು ಸಾವಿರದ ಐನೂರಾ ಎಂಬತ್ತೆಂಟು ರೂಪಾಯಿಯನ್ನು (3,05,588/-) ಒಂದು ವಾರ ಬಿಟ್ಟು ನೀಡುತ್ತೇನೆಂದು ತಿಳಿಸಿದ್ದು ಅದರಂತೆ ಮೇಲಿನ ವಿಶ್ವಾಸದಿಂದ ಒಪ್ಪಿಕೊಂಡು ಒಂದು ವಾರ ಬಿಟ್ಟು ಹೋದಾಗ ಮತ್ತೆ 10 ದಿನಗಳ ಕಾಲಾವಕಾಶ ಕೇಳಿದ್ದು ಅದರಂತೆ 26-05-2020 ರಂದು ಆತನ ಅಂಗಡಿಗೆ ಹೋದಾಗ ಆತನ ಅಂಗಡಿ ಮುಚ್ಚಿದ್ದು ಆತನಿಗೆ ದೂರವಾಣಿ ಕರೆಮಾಡಿದಾಗ ಕರೆ ಸ್ವೀಕರಿಸದೇ ಇದ್ದುದ್ದರಿಂದ ಆತನ ಮಗನಾದ ರಮೀಜಾ ನಲ್ಲಿ ವಿಚಾರಿಸಿದಾಗ ಆತನು ಕೂಡಾ ಆತನ ತಂದೆ ಎಲ್ಲಿರುತ್ತಾರೆ ಎಂದು ತಿಳಿಸಿದೇ ತಂದೆಯ ಮೋಸಕ್ಕೆ ಸಹಕರಿಸಿರುತ್ತಾನೆ ಎಂಬುದು ತಿಳಿದು ಬಂದಿದೆ.

ತಾಲೂಕಿನ ಬಂದಾರು, ಮೊಗ್ರು, ಕೊಯ್ಯೂರು, ಬೆಳಾಲು ಗ್ರಾಮದ 100ಕ್ಕೂ ಆಧಿಕ ಗ್ರಾಹಕರ ಮನವೊಲಿಸಿ ವಿಶ್ವಾಸದ ನೆಲೆಯಲ್ಲಿ ಮುಂಗಡ ಅಡಕೆ ಖರೀದಿಸಿ ಸುಮಾರು 1.5 ಕೋಟಿ ರೂಪಾಯಿಗಳನ್ನು ಕೊಡಲು ಬಾಕಿ ಇಟ್ಟುಕೊಂಡಿದ್ದ ಅಡಿಕೆ ವ್ಯಾಪಾರಿ ರಫೀಕ್ ಅವರು ಇದೀಗ ಒಂದು ವಾರದಿಂದ ನಾಪತ್ತೆಯಾಗಿದ್ದು ಗ್ರಾಹಕರ ಆತಂಕಕ್ಕೆ ಕಾರಣವಾಗಿದೆ.

ಈ ಬಗ್ಗೆ ಊರಿನಲ್ಲಿ ವಿಚಾರಿಸಿದಾಗ ರಮಾನಂದ ಭಟ್‌, ಗೋವಿಂದ, ದಿನೇಶ್‌ ಕಿಣಾಜೆ, ನಾರಾಯಣ ಮೈಂದಕೋಡಿ, ಪೂವಪ್ಪ ಗೌಡ ಉಮಿಯಾ, ಲಿಂಗಪ್ಪ ಗೌಡ ಕಜೆ, ನಾಣ್ಯಪ್ಪ ಗೌಡ ಡೆಂಬುಗ, ಲಿಂಗಪ್ಪ ಗೌಡ ಉಮಿಯಾ, ಕುಶಾಲಪ್ಪ ಗೌಡ ಬಂದಾರು,ಧನಂಜಯ ಉಗ್ರೋಡಿ ಹಾಗೂ ಇನ್ನು ಕೆಲವರಿಂದ ಕೂಡಾ ಅಡಿಕೆ ಖರೀದಿಸಿ ಹಣ ನೀಡದೇ ಮೋಸ ಮಾಡಿರುತ್ತಾರೆ ಎಂಬುದಾಗಿ ತಿಳಿದುಬಂದಿದೆ.

ಈ ಬಗ್ಗೆ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಡಾಕಯ್ಯ ಗೌಡ ಕೊಯ್ಯೂರುರವರು ನೀಡಿದ ದೂರಿನ ಅನ್ವಯ ಅಡಿಕೆ ವ್ಯಾಪಾರಿ ಬಿ.ಎಮ್‌ ರಫೀಕ್‌ ಹಾಗೂ ಆತನ ಮಗನಾದ ರಮೀಜಾ ವಿರುದ್ಧ ಪ್ರಕರಣ ದಾಖಲಾಗಿದ್ದು ಆರೋಪಿಯ ಪತ್ತೆಗಾಗಿ ಪೋಲೀಸರು ಬಲೆ ಬೀಸಿದ್ದಾರೆ.

Spread the love
  • Related Posts

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ ಅಗ್ನಿ ಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ಅಗತ್ಯ ಅನುಮತಿ ದೊರೆತಿರುವ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ. ಇತ್ತೀಚೆಗೆ ಶಾಲೆಯ ಅನುಮತಿ ಕುರಿತಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಲು ಸಂಸ್ಥೆಯ ಆಡಳಿತ ಮಂಡಳಿ…

    Spread the love

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    ಮರೋಡಿ : ಮಾ 07 ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ರೂ. 17.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಮಾ 07 ರಂದು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿಮಾಜಿ…

    Spread the love

    You Missed

    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    • By admin
    • March 8, 2026
    • 18 views
    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    • By admin
    • March 7, 2026
    • 44 views
    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    • By admin
    • March 7, 2026
    • 77 views
    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ  ಶಿಲಾನ್ಯಾಸ

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 32 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 21 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 44 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ