ಅಡಿಕೆ ಖರೀದಿಸಿ ಹಣ ನೀಡದೆ ಪಂಗನಾಮ! ಅಡಿಕೆ ಖರೀದಿಸಿದ ವ್ಯಾಪಾರಿ ನಿಗೂಢ ನಾಪತ್ತೆ! ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಅಡಿಕೆ ವ್ಯಾಪಾರಿಯೊಬ್ಬರು ಅಡಿಕೆ ಬೆಳೆಗಾರರಿಂದ ಅಡಿಕೆ ಖರೀದಿಸಿ ಹಣ ನೀಡದೇ ವಂಚನೆ ಮಾಡಿರುವ ಘಟನೆ ಬಂದಾರು ಗ್ರಾಮದ ಪಾಣೆಕಲ್ಲು ಎಂಬಲ್ಲಿ ನಡೆದಿದೆ.

ತಾಲೂಕಿನ ಬಂದಾರು ಗ್ರಾಮದ ಪಾಣೆಕಲ್ಲು ಬಟ್ಲಡ್ಕ ಎಂಟರ್‌ ಪ್ರೈಸಸ್ಸ್‌ನ ಅಡಿಕೆ ವ್ಯಾಪಾರಸ್ಥ ಬಿ ಎಮ್‌ ರಫೀಕ್‌ ರವರೊಂದಿಗೆ ದೂರುದಾರ ಡಾಕಯ್ಯ ಗೌಡ ಕೊಯ್ಯೂರು ಇವರು ಸುಮಾರು 3 ವರ್ಷಗಳಿಂದ ಅಡಿಕೆ ನೀಡುತ್ತಾ ವ್ಯವಹಾರವನ್ನು ಮಾಡುತ್ತಾ ಬಂದಿರುತ್ತಾರೆ.

ಅಡಿಕೆಗೆ ಮಾರುಕಟ್ಟೆ ಧಾರಣೆಗೆ ಅನುಗುಣವಾಗಿ ದರ ನಿಗದಿಮಾಡುತ್ತಿದ್ದು ಅಗತ್ಯ ಬಂದಾಗ ಆತನಿಂದ ಹಣ ಪಡೆದುಕೊಳ್ಳುತ್ತಿದ್ದರು . 07-05-2020 ರಂದು ಐದು ಲಕ್ಷದ ಇಪ್ಪತ್ತೈದುಸಾವಿರದ ಐನೂರಾ ಎಂಬತ್ತೆಂಟು ರೂಪಾಯಿ ಮೊತ್ತದ ಅಡಿಕೆಯನ್ನು ಬಿ ಎಮ್‌ ರಫೀಕ್‌ ರವರಿಗೆ ಕೊಟ್ಟಿದ್ದು ಆ ಸಮಯ ಎರಡು ಲಕ್ಷದ ಇಪ್ಪತ್ತು ಸಾವಿರ ರೂಪಾಯಿಯನ್ನು ನೀಡಿದ್ದು ಉಳಿದ ಮೂರು ಲಕ್ಷದ ಐದು ಸಾವಿರದ ಐನೂರಾ ಎಂಬತ್ತೆಂಟು ರೂಪಾಯಿಯನ್ನು (3,05,588/-) ಒಂದು ವಾರ ಬಿಟ್ಟು ನೀಡುತ್ತೇನೆಂದು ತಿಳಿಸಿದ್ದು ಅದರಂತೆ ಮೇಲಿನ ವಿಶ್ವಾಸದಿಂದ ಒಪ್ಪಿಕೊಂಡು ಒಂದು ವಾರ ಬಿಟ್ಟು ಹೋದಾಗ ಮತ್ತೆ 10 ದಿನಗಳ ಕಾಲಾವಕಾಶ ಕೇಳಿದ್ದು ಅದರಂತೆ 26-05-2020 ರಂದು ಆತನ ಅಂಗಡಿಗೆ ಹೋದಾಗ ಆತನ ಅಂಗಡಿ ಮುಚ್ಚಿದ್ದು ಆತನಿಗೆ ದೂರವಾಣಿ ಕರೆಮಾಡಿದಾಗ ಕರೆ ಸ್ವೀಕರಿಸದೇ ಇದ್ದುದ್ದರಿಂದ ಆತನ ಮಗನಾದ ರಮೀಜಾ ನಲ್ಲಿ ವಿಚಾರಿಸಿದಾಗ ಆತನು ಕೂಡಾ ಆತನ ತಂದೆ ಎಲ್ಲಿರುತ್ತಾರೆ ಎಂದು ತಿಳಿಸಿದೇ ತಂದೆಯ ಮೋಸಕ್ಕೆ ಸಹಕರಿಸಿರುತ್ತಾನೆ ಎಂಬುದು ತಿಳಿದು ಬಂದಿದೆ.

ತಾಲೂಕಿನ ಬಂದಾರು, ಮೊಗ್ರು, ಕೊಯ್ಯೂರು, ಬೆಳಾಲು ಗ್ರಾಮದ 100ಕ್ಕೂ ಆಧಿಕ ಗ್ರಾಹಕರ ಮನವೊಲಿಸಿ ವಿಶ್ವಾಸದ ನೆಲೆಯಲ್ಲಿ ಮುಂಗಡ ಅಡಕೆ ಖರೀದಿಸಿ ಸುಮಾರು 1.5 ಕೋಟಿ ರೂಪಾಯಿಗಳನ್ನು ಕೊಡಲು ಬಾಕಿ ಇಟ್ಟುಕೊಂಡಿದ್ದ ಅಡಿಕೆ ವ್ಯಾಪಾರಿ ರಫೀಕ್ ಅವರು ಇದೀಗ ಒಂದು ವಾರದಿಂದ ನಾಪತ್ತೆಯಾಗಿದ್ದು ಗ್ರಾಹಕರ ಆತಂಕಕ್ಕೆ ಕಾರಣವಾಗಿದೆ.

ಈ ಬಗ್ಗೆ ಊರಿನಲ್ಲಿ ವಿಚಾರಿಸಿದಾಗ ರಮಾನಂದ ಭಟ್‌, ಗೋವಿಂದ, ದಿನೇಶ್‌ ಕಿಣಾಜೆ, ನಾರಾಯಣ ಮೈಂದಕೋಡಿ, ಪೂವಪ್ಪ ಗೌಡ ಉಮಿಯಾ, ಲಿಂಗಪ್ಪ ಗೌಡ ಕಜೆ, ನಾಣ್ಯಪ್ಪ ಗೌಡ ಡೆಂಬುಗ, ಲಿಂಗಪ್ಪ ಗೌಡ ಉಮಿಯಾ, ಕುಶಾಲಪ್ಪ ಗೌಡ ಬಂದಾರು,ಧನಂಜಯ ಉಗ್ರೋಡಿ ಹಾಗೂ ಇನ್ನು ಕೆಲವರಿಂದ ಕೂಡಾ ಅಡಿಕೆ ಖರೀದಿಸಿ ಹಣ ನೀಡದೇ ಮೋಸ ಮಾಡಿರುತ್ತಾರೆ ಎಂಬುದಾಗಿ ತಿಳಿದುಬಂದಿದೆ.

ಈ ಬಗ್ಗೆ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಡಾಕಯ್ಯ ಗೌಡ ಕೊಯ್ಯೂರುರವರು ನೀಡಿದ ದೂರಿನ ಅನ್ವಯ ಅಡಿಕೆ ವ್ಯಾಪಾರಿ ಬಿ.ಎಮ್‌ ರಫೀಕ್‌ ಹಾಗೂ ಆತನ ಮಗನಾದ ರಮೀಜಾ ವಿರುದ್ಧ ಪ್ರಕರಣ ದಾಖಲಾಗಿದ್ದು ಆರೋಪಿಯ ಪತ್ತೆಗಾಗಿ ಪೋಲೀಸರು ಬಲೆ ಬೀಸಿದ್ದಾರೆ.

Spread the love
  • Related Posts

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ಬೆಳ್ತಂಗಡಿ : ಗ್ರಾಹಕರಿಗೆ ಸರಿಯಾದ ಸಮಯಕ್ಕೆ ಗ್ಯಾಸ್ ಸರಬರಾಜು ಮಾಡದೆ ಕಚೇರಿಗೆ ಹೋದಾಗ ಪ್ರತಿನಿತ್ಯ ಗಲಾಟೆ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಆಹಾರ ಇಲಾಖೆಗೆ ಬಂದ ದೂರಿನ ಆಧಾರದಲ್ಲಿ ಕೊನೆಯ ಎಚ್ಚರಿಕೆಯ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ…

    Spread the love

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟಗೊಳ್ಳಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು: ದಿನಾಂಕ…

    Spread the love

    You Missed

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 10 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 17 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 39 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 25 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 58 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ