ಪ್ರತಿಷ್ಠಿತ ಮೂವರ ಹೆಸರು ಕೈಬಿಟ್ಟು ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೆಟ್ ನೀಡಿದ ಹೈಕಮಾಂಡ್!

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ರಾಜ್ಯ ಕೋರ್ ಕಮಿಟಿ ಕಳುಹಿಸಿದ್ದ ಹೆಸರುಗಳನ್ನು ತಿರಸ್ಕರಿಸಿ ಇಬ್ಬರು ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.

ರಾಜ್ಯಸಭಾ ಚುನಾವಣೆಗೆ ಬಿಜೆಪಿ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯವರಿಗೆ ಟಿಕೆಟ್ ನೀಡಿದೆ. ಈ ಮೂಲಕ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಪ್ರದೇಶಗಳಿಗೆ ಆದ್ಯತೆ ನೀಡಿದೆ.

ರಾಜ್ಯಸಭಾ ಚುನಾವಣೆ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಭಾರಿ ಪೈಪೋಟಿ ಕಂಡುಬಂದಿತ್ತು. ಸಹೋದರ ರಮೇಶ್ ಕತ್ತಿಯವರಿಗೆ ಟಿಕೆಟ್ ನೀಡಬೇಕೆಂದು ಶಾಸಕ ಉಮೇಶ್ ಕತ್ತಿಯವರು ಪಕ್ಷದ ನಾಯಕರ ಮೇಲೆ ಒತ್ತಡ ಹಾಕಿದ್ದರು. ಹಾಲಿ ರಾಜ್ಯಸಭಾ ಸಂಸದ ಪ್ರಭಾಕರ ಕೋರೆಯವರು ಕೂಡಾ ಪುನಾರಯ್ಕೆ ಬಯಸಿ ಟಿಕೆಟ್ ಆಕಾಂಕ್ಷೆ ಹೊಂದಿದ್ದರು.

ಕರಾವಳಿ ಕರ್ನಾಟಕದ ಹೋಟೆಲ್ ಉದ್ಯಮಿ ಕೆ ಪ್ರಕಾಶ್ ಶೆಟ್ಟಿಯವರ ಹೆಸರು ಕೂಡಾ ಕೊನೆಯ ಕ್ಷಣದಲ್ಲಿ ಕೇಳಿ ಬಂದಿತ್ತು. ಇವರೊಂದಿಗೆ ನಿರ್ಮಲ್ ಕುಮಾರ್ ಸುರಾನ ಹಾಗೂ ಡಾ.ಎಂ. ನಾಗರಾಜ್ ಹೆಸರನ್ನು ರಾಜ್ಯ ಬಿಜೆಪಿ ಶಿಫಾರಸು ಮಾಡಲಾಗಿತ್ತು.

ಈರಣ್ಣ ಕಡಾಡಿ ಬೆಳಗಾವಿ ಜಿಲ್ಲೆಯ ಗೋಕಾಕ್‌ ಮೂಲದವರು.. ಈ ಹಿಂದೆ ಬಿಜೆಪಿ ಬೆಳಗಾವಿ ಗ್ರಾಮೀಣ ಬಿಜೆಪಿ ಅಧ್ಯಕ್ಷ, ಬೆಳಗಾವಿ ಜಿಪಂ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ರಾಯಚೂರು ಜಿಲ್ಲೆಯ ಅಶೋಕ್ ಗಸ್ತಿ ಬಿಜೆಪಿ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿದ್ದ ಇವರು, ಸದ್ಯ ಬಳ್ಳಾರಿ ವಿಭಾಗದ ಪ್ರಭಾರಿಯಾಗಿದ್ದಾರೆ.

ಸದ್ಯ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಬಿಜೆಪಿಯಿಂದ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯವರು, ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆಯವರು, ಜೆಡಿಎಸ್ ನಿಂದ ಕಾಂಗ್ರೆಸ್ ಬೆಂಬಲದೊಂದಿಗೆ ಎಚ್ ಡಿ ದೇವೇಗೌಡ ಅವರು ಕಣದಲ್ಲಿದ್ದಾರೆ. ಜೂನ್ 19ರಂದು ಚುನಾವಣೆ ನಡೆಯಲಿದ್ದು, ಇವರೆಲ್ಲರ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 2 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 5 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 9 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ