“ಆದಾಯಕ್ಕಿಂತ ಹೆಚ್ಚಿನ ಆಸ್ತಿ” ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಜಾ!

ಮಂಗಳೂರು: ಬಂಟ್ವಾಳ ತಾಲೂಕು ಸಹಾಯಕ ಕೃಷಿ ನಿರ್ದೇಶಕರಾಗಿದ್ದ ಜೋಸೆಫ್ ಡೇನಿಸ್ ಮಿರಾಂಡ ರವರು ತಮ್ಮ ಸೇವಾ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತಲೂ ಮೀರಿ ಹೆಚ್ಛಿನ ಆಸ್ತಿಗಳನ್ನು ಹೊಂದಿದ್ದಾರೆಂದು ದಿನಾಂಕ 12-12-2017 ರಂದು ಆಗಿನ ಭ್ರಷ್ಟಾಚಾರ ನಿಗ್ರಹದಳದ ಡಿ. ವೈ.ಎಸ್.ಪಿ. ಸುಧೀರ್ ಹೆಗ್ಡೆ ಮತ್ತು ಇನ್ಸ್ಪೆಕ್ಟರ್ ಯೋಗೀಶ್ ಕುಮಾರ್ ತಂಡ ಕೇಸು ದಾಖಲಿಸಿ ದಾಳಿ ನಡೆಸಿ ಹಲವು ಸ್ವತ್ತುಗಳನ್ನು ವಶ ಪಡಿಸಿಕೊಂಡಿದ್ದರು. ಸುಮಾರು ಒಂದು ಕೋಟಿ ಏಳು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು.

ಬಂಧನದ ಭೀತಿಯಿಂದ ಆರೋಪಿ ಯು ಮಾನ್ಯ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಭ್ರಷ್ಟಾಚಾರ ವಿರೋಧಿ ಖಾಯಿದೆಯ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯ ದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಸದ್ರಿ ಅರ್ಜಿಯನ್ನು ಮಂಗಳೂರಿನ ಮೂರನೇ ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ರವರು ವಜಾಗೊಳಿಸಿ ದಿನಾಂಕ 09-06-2020 ರಂದು ಆದೇಶಿಸಿದರು.
ಭ್ರಷ್ಟಾಚಾರ ನಿಗ್ರಹದಳದ ಪರ ವಕೀಲರಾದ ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್.ಎನ್. ರಾಜೇಶ್ ಆರೋಪಿಯ ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರಾದ ಬಿ. ಬಿ. ಜಕಾತಿ ರವರು ಆರೋಪಿ ಜೋಸೆಫ್ ಡೇನಿಸ್ ಮಿರಾಂಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.

ಈ ಮೊದಲು ಮಾನ್ಯ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಭ್ರಷ್ಟಾಚಾರ ಕಾಯಿದೆಯ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾದೀಶರಾಗಿದ್ದ ಶ್ರೀ ಬಿ. ಮುರಳೀಧರ ಪೈ ಯವರು ವರ್ಗಾವಣೆಗೊಂಡ ಬಳಿಕ ಶ್ರೀ. ಬಿ.ಬಿ. ಜಕಾತಿ ಯವರು ಬೆಂಗಳೂರಿನಿಂದ ವರ್ಗಾವಣೆ ಗೊಂಡು ಬಂದಿದ್ದು ದಿನಾಂಕ 01-06-2020 ರಂದು ಅಧಿಕಾರ ವಹಿಸಿಕೊಂಡಿರುತ್ತಾರೆ.

ದೊಡ್ಡ ಮೊತ್ತದ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ ಬಗ್ಗೆ ಆರೋಪವಿದ್ದು ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಅಗತ್ಯವಿದ್ದಲ್ಲಿ ಬಂಧಿಸಬೇಕಾಗುವ ಸನ್ನಿವೇಶವನ್ನು ತಳ್ಳಿ ಹಾಕುವಂತಿಲ್ಲ ಎಂದು ಅಭಿಪ್ರಾಯ ಪಟ್ಟ ನ್ಯಾಯಧೀಶ ಬಿ.ಬಿ. ಜಕಾತಿ ಯವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.

ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳದ ಪರ ವಿಶೇಷ ಸರಕಾರಿ ಅಭಿಯೋಜಕ ಮತ್ತು ನ್ಯಾಯವಾದಿ ಕೆ. ಎಸ್. ಎನ್. ರಾಜೇಶ್ ವಾದಿಸಿದ್ದರು.

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 90 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 35 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 133 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 76 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 47 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 84 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ