ಕೊರೋನಾ ವಿರುದ್ಧ ಜಾಗೃತಿ ಸಂದೇಶ ಮೂಡಿಸಲು ಮುಂದಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಶಿಡ್ಲಘಟ್ಟದಲ್ಲಿ ಕೋವಿಡ್-19 ಮಾಹಿತಿ ಪತ್ರ ಬಿಡುಗಡೆ

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೋವಿಡ್-19 ಮಾಹಿತಿ ಪತ್ರ ಬಿಡುಗಡೆಯನ್ನು ಶಿಡ್ಲಘಟ್ಟ ಯೋಜನಾ ಕಛೇರಿಯಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್ ರವರು ಉದ್ಘಾಟಿಸಿ ಮಾತನಾಡುತ್ತಾ ವಿಶ್ವಾದ್ಯಂತ ಕೊರೋನ ಮಹಾಮಾರಿಯು ತನ್ನ ಅಟ್ಟಹಾಸವನ್ನು ತೋರುತ್ತಿದ್ದು ನಮ್ಮ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತ ಪ್ರಕರಣಗಳು ಬೆಳಕಿಗೆ ಬಂದಿದೆ ಆದರೆ ನಮ್ಮ ದೇಶದಲ್ಲಿ ಸಾವಿನ ಸಂಖ್ಯೆ ಕಡಿಮೆಯಿದ್ದು ಇದಕ್ಕೆ ನಮ್ಮ ದೇಶದ ಆಹಾರ ಪದ್ಧತಿ ಮೂಲ ಕಾರಣವಾಗಿದೆ ರೋಗರುಜಿನಗಳನ್ನು ತಡೆಯುವ ಶಕ್ತಿ ನಮ್ಮ ಆರೋಗ್ಯದಲ್ಲಿ ಇದ್ದಷ್ಟು ದಿನ ನಮಗೆ ಯಾವುದೇ ತೊಂದರೆಗಳು ಆಗೋದಿಲ್ಲ ಪೌಷ್ಠಿಕ ಆಹಾರಗಳ ಸೇವನೆಯ ಜೊತೆಗೆ ರೋಗನಿರೋಧಕ ಶಕ್ತಿಗಳನ್ನು ಹೆಚ್ಚಿಸುವ ಆಹಾರಗಳ ಸೇವನೆಯ ಅವಶ್ಯಕತೆಯಿದೆ ಕೊರೋನಾದ ಬಗ್ಗೆ ಭಯ ಬೇಡ ಆದರೆ ಜಾಗೃತಿ ಇರಲಿ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಾಡುತ್ತಾ ಬರುತ್ತಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ತ್ಯಾಗರಾಜ ರವರು ಕೋವಿಡ್ 19 ಮಾಹಿತಿ ಪತ್ರವನ್ನು ಬಿಡುಗಡೆ ಮಾಡಿದರು.

ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ರವರು ಮಾತನಾಡುತ್ತಾ ಕೊರೋನಾ ವೈರಸ್ ರೋಗಾಣುಗಳು ಮನುಷ್ಯರಲ್ಲಿ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಇದನ್ನು ತಡೆಗಟ್ಟುವಿಕೆ ಅಥವಾ ಚಿಕಿತ್ಸೆಗಾಗಿ ಅನುಮೋದಿಸಲಾದ ಯಾವುದೇ ಲಸಿಕೆಗಳು ಅಥವಾ ಆಂಟಿವೈರಲ್ ಔಷಧಿಗಳಿಲ್ಲ. ಇದಕ್ಕಾಗಿ ನಾವು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ ಸಾಮಾಜಿಕ ಅಂತರಗಳನ್ನು ಕಾಪಾಡುವುದರ ಜೊತೆಗೆ ಮಾಸ್ಕ್, ಸ್ಯಾನಿಟೈಸರ್ ಬಳಕೆಯನ್ನು ಮಾಡಬೇಕಾಗುತ್ತದೆ ಮಕ್ಕಳು ಹಾಗೂ ಹಿರಿಯ ವಯಸ್ಕರು ಮನೆಯಲ್ಲೇ ಇದ್ದು ಅವಶ್ಯಕತೆಗನುಗುಣವಾಗಿ ಮಾತ್ರ ಹೊರಗಡೆ ಓಡಾಟ ಮಾಡಿದಲ್ಲಿ ಇಂತಹ ಸಾಂಕ್ರಾಮಿಕ ರೋಗವನ್ನು ನಿರ್ಣಾಮ ಮಾಡಬಹುದು ಇದರ ಜಾಗೃತಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು 10 ಲಕ್ಷಕ್ಕೂ ಅಧಿಕ ಕರಪತ್ರಗಳನ್ನು ಮುದ್ರಿಸಿ ಜಾಗೃತಿ ಮೂಡಿಸುತ್ತಿದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಯೋಜನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 11 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ