ಆಧಾರ್​-ಪ್ಯಾನ್​ ಲಿಂಕ್​ಗೆ ಡೆಡ್​ಲೈನ್ ಬಂತು​: ತಪ್ಪಿದ್ರೆ ಕಾರ್ಡ್​ ನಿಷ್ಕ್ರಿಯ… 58 ಸೆಕೆಂಡ್​ನಲ್ಲಿ ಹೀಗೆ ಲಿಂಕ್​ ಮಾಡಿ

ನವದೆಹಲಿ: ಆಧಾರ್ ಮತ್ತು ಪಾನ್‌ಕಾರ್ಡ್ ಸಂಖ್ಯೆ ಜೋಡಣೆಗೆ ಕಾಲಮಿತಿಯನ್ನು ಆದಾಯ ತೆರಿಗೆ ಇಲಾಖೆಯು 2020ರ ಜೂನ್​ 30ಕ್ಕೆ ನಿಗದಿಪಡಿಸಿದೆ.

ಜನರ ಸುರಕ್ಷತೆಯನ್ನು ಕೇಂದ್ರ ಸರ್ಕಾರ ಗಮನದಲ್ಲಿ ಇರಿಸಿಕೊಂಡು ಪಾನ್​- ಆಧಾರ್ ಜೋಡಣೆಗೆ ಕೋರಿಕೊಂಡು ಬರುತ್ತಿದೆ. ಲಾಕ್​ಡೌನ್​ ಹಾಗೂ ಇತರೆ ಕಾರಣಗಳಿಂದ ಇದುವರೆಗೂ 10 ಅಂತಿಮ ಗಡುವು ಮುಂದೂಡಲಾಗಿದೆ. ಬಹುತೇಕ ಕಾರ್ಡ್​ದಾರರು ಜೋಡಣೆಗೆ ಹಿಂದೇಟು ಹಾಕುತ್ತಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಐಟಿ ಇಲಾಖೆ, ಜೋಡಣೆಯನ್ನು ಕಡೆಗಣಿಸಿದವರಿಗೆ 10,000 ರೂ.ವರೆಗೂ ದಂಡ ಹಾಕುವುದಾಗಿ ಈ ಹಿಂದೆ ಆದಾಯ ತೆರಿಗೆ ಇಲಾಖೆ ಎಚ್ಚರಿಸಿತ್ತು.

ನಿಗದಿತ ಅವಧಿಯ ಬಳಿಕ ಜೋಡಣೆ ಆಗದಿದ್ದರೆ ಮೊದಲು ಕಾರ್ಡ್​ ನಿಷ್ಕ್ರಿಯಗೊಳ್ಳುತ್ತದೆ. ಇದೇ ಕಾರ್ಡ್​ ಅನ್ನು ವಹಿವಾಟಿಗೆ ಬಳಿಸಿಕೊಂಡರೆ ಬಳಕೆದಾರರು 10,000 ರೂ.ವರೆಗೂ ದಂಡ ಕಟ್ಟಬೇಕಾಗುತ್ತದೆ ಎಂದು ಐಟಿ ಇಲಾಖೆ ಕಠಿಣ ಎಚ್ಚರಿಕೆಯ ಸಂದೇಶ ರವಾನಿಸಿತ್ತು. ಒಮ್ಮೆ ಪಾನ್ ಕಾರ್ಡ್ ನಿಷ್ಕ್ರಿಯಗೊಂಡರೆ ಅಗತ್ಯವಿರುವ ವ್ಯವಹಾರಗಳು ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಕಾರ್ಡ್​ ತನ್ನ ಮೌಲ್ಯ ಕಳೆದುಕೊಳ್ಳುವ ಮುನ್ನ 12 ಸಂಖ್ಯೆ ಒಳಗೊಂಡ ವಿಶಿಷ್ಟ ಗುರುತಿನ ಚೀಟಿಯ ಆಧಾರ್ ಅನ್ನು ಬ್ಯಾಂಕ್‌ ಖಾತೆಯ ಶಾಶ್ವತ ಖಾತೆ ಸಂಖ್ಯೆ (ಪ್ಯಾನ್‌ ಕಾರ್ಡ್‌) ಜೋಡಣೆಯ ವಿಧಾನ ಇಲ್ಲಿದೆ.

ಲಿಂಕ್‌ ಆಗಿದೆಯೇ ಎಂಬುದು ತಿಳಿಯುವುದು ಹೇಗೆ? ಆದಾಯ ತೆರಿಗೆ ಇಲಾಖೆಯ ಅಧಿಕೃತ ಇ-ಫೈಲಿಂಗ್ ವೆಬ್‌ಸೈಟ್‌ಗೆ ಭೇಟಿ ನೀಡಿ https://www.incometaxindiaefiling.gov.in ವೆಬ್‌ಸೈಟ್‌ನ ಹೋಮ್‌ಪೇಜ್‌ನ ಎಡಭಾಗದಲ್ಲಿರುವ Link Aadhaar ಎನ್ನುವುದನ್ನು ಕ್ಲಿಕ್‌ ಮಾಡಿ. ಆ ಪುಟದಲ್ಲಿ ‘ನೀವು ಈಗಾಗಲೇ ಲಿಂಕ್‌ ಮಾಡಿದ್ದರೆ, ಅದನ್ನು ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ಕಿಸಿ’ ಎಂಬ ಅರ್ಥದ ಸಂದೇಶ ಕಾಣಿಸುತ್ತದೆ. ಅಲ್ಲಿರುವ Link Aadhaar ಕ್ಲಿಕ್‌ ಮಾಡಿ. ನಿಮ್ಮ ಪ್ಯಾನ್‌ ಮತ್ತು ಆಧಾರ್‌ ಸಂಖ್ಯೆಯನ್ನು ಅಲ್ಲಿ ಕೊಟ್ಟಿರುವ ಖಾಲಿ ಬಾಕ್ಸ್‌ಗಳಲ್ಲಿ ಭರ್ತಿ ಮಾಡಿ. View Link Aadhaar Status ಕ್ಲಿಕ್‌ ಮಾಡಿ. ಆಗ ನಿಮ್ಮ ಕಾರ್ಡ್‌ ಲಿಂಕ್‌ ಆಗಿದೆಯೇ ಅಥವಾ ಇಲ್ಲವೇ ಎನ್ನುವ ಸಂದೇಶ ಕಾಣಿಸಲಿದೆ.

ಆಧಾರ್- ಪ್ಯಾನ್​ ಲಿಂಕ್ ಮಾಡುವುದು ಹೇಗೆ?
https://www.incometaxindiaefiling.gov.ing ಗೆ ಭೇಟಿ ನೀಡಿ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 11 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ