ಮದ್ಯ ಪ್ರೀಯರಿಗೆ ಬಿಗ್ ಶಾಕ್ ಅಬಕಾರಿ ಸುಂಕ ಹೆಚ್ಚಿಸಿದ ರಾಜ್ಯ ಸರಕಾರ

ಬೆಂಗಳೂರು: ಕೊರೋನಾ ಸಂಕಷ್ಟ ಮತ್ತು ಲಾಕ್‌ಡೌನ್ ನಿಂದಾಗಿ ಸಂಪನ್ಮೂಲ ಕ್ರೋಢೀಕರಣಕ್ಕೆ ಕರ್ನಾಟಕ ಸರ್ಕಾರ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಶೇ.11 ರಿಂದ ಶೇ.17ಕ್ಕೆ ಏರಿಸಿದೆ.

ಲಾಕ್‌ಡೌನ್‌ನಿಂದಾಗಿ ಕಳೆದ 45 ದಿನಗಳಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಆದರೆ, ಸೋಮವಾರದಿಂದ ರಾಷ್ಟ್ರದಾದ್ಯಂತ ಮದ್ಯದ ಮಾರಾಟಕ್ಕೆ ಅವಕಾಶಮಾಡಿಕೊಡಲಾಗಿದ್ದು ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಕಳೆದ ಎರಡು ದಿನದ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 1,000 ಕೋಟಿಯಷ್ಟು ಮದ್ಯ ಮಾರಾಟವಾಗಿರಬಹುದು ಎಂದು ಅಂದಾಜಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಆದಾಯವನ್ನು ಹೆಚ್ಚಿಸುವ ಸಲುವಾಗಿ ರಾಜ್ಯ ಸರ್ಕಾರ ಮತ್ತೆ ಅಬಕಾರಿ ಸುಂಕವನ್ನು ಹೆಚ್ಚಿಸಿದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ಅಬಕಾರಿ ಸುಂಕು ಶೇ.5 ರಷ್ಟಿತ್ತು. ಆದರೆ, ಕಳೆದ ಸಾಲಿನ ಬಜೆಟ್‌ ವೇಳೆ ಈ ಸುಂಕವನ್ನು ಶೇ.11ಕ್ಕೆ ಏರಿಸಲಾಗಿತ್ತು. ಆದರೆ, ಇಂದು ರಾಜ್ಯ ಸರ್ಕಾರ ಮತ್ತೊಮ್ಮೆ ಅಬಕಾರಿ ಸುಂಕವನ್ನು ಶೇ.6 ರಷ್ಟು ಏರಿಸಿದೆ. ಪರಿಣಾಮ ರಾಜ್ಯದಲ್ಲಿ ಒಟ್ಟಾರೆ ಅಬಕಾರಿ ಸುಂಕ ಶೇ.17ಕ್ಕೆ ಏರಿಕೆಯಾದಂತಾಗಿದೆ.

ಹೀಗಾಗಿ ಇನ್ನೂ ಎರಡು ಅಥವಾ ಮೂರು ದಿನಗಳಲ್ಲಿ ಮದ್ಯದ ಬಾಟಲ್‌ಗಳ ಮೇಲೆ ಹೊಸ ದರಗಳ ಲೇಬಲ್ ಗಳೊಂದಿಗೆ ಮಾರಾಟ ಆರಂಭವಾಗಲಿದೆ. ಆದರೆ, ಮೊದಲೇ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಮದ್ಯಪ್ರಿಯರು ದಿಢೀರ್ ಅಬಕಾರಿ ಸುಂಕ ಏರಿಕೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಲಿದ್ದಾರೆ ಎನ್ನಲಾಗುತ್ತಿದೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ