7ಹೆಜ್ಜೆ ಇಡಲು 17 ಸೂತ್ರ ಪಾಲಿಸುವಂತೆ ರಾಜ್ಯ ಸರಕಾರದ ಮಹತ್ತರದ ಆದೇಶ

ಬೆಂಗಳೂರು: ಕೊರೋನಾ ಮಹಾಮಾರಿಯಿಂದಾಗಿ ದೇಶಾದ್ಯಂತ ಲಾಕ್ ಡೌನ್ ಮುಂದುವರಿದಿದ್ದು ರಾಜ್ಯಾದ್ಯಂತ ಮದುವೆ ಸಮಾರಂಭ, ಕಾರ್ಯಕ್ರಮಗಳು ಕೂಡ ಸರ್ಕಾರದ ನಿಯಮಾನುಸಾರವೇ ನಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಲವು ಮಾರ್ಗಸೂಚಿಯನ್ನು ರೂಪಿಸಿ ಕಡ್ಡಾಯವಾಗಿ ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ. ಈಗಾಗಲೇ, ಮದುವೆ ಸಮಾರಂಭದಲ್ಲಿ ಐವತ್ತು ಜನರು ಮೀರಿ ಭಾಗವಹಿಸುವಂತಿಲ್ಲ ಎನ್ನುವ ಆದೇಶವನ್ನು ಸರಕಾರ ಹೊರಡಿಸಿದೆ. ಜೊತೆಗೆ, ಸಾಮಾಜಿಕ ಅಂತರ ಕಾಪಾಡಿಕೊಂಡು ಬರುವುದು ಮತ್ತು ಮಾಸ್ಕ್ ಧರಿಸುವುದನ್ನೂ ಈ ಹಿಂದೆಯೇ ಖಡ್ಡಾಯ ಮಾಡಲಾಗಿತ್ತು.

ಯಾವುದೇ ಮದುವೆಗಳಿಗೆ ಸ್ಥಳೀಯ ಆಡಳಿತ ಸಂಸ್ಥೆಗಳಿಂದ ಅನುಮತಿ ಕಡ್ಡಾಯ.

ಒಂದು ಮದುವೆಯಲ್ಲಿ 50 ಜನಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ

ಗರ್ಭಿಣಿಯರು, 65 ವರ್ಷ ಮೇಲ್ಪಟ್ಟ ವೃದ್ಧರು, 10 ವರ್ಷದೊಳಗಿನ ಮಕ್ಕಳಿಗೆ ನಿರ್ಬಂಧ.

ಕಂಟೈನ್ಮೆಂಟ್ ವಲಯದವರಿಗೆ ಪ್ರವೇಶ ನಿರ್ಬಂಧ.

ಸೂಕ್ತ ಸಾರ್ವಜನಿಕ ಸ್ಥಳ ಮತ್ತು ನೈಸರ್ಗಿಕ ವಾತಾವರಣ ಇರುವೆಡೆ ಮಾತ್ರ ಮದುವೆಗೆ ಅವಕಾಶ

ಮದುವೆಗಳಲ್ಲಿ ಹವಾನಿಯಂತ್ರಿತಗಳನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.

ಮದುವೆಗಳಲ್ಲಿ ಒಬ್ಬ ನೋಡಲ್ ಅಧಿಕಾರಿ ಇರುವುದು ಕಡ್ಡಾಯವಾಗಿದೆ

ಮದುವೆಗೆ ಬಂದವರ ಲಿಸ್ಟ್ ಮಾಡಿ ನೋಡಲ್ ಅಧಿಕಾರಿಗೆ ಸಲ್ಲಿಸುವುದು ಕಡ್ಡಾಯ

ಮದುವೆಗೆ ಬರುವವರು ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಿಕೊಳ್ಳಬೇಕು

ಮದುವೆ ಸ್ಥಳಗಳ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸುವುದು ಕಡ್ಡಾಯ.

ಮದುವೆಗೆ ಬರುವವರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.

ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ. 99.5 ಸೆಲ್ಸಿಯಸ್ ಉಷ್ಣತೆ, ಜ್ವರ, ಕೆಮ್ಮು, ನೆಗಡಿ, ಉಸಿರಾಟ ಸಮಸ್ಯೆ ಇರೋರನ್ನು ನಿರ್ಬಂಧಿಸಿ ಅವರನ್ನು ಆಸ್ಪತ್ರೆಗೆ ಕಳಿಸಬೇಕು.

ಒಂದು ಮೀಟರ್ ವೈಯುಕ್ತಿಕ ಅಂತರ ಕಾಪಾಡಿಕೊಳ್ಳಬೇಕು.

ಸಾಬೂನಿನಲ್ಲಿ ಹ್ಯಾಂಡ್ ವಾಷ್ ಗೆ ವ್ಯವಸ್ಥೆ ಮಾಡಿರಬೇಕು

ಸಾರ್ವಜನಿಕವಾಗಿ ಉಗುಳುವಂತಿಲ್ಲ.

ಮದುವೆ ಸ್ಥಳಗಳಲ್ಲಿ ಸ್ವಚ್ಛತೆಯನ್ನ ಕಾಪಾಡಬೇಕು.

ಮದ್ಯ, ಪಾನ್, ಗುಟ್ಕಾ, ತಂಬಾಕು ಸೇವನೆ ನಿಷಿದ್ಧ.

ಲಾಕ್ ಡೌನ್ ಅವಧಿ ಮುಗಿಯುತ್ತಾ ಬಂದರೂ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ನಡುವೆ ಮೇ 18ರಿಂದ ಲಾಕ್ ಡೌನ್ ನಲ್ಲಿ ಇನ್ನಷ್ಟು ಸಡಿಲಿಕೆ ಆಗಲಿದೆ. ಇದೇ ವೇಳೆ ರಾಜ್ಯದ ವಿವಿಧೆಡೆಗಳಲ್ಲಿ ಮದುವೆ ಸೀಜನ್ ಕೂಡ ಆರಂಭವಾಗಿದ್ದು, ಕೊರೊನಾ ಸೋಂಕು ನಿಯಂತ್ರಿಸುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಪ್ತಪದಿಗೆ 17 ಮಾರ್ಗಸೂಚಿಯನ್ನು ರೂಪಿಸಿ, ಮದುವೆಯಲ್ಲಿಯೂ ಸಾಮಾಜಿಕ ಅಂತರ ಕಡ್ಡಾಯವಾಗಿ ಹೇಗೆ ಕಾಯ್ದುಕೊಳ್ಳಬೇಕು ಎಂಬ ಬಗ್ಗೆ ನಿಯಮಗಳು ಜಾರಿ ಮಾಡಿದೆ.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ