7ಹೆಜ್ಜೆ ಇಡಲು 17 ಸೂತ್ರ ಪಾಲಿಸುವಂತೆ ರಾಜ್ಯ ಸರಕಾರದ ಮಹತ್ತರದ ಆದೇಶ

ಬೆಂಗಳೂರು: ಕೊರೋನಾ ಮಹಾಮಾರಿಯಿಂದಾಗಿ ದೇಶಾದ್ಯಂತ ಲಾಕ್ ಡೌನ್ ಮುಂದುವರಿದಿದ್ದು ರಾಜ್ಯಾದ್ಯಂತ ಮದುವೆ ಸಮಾರಂಭ, ಕಾರ್ಯಕ್ರಮಗಳು ಕೂಡ ಸರ್ಕಾರದ ನಿಯಮಾನುಸಾರವೇ ನಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಲವು ಮಾರ್ಗಸೂಚಿಯನ್ನು ರೂಪಿಸಿ ಕಡ್ಡಾಯವಾಗಿ ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ. ಈಗಾಗಲೇ, ಮದುವೆ ಸಮಾರಂಭದಲ್ಲಿ ಐವತ್ತು ಜನರು ಮೀರಿ ಭಾಗವಹಿಸುವಂತಿಲ್ಲ ಎನ್ನುವ ಆದೇಶವನ್ನು ಸರಕಾರ ಹೊರಡಿಸಿದೆ. ಜೊತೆಗೆ, ಸಾಮಾಜಿಕ ಅಂತರ ಕಾಪಾಡಿಕೊಂಡು ಬರುವುದು ಮತ್ತು ಮಾಸ್ಕ್ ಧರಿಸುವುದನ್ನೂ ಈ ಹಿಂದೆಯೇ ಖಡ್ಡಾಯ ಮಾಡಲಾಗಿತ್ತು.

ಯಾವುದೇ ಮದುವೆಗಳಿಗೆ ಸ್ಥಳೀಯ ಆಡಳಿತ ಸಂಸ್ಥೆಗಳಿಂದ ಅನುಮತಿ ಕಡ್ಡಾಯ.

ಒಂದು ಮದುವೆಯಲ್ಲಿ 50 ಜನಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ

ಗರ್ಭಿಣಿಯರು, 65 ವರ್ಷ ಮೇಲ್ಪಟ್ಟ ವೃದ್ಧರು, 10 ವರ್ಷದೊಳಗಿನ ಮಕ್ಕಳಿಗೆ ನಿರ್ಬಂಧ.

ಕಂಟೈನ್ಮೆಂಟ್ ವಲಯದವರಿಗೆ ಪ್ರವೇಶ ನಿರ್ಬಂಧ.

ಸೂಕ್ತ ಸಾರ್ವಜನಿಕ ಸ್ಥಳ ಮತ್ತು ನೈಸರ್ಗಿಕ ವಾತಾವರಣ ಇರುವೆಡೆ ಮಾತ್ರ ಮದುವೆಗೆ ಅವಕಾಶ

ಮದುವೆಗಳಲ್ಲಿ ಹವಾನಿಯಂತ್ರಿತಗಳನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.

ಮದುವೆಗಳಲ್ಲಿ ಒಬ್ಬ ನೋಡಲ್ ಅಧಿಕಾರಿ ಇರುವುದು ಕಡ್ಡಾಯವಾಗಿದೆ

ಮದುವೆಗೆ ಬಂದವರ ಲಿಸ್ಟ್ ಮಾಡಿ ನೋಡಲ್ ಅಧಿಕಾರಿಗೆ ಸಲ್ಲಿಸುವುದು ಕಡ್ಡಾಯ

ಮದುವೆಗೆ ಬರುವವರು ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಿಕೊಳ್ಳಬೇಕು

ಮದುವೆ ಸ್ಥಳಗಳ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸುವುದು ಕಡ್ಡಾಯ.

ಮದುವೆಗೆ ಬರುವವರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.

ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ. 99.5 ಸೆಲ್ಸಿಯಸ್ ಉಷ್ಣತೆ, ಜ್ವರ, ಕೆಮ್ಮು, ನೆಗಡಿ, ಉಸಿರಾಟ ಸಮಸ್ಯೆ ಇರೋರನ್ನು ನಿರ್ಬಂಧಿಸಿ ಅವರನ್ನು ಆಸ್ಪತ್ರೆಗೆ ಕಳಿಸಬೇಕು.

ಒಂದು ಮೀಟರ್ ವೈಯುಕ್ತಿಕ ಅಂತರ ಕಾಪಾಡಿಕೊಳ್ಳಬೇಕು.

ಸಾಬೂನಿನಲ್ಲಿ ಹ್ಯಾಂಡ್ ವಾಷ್ ಗೆ ವ್ಯವಸ್ಥೆ ಮಾಡಿರಬೇಕು

ಸಾರ್ವಜನಿಕವಾಗಿ ಉಗುಳುವಂತಿಲ್ಲ.

ಮದುವೆ ಸ್ಥಳಗಳಲ್ಲಿ ಸ್ವಚ್ಛತೆಯನ್ನ ಕಾಪಾಡಬೇಕು.

ಮದ್ಯ, ಪಾನ್, ಗುಟ್ಕಾ, ತಂಬಾಕು ಸೇವನೆ ನಿಷಿದ್ಧ.

ಲಾಕ್ ಡೌನ್ ಅವಧಿ ಮುಗಿಯುತ್ತಾ ಬಂದರೂ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ನಡುವೆ ಮೇ 18ರಿಂದ ಲಾಕ್ ಡೌನ್ ನಲ್ಲಿ ಇನ್ನಷ್ಟು ಸಡಿಲಿಕೆ ಆಗಲಿದೆ. ಇದೇ ವೇಳೆ ರಾಜ್ಯದ ವಿವಿಧೆಡೆಗಳಲ್ಲಿ ಮದುವೆ ಸೀಜನ್ ಕೂಡ ಆರಂಭವಾಗಿದ್ದು, ಕೊರೊನಾ ಸೋಂಕು ನಿಯಂತ್ರಿಸುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಪ್ತಪದಿಗೆ 17 ಮಾರ್ಗಸೂಚಿಯನ್ನು ರೂಪಿಸಿ, ಮದುವೆಯಲ್ಲಿಯೂ ಸಾಮಾಜಿಕ ಅಂತರ ಕಡ್ಡಾಯವಾಗಿ ಹೇಗೆ ಕಾಯ್ದುಕೊಳ್ಳಬೇಕು ಎಂಬ ಬಗ್ಗೆ ನಿಯಮಗಳು ಜಾರಿ ಮಾಡಿದೆ.

Spread the love
  • Related Posts

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.…

    Spread the love

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    You Missed

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 2 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 8 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 9 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 20 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 30 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 14 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ