SSLC ಮತ್ತುPUC ಪರೀಕ್ಷೆ ನಡೆಸಲು ದಿನ ನಿಗದಿಪಡಿಸಿದ ರಾಜ್ಯ ಸರಕಾರ

ಬೆಂಗಳೂರು : ಕೊರೋನಾ ಸಾಂಕ್ರಾಮಿಕ ರೋಗ ಹರಡದಂತೆ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆ ಮುಂದೂಡಲ್ಪಟ್ಟಿದ PUC ಹಾಗೂ SSLC ನಡೆಸಲು ಮುಂದಾಗಿದ್ದುPUC ಪರೀಕ್ಷೆಯನ್ನು ಜೂನ್18 ಹಾಗೂ SSLC ಪರೀಕ್ಷೆಯನ್ನು ಜೂನ್ 25ರಿಂದ ಜುಲೈ.4ವರೆಗೆ ನಡೆಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿಯ ಇಂಗ್ಲೀಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನದ ಅಂತರವಿರಲಿದೆ. ಒಟ್ಟಾರೆ ಎಲ್ಲಾ ಪರೀಕ್ಷೆಗಳು 10 ದಿನದಲ್ಲಿ ಮುಗಿಯಲಿದೆ ಎಂದರು. ರಾಜ್ಯದಲ್ಲಿ 2879 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಯಲಿದೆ. ಈ ಕುರಿತು ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪ್ರೌಢ ಶಿಕ್ಷಣ ಸಚಿವಸುರೇಶ್ ಕುಮಾರ್, ಕೇಂದ್ರದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಿಸಲಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಸ್ಯಾನಿಟೈಸರ್ ಬಳಸಬೇಕು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಬೇರೆ ಕಡೆ ಪರೀಕ್ಷೆ ಬರೆಯಲು ಅವಕಾಶ ಮಾಡುತ್ತೇವೆ. ಪರೀಕ್ಷೆ ಆರಂಭಕ್ಕೂ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುತ್ತೇವೆ.

ಮೊರಾರ್ಜಿ ದೇಸಾಯಿ ಶಾಲೆ, ಎಸ್ ಸಿ, ಎಸ್ ಟಿ ಹಾಸ್ಟಲ್ ಗಳನ್ನು ಕ್ವಾರಂಟೈನ್ ಮಾಡಿರುವ ಕಾರಣ ಅಲ್ಲಿನ ವಿದ್ಯಾರ್ಥಿಗಳು ಹತ್ತಿರದ ಶಾಲೆಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಗುವುದು. ವಲಸೆ ಕಾರ್ಮಿಕರ ಮಕ್ಕಳಿಗೆ ಕೂಡಾ ಇದೇ ರೀತಿ ವ್ಯವಸ್ಥೆ ಮಾಡಲಾಗುವುದು. ವಲಸೆ ಕಾರ್ಮಿಕರ, ಹಾಸ್ಟೆಲ್ ವಿದ್ಯಾರ್ಥಿಗಳ ಮಕ್ಕಳಿಗೆ ಪರೀಕ್ಷೆ ಬರೆಯಲಿ ಪರೀಕ್ಷಾ ಕೇಂದ್ರದ ಬದಲಾವಣೆಗೆ ಅವಕಾಶವಿದೆ ಈ ಬಗ್ಗೆ ಮೇ 25ರ ಮೊದಲಾಗಿ ಸಂಬಂಧಿಸಿದ ಶಿಕ್ಷಣಾಧಿಕಾರಿಯವರಲ್ಲಿ ನೊಂದಾವಣೆ ಮಾಡುವುದು.

ಡಿಡಿ ಚಂದನದಲ್ಲಿ ಮಾದರಿ ಪ್ರಶ್ನೆ ಪ್ರತ್ರಿಕೆಗೆ ಉತ್ತರ ನೀಡುವ ವಿಶೇಷ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ