ಬೆಳ್ತಂಗಡಿ: ತಾಲೂಕಿನ ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ, ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಮಾತೃಸಂಗಮ, ಕಾರ್ಯಕ್ರಮ ನೆರವೇರಿತು. ಸಾಹಿತಿ, ಆಧ್ಯಾತ್ಮಿಕ ಚಿಂತಕಿ ಡಾ.ವೀಣಾ ಬನ್ನಂಜೆ ಧಾರ್ಮಿಕ ಉಪನ್ಯಾಸದಲ್ಲಿ ಮಾತನಾಡಿ ‘ಹೆಣ್ಣಿನಲ್ಲಿ ಆದ್ರ್ರತೆ, ಭಕ್ತಿ, ಸಮರ್ಪಣೆಯ ಭಾವವಿದೆ. ಪ್ರಕೃತಿಯಂತೆ ಎಲ್ಲವನ್ನು ಸ್ವೀಕರಿಸುವ ಹೆಣ್ಣು ತ್ಯಾಗಮಯಿ. ಹೆಣ್ಣಿನ ಭಕ್ತಿ ಹಾಗೂ ಶಕ್ತಿಗೆ ವಿಶೇಷ ಮಹತ್ವವಿದೆ. ಧರ್ಮದ ಬಗ್ಗೆ ನಮ್ಮಲ್ಲಿ ಜಾಗೃತಿ ಮೂಡಿದರೆ ನಮ್ಮ ಸಂಸ್ಕೃತಿ ಪರಂಪರೆಗೆ ಬರುತ್ತದೆ. ದೇವರೆದರು ಶುದ್ಧವಾಗಿದ್ದು ಹೊರಗೆ ಲಂಪಟನ ತೋರಿದರೆ ಅದು ಅಧರ್ಮವಾಗುತ್ತದೆ. ಅಂತರಂಗದ ಧರ್ಮ ವನ್ನು ಪಾಲಿಸಿದರೆ ಅದೇ ನಮಗೆ ಶಕ್ತಿ ಹಾಗೂ ದಾರಿ ದೀಪ’ ಎಂದರು.ಮನೋರಮಾ ಭಟ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಮಹಿಳೆ ಜಾನಕಿ ರಾಮಯ್ಯ ಗೌಡ ಕಾರ್ಯಕ್ರಮ ಉದ್ಘಾಟಿಸಿದರು.ಧರ್ಮಸ್ಥಳ ಗ್ರಾಪಂ ಅಧ್ಯಕ್ಷೆ ಜಯಾ ಮೋನಪ್ಪ ಗೌಡ, ಉಜಿರೆ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಮುಂಡಾಜೆ ಗ್ರಾಪಂ ಆಧ್ಯಕ್ಷೆ ರಂಜಿನಿ, ರವಿ, ಕಲಂಜ ಗ್ರಾಪಂ ಉಪಾಧ್ಯಕ್ಷೆ ವಿಮಲಾ ಹಾಗೂ ನಳಿನಾಕ್ಷಿ ಹೊಳ್ಳ ಉಪಸ್ಥಿತರಿದ್ದರು.ಮಹಿಳಾ ಸಮಿತಿಯ ಸಂಚಾಲಕಿ ಚಿತ್ರಾ ಭಡೆ ಸ್ವಾಗತಿಸಿದರು. ಉಪನ್ಯಾಸಕಿ ಸುಮಲತಾ ಕಾರ್ಯಕ್ರಮ ನಿರೂಪಿಸಿದರು. ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ, ಲಲಿತಾ ಸಹಸ್ರನಾಮ ಪಠಣ, ಭಜನೆ ಮೊದಲಾದ ಕಾರ್ಯಕ್ರಮಗಳು ಜರುಗಿದವು. ಮುಂಡಾಜೆ, ಚಾರ್ಮಾಡಿ, ಮಿತ್ತಬಾಗಿಲು, ಕಡಿರುದ್ಯಾವರ ಗ್ರಾಮಸ್ಥರಿಂದ ಹೊರೆ ಕಾಣಿಕೆ ಸಮರ್ಪಣೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಶಾಸ್ತ್ರೀಯ ಸಂಗೀತ, ಹರಿಕಥೆ ಹಾಗೂ ನೃತ್ಯ ವೈವಿಧ್ಯ ಕಾರ್ಯಕ್ರಮಗಳು ನಡೆದವು.
ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ
ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…