ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು’ ಎಂಬ ತತ್ವವನ್ನು ಇಡೀ ಜಗತ್ತಿಗೆ ಸಾರಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳ 166ನೇ ಜಯಂತಿ

ನಮ್ಮ ಭಾರತ ದೇಶವು ವೇದಧರ್ಮಗಳ ತವರೂರು. ಮೌಲ್ಯಯುತ ಸಂಸ್ಕೃತಿಯ ನೆಲೆ ಬೀಡು. ಇಲ್ಲಿ ಹಲವಾರು ಸಾಧುಸಂತರು, ಪುಣ್ಯ ಪುರುಷರು, ದಾರ್ಶನಿಕರು, ಸಮಾಜ ಸುಧಾರಕರು ಜನ್ಮವೆತ್ತಿದ್ದಾರೆ. ಭಾರತ ಮಾತೆಯು ತನ್ನ ಪುಣ್ಯ ಗರ್ಭದಲ್ಲಿ ಅಸಂಖ್ಯಾತ ಅವತಾರ ಪುರುಷರಿಗೆ ಜನ್ಮ ನೀಡಿ ಸಾಧುಸಂತರನ್ನು, ಪುಣ್ಯ ಪುರುಷರನ್ನು ಸಂರಕ್ಷಿಸಿ ಭಾರತೀಯ ಸಂಸ್ಕೃತಿಯನ್ನು ಬೆಳಗಿಸಿದೆ. ಸತ್ಯ, ಧರ್ಮ, ನ್ಯಾಯ, ನೀತಿ, ಅಹಿಂಸೆ, ಸದಾಚಾರಗಳ ಮೂಲತತ್ವ, ಜನಮನದಲ್ಲಿ ಮೂಡಿಸಿದೆ. `ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು’ ಎಂಬ ತತ್ವವನ್ನು ಇಡೀ ಜಗತ್ತಿಗೆ ಸಾರಿ ಬಡವರ, ದಿನ ದಲಿತರ, ಶೋಷಿತರ, ನೊಂದವರ ಕಣ್ಣೀರನ್ನು ಒರಸಿ, ಎಲ್ಲರ ಕಣ್ಣ ತೆರೆಸಿ ಅವತಾರ ಪುರುಷ ಎನಿಸಿಕೊಂಡ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳ ಜಯಂತಿಯ ಶುಭಾಶಯಗಳು.

ಚತುರ್ವರ್ಣ ವ್ಯವಸ್ಥೆಯು ಭಾರತದ ಸಾಮಾಜಿಕ ಮತ್ತು ಅರ್ಥ ವ್ಯವಸ್ಥೆಗೆ ಬಾಧಕವೆಂದು ಕಂಡಾಗ ಇವುಗಳ ನಿರ್ಮೂಲನೆಗಾಗಿ ಮತ್ತು ಏಕತೆಗಾಗಿ ದೇಶಾದ್ಯಂತ ಒಂದು ಚಳವಳಿಯು ಉಂಟಾಯಿತು. ಮಾನವನಲ್ಲಿರುವಂತಹ ಜ್ಞಾನವೇ ಆತನ ಶಕ್ತಿಯಾಗಬೇಕು ಹೊರತು ಆತನ ಜಾತಿಯಲ್ಲ ಎಂಬ ಅರಿವನ್ನು ಭಾರತದಾದ್ಯಂತ ಪಸರಿಸಿದ ಮಹಾನ್ ಶಕ್ತಿ ಶ್ರೀ ನಾರಾಯಣ ಗುರುಗಳು.

ಒಂದೇ ಜಾತಿ ಒಂದೇ ಮತ ಒಂದೇ ದೇವರು: ವರ್ಣ ತಾರತಮ್ಯದ ಬಲಿಷ್ಠ ಬಾಹುಗಳು ಅಪ್ಪಿಕೊಂಡ ಕಾಲದಲ್ಲಿ ವಿವಿಧ ಸ್ತರಗಳಲ್ಲಿ ಹೋಳಾಗುತ್ತಿದ್ದ ಕಾಲಘಟ್ಟದಲ್ಲಿ, ಅಸ್ಪೃಶ್ಯತೆ, ಸ್ತ್ರೀ ಶೋಷಣೆ, ಜಾತಿ ಭೇದ, ಲಿಂಗ ಭೇದ ಎಂಬ ಸಾಮಾಜಿಕ ಪಿಡುಗುಗಳು ತಾಂಡವವಾಡುತ್ತಿದ್ದ ಸಂದರ್ಭದಲ್ಲಿ ಜನರಲ್ಲಿ ಐಕ್ಯಮತವನ್ನು ಮೂಡಿಸಿ ಎಲ್ಲ ವರ್ಣದವರನ್ನು ಒಂದೆಡೆ ಸೇರುವಂತೆ ಪ್ರೇರಣೆಯಾದರು. ಹಿಂದೂ ಧರ್ಮದ ಪುನರುಜ್ಜೀವನವನ್ನು ಎಲ್ಲ ಜಾತಿಯ ಜನರು ಒಂದೆಡೆ ಸೇರಿ ದೇವರನ್ನು ಪೂಜಿಸುವುದು, ಸಾಮಾಜಿಕ ಸಮಾನತೆ ಮತ್ತು ಜಾಗತಿಕವಾಗಿ ಸಹೋದರತ್ವವನ್ನು ಬೆಳೆಸಲು ಶ್ರೀ ಗುರುಗಳು ಪ್ರೇರಣೆಯಾದರು. ಅದ್ವೈತಾಚಾರ್ಯ ಆದಿಶಂಕರರ ದೇವರೊಬ್ಬನೇ ನಾಮ ಹಲವು ಎಂಬ ತತ್ವಗಳನ್ನು ಒಂದೇ ಜಾತಿ ಒಂದೇ ಮತ ಒಂದೇ ದೇವರು(ಒರು ಜಾತಿ ಒರು ಮತಂ ಒರು ದೈವಂ, ಮನುಷ್ಯನು) ಎಂಬ ಘೋಷವಾಕ್ಯದೊಂದಿಗೆ ಸಂತನೆನೆಸಿಕೊಂಡರು.

1855 ಆಗಸ್ಟ್ 28ರಂದು ಆಗಿನ ತಿರುವಾಂಕೂರು ಈಗಿನ ತಿರುವನಂತಪುರದ ಚೆಂಪಳಾಂತಿಯಲ್ಲಿ ‘ಈಳವ’ ಕುಟುಂಬದಲ್ಲಿ ಮದನ್ ಆಸನ್ ಮತ್ತು ಕುಟ್ಟಿಯಮ್ಮ ದಂಪತಿಗಳ ಪುತ್ರರಾಗಿ ಜನಿಸಿದರು. ಪೂರ್ವ ಶಿಕ್ಷಣವನ್ನು ಚೆಂಪಳಾಂತಿ ಮೂತಪಿಳ್ಳೈ ಅವರಲ್ಲಿ ಪಡೆದರು, ಈ ಸಮಯದಲ್ಲಿ ತಾಯಿಯನ್ನು ಅಗಲಿದರು. ತನ್ನ 21ನೇ ವಯಸ್ಸಿನಲ್ಲಿ ತಿರುವಾಂಕೂರಿನ ರಾಜಧಾನಿಗೆ ಆಗಮಿಸಿದ ನಾರಾಯಣರು ರಾಮನ್ ಪಿಳ್ಳೆ ಆಸನ್ ಇವರಿಂದ ಸಂಸ್ಕೃತ ಅಧ್ಯಯನವನ್ನು ಆರಂಭಿಸಿದರು, ಉಪನಿಷತ್ತು, ಸಾಹಿತ್ಯ, ತರ್ಕಶಾಸ್ತ್ರ ವಾಕ್ಚಾತುರ್ಯ ಪಾರಂಗತನಾಗಿ ತನ್ನ ಹಳ್ಳಿಗೆ ಹಿಂತಿರುಗಿದ ಇವರು ಹಳ್ಳಿಯಲ್ಲಿ ಸ್ಥಳೀಯ ಮಕ್ಕಳಿಗೆ ವಿದ್ಯಾಭ್ಯಾಸವನ್ನು ನೀಡಲು ಆರಂಭಿಸಿದರು. ವೈವಾಹಿಕ ಜೀವನವನ್ನು ಆರಂಭಿಸಿದ ಇವರು ಸಾಂಸಾರಿಕ ಜೀವನದಿಂದ ವಿಮುಖರಾಗಿ ಸಾಮಾಜಿಕ ಜೀವನ ಮತ್ತು ಸಮಾಜದ ಪುನರ್ರಚನೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟರು.

ಶ್ರೀ ನಾರಾಯಣ ಗುರು ಮತ್ತು ಧಾರ್ಮಿಕ ಕ್ರಾಂತಿ:

ಮನೆಯನ್ನು ತ್ಯಜಿಸಿ ಸಂಚಾರಿಯಾದ ಗುರುಗಳು ಕೇರಳ ಮತ್ತು ತಮಿಳುನಾಡಿನಾದ್ಯಂತ ಸಂಚರಿಸಿದರು. ಸಾಮಾಜಿಕ ಮತ್ತು ಧಾರ್ಮಿಕ ಕ್ರಾಂತಿಯನ್ನು ಮಾಡಿದ ಚಟ್ಟಂಬಿ ಸ್ವಾಮಿಕಳ್ ರನ್ನು ಭೇಟಿ ಮಾಡಿದ ಗುರುಗಳು ಮುಂದೆ ಅಯ್ಯಾವುಸ್ವಾಮಿಕಳ್ ಇವರಿಂದ ಧ್ಯಾನ ಮತ್ತು ಯೋಗವನ್ನು ಕಲಿತರು. ತಿರುವಾಂಕೂರಿನ ಅರಿವುಪ್ಪುರಂನಲ್ಲಿ ನದಿನೀರಿನಿಂದ ತೆಗೆದ ಶಿಲೆಯನ್ನೇ ಶಿವನೆಂದು ಪೂಜಿಸಿದರೆ, ಮುಂದೆ ಇದು ‘ಅರಿವುಪ್ಪುರಂ ಪ್ರತಿಷ್ಟೆ’ ಎಂದು ಜನಜನಿತಗೊಂಡಿತು. ಇದನ್ನು ಪ್ರಶ್ನಿಸಿದ ಮೇಲ್ವರ್ಗದ ಜನರಿಗೆ ‘ಇವನು ಬ್ರಾಹ್ಮಣ ಶಿವನಲ್ಲ, ಇವನು ಈಳವ ಶಿವ’ ನೆಂದು ಸೆಡ್ಡುಹೊಡೆದರು, ಮುಂದೆ ಇದು ಜಾತೀಯವನ್ನು ವಿರೋಧಿಸುವ ಮಹಾ ಘೋಷಣೆಯಾಯಿತು. ಆ ಸ್ಥಳದಲ್ಲಿ ಮುಂದೆ ದೇವಾಲಯ ನಿರ್ಮಾಣವಾಯಿತು, ಈಗಲೂ ಇದು ಪ್ರಸಿದ್ಧ ಪ್ರವಾಸಿತಾಣವಾಗಿದೆ. ಮುಂದೆ ಪದ್ಮನಾಭನ್ ಪಲ್ಪು ಇವರಿಂದ ಮೇ 15 1903 ರಲ್ಲಿ ‘ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ’ (SNDP Yogam) ಪ್ರಾರಂಭಗೊಂಡಿತು ಶ್ರೀ ನಾರಾಯಣ ಗುರುಗಳು ಇದರ ಸಂಸ್ಥಾಪಕ ಅಧ್ಯಕ್ಷರಾದರು.

ಧಾರ್ಮಿಕ ಸಾಧನೆ ಮತ್ತು ಸಾಹಿತ್ಯದ ಪ್ರೌಢಿಮೆ:

1904 ರಲ್ಲಿ ‘ಶಿವಗಿರಿ’ಯಲ್ಲಿ ಕೆಳ ವರ್ಗದ ಮಕ್ಕಳ ಉಚಿತ ಶಿಕ್ಷಣವನ್ನು ಆರಂಭಿಸಿದರು ಯಾವುದೇ ಜಾತಿ ಭೇದವಿಲ್ಲದೆ ಶೋಷಣೆಗೆ ಒಳಗಾದ, ಸಮಾಜದಲ್ಲಿ ತುಳಿತಕ್ಕೊಳಗಾದವರನ್ನು ಸಂತೈಸಿದರು. 1912ರಲ್ಲಿ ಶ್ರೀ ಶಾರದಾ ಮಠವನ್ನು ನಿರ್ಮಿಸಿದರು ಮತ್ತು ತ್ರಿಶೂರು,ಕಣ್ಣೂರು,ಅಂಚುತೆಂಗು, ತಲಶ್ಶೇರಿ, ಕೋಯಿಕೋಡ್, ಮಂಗಳೂರಿನಲ್ಲೂ ದೇವಾಲಯಗಳನ್ನು ಪ್ರತಿಷ್ಠಾಪಿಸಿದರು. ಪಕ್ಕದ ಸಿಲೋನ್(ಶ್ರೀ ಲಂಕಾ) ದೇಶದಲ್ಲಿ ಸಂಚರಿಸಿ ಅಲ್ಲಿಯೂ ಕೂಡ ಮಂದಿರವನ್ನು ನಿರ್ಮಿಸಿದ್ದಾರೆ.

ಗುರುಗಳು 45ಕ್ಕೂ ಅಧಿಕ ಧಾರ್ಮಿಕ ಸಾಹಿತ್ಯಗಳನ್ನು ಹೊರತಂದಿದ್ದಾರೆ. ಹೆಚ್ಚು ಮಲಯಾಳಿ ಭಾಷೆಯ ಸಾಹಿತ್ಯವನ್ನು ಹೊರತಂದರೆ ಸಂಸ್ಕೃತ ಮತ್ತು ತಮಿಳು ಭಾಷೆಯಲ್ಲಿಯೂ ಸಾಹಿತ್ಯಗಳನ್ನು ರಚಿಸಿದ್ದಾರೆ. ‘ಆತ್ಮೋಪದೇಶ ಶತಕಂ’ ಸ್ತೋತ್ರ ಮತ್ತು ‘ದೈವ ದಶಕಂ’ ಎಂಬ ದೇವರ ಸ್ತೋತ್ರಗಳನ್ನು ರಚಿಸಿದ್ದಾರೆ. ತಿರುವಳ್ಳುವರ್ ರಚಿಸಿರುವ ‘ತಿರುಕುರಳ್’ ‘ಈಶಾವಾಸ್ಯ ಉಪನಿಷತ್’ ಮತ್ತು ‘ಒಳಿವಿಲ್ ಒಡುಕಮ್’ ಭಾಷಾಂತರ ಗೊಳಿಸಿದ್ದಾರೆ.

ಈ ಕ್ರಾಂತಿಯು ಕ್ಷಿಪ್ರವಾಗಿ ಸಮಾಜದಲ್ಲಿ ಬದಲಾವಣೆಯನ್ನು ತರಲು ಸಹಾಯಕವಾಯಿತು. ಜನರ ಮಧ್ಯೆ ಒಮ್ಮತವನ್ನು ತರಲು ಗುರುಗಳು ನಡೆಸಿದ ಹೋರಾಟವು ಫಲವನ್ನು ನೀಡಿತು. ಇವರ ಈ ಹೋರಾಟದಲ್ಲಿ ಪಾಲ್ಗೊಂಡ ಹಲವರು ಅನುಯಾಯಿಗಳಾದರು. ಇಪ್ಪತ್ತರ ಶತಮಾನದಲ್ಲಿ ಭಾರತದಾದ್ಯಂತ ಸಾಮಾಜಿಕ ಬದಲಾವಣೆಗೆ ಹೆಚ್ಚು ಒತ್ತು ನೀಡಿ ಎಲ್ಲಾ ಜನರು ಒಗ್ಗೂಡುವಂತೆ ಮಾಡಿತು. ನಾರಾಯಣ ಗುರುಗಳ ಸಿದ್ಧಾಂತಕ್ಕೆ ಮಾರುಹೋಗಿ, ಸ್ವತ ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದ್ದ ಮಹಾತ್ಮ ಗಾಂಧೀಜಿಯವರು ಕೂಡಾ ಮಾರ್ಗದರ್ಶನವನ್ನು ಪಡೆದಿದ್ದರು.

Spread the love
  • Related Posts

    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    ಬೆಳ್ತಂಗಡಿ : ಸುಮಾರು 1000 ವರ್ಷಗಳ ಇತಿಹಾಸವಿರುವ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವವು 03/03/2026ರಿಂದ 11/03/2026 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಉಜಿರೆಯ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರರಾಗಿದ್ದ ಕೀರ್ತಿಶೇಷ ಯು. ವಿಜಯರಾಘವ ಪಡ್ಡೆಟ್ನಾಯರವರ ಕನಸು ಮತ್ತು ಸಂಕಲ್ಪದಂತೆ…

    Spread the love

    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಒಕ್ಕಲಿಗ ಗೌಡ ಸಂಘದ ವತಿಯಿಂದ 2026ನೇ ಸಾಲಿನ “ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ”ವನ್ನು ಫೆಬ್ರವರಿ 22ರಂದು ಭಾನುವಾರ ಬೆಳಿಗ್ಗೆ 8.30 ಗಂಟೆಯಿಂದ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಮುಂಭಾಗದಲ್ಲಿರುವ ಕಾಲಭೈರವ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ. ಸಮುದಾಯದ…

    Spread the love

    You Missed

    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    • By admin
    • February 23, 2026
    • 63 views
    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    • By admin
    • February 22, 2026
    • 143 views
    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

    • By admin
    • February 20, 2026
    • 62 views
    ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರು

    • By admin
    • February 20, 2026
    • 32 views
    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ  ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರು

    ದುಬೈನಲ್ಲಿ ಸಡಗರದ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ

    • By admin
    • February 20, 2026
    • 44 views
    ದುಬೈನಲ್ಲಿ ಸಡಗರದ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ

    ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಕಡಬ ಸಂತೋಷ್ ಪೋಲೀಸ್ ವಶಕ್ಕೆ

    • By admin
    • February 18, 2026
    • 506 views
    ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಕಡಬ ಸಂತೋಷ್  ಪೋಲೀಸ್ ವಶಕ್ಕೆ